Nobel Prize: ಸಾಹಿತ್ಯ ವಿಭಾಗದ ‘ನೊಬೆಲ್’ ಪ್ರಶಸ್ತಿ ಘೋಷಣೆ
ಜಗತ್ತಿನ ಶ್ರೀಮಂತ ಪ್ರಶಸ್ತಿ ಎಂಬ ಹೆಗ್ಗಳಿಕೆ ಪಡೆದಿರುವ 'ನೊಬೆಲ್' ಬಹುಮಾನ ಇದೀಗ ಮತ್ತೆ ಸದ್ದು ಮಾಡುತ್ತಿದೆ. ಈಗಾಗಲೇ ವೈದ್ಯಶಾಸ್ತ್ರ, ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ವಿಭಾಗದ ಪ್ರಶಸ್ತಿ ಘೋಷಣೆ ಆಗಿದ್ದು, ಈಗ ಸಾಹಿತ್ಯ ವಿಭಾಗದ ಪ್ರಶಸ್ತಿ ಘೋಷಿಸಲಾಗಿದೆ. ಹಾಗಾದರೆ ಈ ಬಾರಿಯ ಸಾಹಿತ್ಯ ವಿಭಾಗದ 'ನೊಬೆಲ್' ಪ್ರಶಸ್ತಿ ಪಡೆದಿದ್ದು ಯಾರು?
1901 ರಿಂದ ನೊಬೆಲ್ ಪ್ರಶಸ್ತಿ ನೀಡಲಾಗುತ್ತಿದೆ. ಸಂಶೋಧಕ ಆಲ್ಫ್ರೆಡ್ ನೊಬೆಲ್ ಆಶಯಕ್ಕೆ ಅನುಗುಣವಾಗಿ ಜಗತ್ತಿನ ಪ್ರಗತಿಗೆ ಕಾರಣವಾದ ಕಾರ್ಯಕ್ಕೆ ನೊಬೆಲ್ ಪ್ರಶಸ್ತಿ ನೀಡಲಾಗುತ್ತದೆ. ಈ ವರ್ಷ ಬಹುಮಾನ ವಿಜೇತರನ್ನು ಅಕ್ಟೋಬರ್ 2ರ ಸೋಮವಾರದಿಂದ ಅಕ್ಟೋಬರ್ 9ರ ತನಕ ಪ್ರತಿದಿನ ಪ್ರಕಟಿಸಲಾಗುತ್ತಿದೆ.

ಈ ವರ್ಷದ ನೊಬೆಲ್ ಪ್ರಶಸ್ತಿಗಳನ್ನು ಗೆಲ್ಲುವವರಿಗೆ 11 ಮಿಲಿಯನ್ ಸ್ವೀಡಿಷ್ ಕ್ರೌನ್ ಸಿಗಲಿದೆ, ಅಮೆರಿಕದ ಡಾಲರ್ನಲ್ಲಿ 9,86,000ನಷ್ಟು ಆಗುತ್ತದೆ. ಇದು ಹತ್ತಿರ ಹತ್ತಿರ ಸುಮಾರು 8 ಕೋಟಿಗೆ ಸಮವಾಗಿದೆ. ವೈದ್ಯಶಾಸ್ತ್ರ, ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ವಿಭಾಗದ ಬಳಿಕ ಈಗ ಸಾಹಿತ್ಯ ವಿಭಾಗದಲ್ಲಿನ ಪ್ರಶಸ್ತಿ ಪ್ರಕಟವಾಗಿದೆ.
ಯಾರಿಗೆ ಸಿಕ್ಕಿದೆ ಸಾಹಿತ್ಯದ 'ನೊಬೆಲ್'?
ಅಂದಹಾಗೆ ಈ ಬಾರಿ 'ನೊಬೆಲ್' ಸಾಹಿತ್ಯ ವಿಭಾಗದ ಪ್ರಶಸ್ತಿ ನಾರ್ವೆ ಮೂಲದ ಸಾಹಿತಿ ಜಾನ್ ಫೊಸ್ಸೆ ಅವರಿಗೆ ಸಿಕ್ಕಿದೆ. ಸಾಹಿತ್ಯ ಲೋಕದಲ್ಲಿ ಸಾಕಷ್ಟು ಹೆಸರು ಗಳಿಸಿದ್ದ ಜಾನ್ ಫೊಸ್ಸೆ ಅವರಿಗೆ 'ನೊಬೆಲ್' ಸಾಹಿತ್ಯ ವಿಭಾಗದ ಪ್ರಶಸ್ತಿ ಸಿಕ್ಕಿರುವುದು ಸಾಕಷ್ಟು ಸಂತಸ ತರಿಸಿದೆ. 2023ರ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ವಿಜ್ಞಾನಿಗಳಾದ ಪಿಯರೆ ಅಗೋಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆ್ಯನಿ ಎಲ್ ಹಲ್ಲಿಯರ್ ಪಡೆದಿದ್ದರು. ಹಾಗೇ ವೈದ್ಯಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ 'ಕೊರೊನಾ' ಲಸಿಕೆ ಕಂಡುಹಿಡಿಯಲು ಸಹಾಯ ಮಾಡಿದ್ದ ಕ್ಯಾಟಲಿನ್ ಕಾರಿಕೋ ಹಾಗೂ ಡ್ರೂ ವೈಸ್ಮನ್ ಅವರಿಗೆ ಸಿಕ್ಕಿತ್ತು. ಇದೀಗ ಸಾಹಿತ್ಯ ವಿಭಾಗದ ಪ್ರಶಸ್ತಿ ಕೂಡ ಪ್ರಕಟವಾಗಿದೆ.
ಸಂಶೋಧನಾ ಕ್ಷೇತ್ರದ ಆಸ್ಕರ್ ಅವಾರ್ಡ್ 'ನೊಬೆಲ್ ಪ್ರಶಸ್ತಿ'ಗೆ ಸಾಹಿತ್ಯ ವಿಭಾಗದ ಸಾಧಕ ಮುತ್ತಿಟ್ಟಿದ್ದಾರೆ. ಅದರಲ್ಲೂ ಈ ಬಾರಿಯ 'ನೊಬೆಲ್' ಬಹುಮಾನ 1 ಮಿಲಿಯನ್ ಸ್ವೀಡಿಷ್ ಕ್ರೌನ್ ಹೆಚ್ಚಾಗಿ ಸಿಗಲಿದೆ. ಈ ಮೂಲಕ ಸಂಶೋಧಕರಿಗೆ ಮತ್ತಷ್ಟು ಸಹಾಯ ಮಾಡಲಿದೆ. ಈ ರೀತಿ ಇನ್ನೂ 4 ದಿನ ಕಾಲ ವಿವಿಧ ಕ್ಷೇತ್ರಗಳ ಸಾಧಕರಿಗೆ ಇದೇ ರೀತಿ ನೊಬೆಲ್ ಪ್ರಶಸ್ತಿಯನ್ನು ಪ್ರಕಟಿಸಲಾಗುತ್ತದೆ. ಹೀಗಾಗಿ ಮುಂದೆ ಯಾರೆಲ್ಲಾ ಪ್ರತಿಷ್ಠಿತ 'ನೊಬೆಲ್' ಪ್ರಶಸ್ತಿಯನ್ನು ಪಡೆಯಲಿದ್ದಾರೆ? ಎಂಬ ಕುತೂಹಲ ಕಾಡುತ್ತಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications