ಹತ್ತು ಸಾವಿರ ಜನರಿಗಂಟಿದ ಮಹಾಮಾರಿ ಎಬೋಲಾ
ಜಿನೀವಾ, ಅ. 27: ಎಬೋಲಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರಿಸುತ್ತಲೇ ಇದೆ. ಇಲ್ಲಿಯವರೆಗೆ ಪ್ರಪಂಚದಾದ್ಯಂತ ದಾಖಾಲಾದ 10,141 ಪ್ರಕರಣಗಳಲ್ಲಿ 4,922 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ ಒ) ತಿಳಿಸಿದೆ.
ಕಳೆದ ಶನಿವಾರದವರೆಗಿನ ಅಂಕಿ ಅಂಶಗಳು ಇದಾಗಿದೆ. ಪಶ್ಚಿಮ ಆಫ್ರಿಕಾದ ಗಿನಿಯಾ, ಲಿಬೇರಿಯಾ, ಸಿರಿಯಾ ಲಿಯೋನ್ ನ 4,912 ಜನ ಮಹಾಮಾರಿಗೆ ಬಲಿಯಾಗಿದ್ದಾರೆ ಎಂಬ ಆತಂಕಕಾರಿ ಅಂಶವನ್ನು ಡಬ್ಲ್ಯುಎಚ್ ಒ ತಿಳಿಸಿದೆ.[ಅಮೆರಿಕದಲ್ಲೂ ಎಬೋಲಾ ಆರ್ಭಟ ಶುರುವಾಯಿತೆ?]

ನೈಜೀರಿಯಾದಲ್ಲಿಯೂ ಎಬೋಲಾ ತನ್ನ ರೌದ್ರ ರೂಪ ತೋರಿಸಿದ್ದು ಅನೇಕರನ್ನು ಬಲಿಪಡೆದಿದೆ. ಇದಲ್ಲದೇ ಸ್ಪೇನ್, ಅಮೆರಿಕದಲ್ಲೂ ಎಬೋಲಾ ಕಾಣಿಸಿಕೊಂಡಿದೆ. ಅಲ್ಲದೇ ಒಂದೊಂದು ಪ್ರಕರಣಗಳು ದಾಖಲಾಗಿವೆ.[ಮಹಾಮಾರಿ ಎಬೋಲಾಕ್ಕೆ ಕೆನಡಾ ಚುಚ್ಚುಮದ್ದು]
ಎಬೋಲಾ ಲಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯ ಸಾವಿನ ಸಾಧ್ಯತೆಯೂ ಶೇ. 70 ರಷ್ಟಿದೆ ಎಂದು ಡಬ್ಲ್ಯುಎಚ್ ಒ ತಿಳಿಸಿದೆ. ಐವೊರಿ ಕಾಸ್ಟ್ ನೊಂದಿಗೆ ಗಡಿ ಹಂಚಿಕೊಂಡಿರುವ ಗಿನಿಯಾ ಮತ್ತು ಲಿಬೇರಿಯಾ ದೇಶಗಳ ಎಂಟು ಜಿಲ್ಲೆಗಳಲ್ಲಿ ಎಬೋಲಾ ಭೀತಿ ಮತ್ತಷ್ಟು ಹೆಚ್ಚಾಗಿದೆ. ಅಲ್ಲದೇ ಆಫ್ರಿಕಾದ 15 ದೇಶಗಳ ತುಂಬೆಲ್ಲ ಮಹಾಮಾರಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಅನೇಕ ಮುಂಜಾಗೃತಾ ಕ್ರಮ ಕೈಗೊಂಡಿದ್ದರೂ ಯಾವ ಪ್ರಯೋಜನವಾಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications