ರಷ್ಯಾದಲ್ಲಿ ತೈಲ ಸೋರಿಕೆ: ತುರ್ತು ಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ರಷ್ಯಾ, ಜೂನ್ 5: ಆರ್ಕ್ಟಿಕ್ ವೃತ್ತದೊಳಗಿನ ನದಿಗೆ 20,000 ಟನ್ ಡೀಸೆಲ್ ತೈಲ ಸೋರಿಕೆಯಾದ ನಂತರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
ಮೇ 29 ರಂದು ಸೈಬೀರಿಯನ್ ನಗರದ ನೊರಿಲ್ಸ್ಕ್ ಬಳಿಯ ವಿದ್ಯುತ್ ಸ್ಥಾವರವೊಂದರಲ್ಲಿ ಇಂಧನ ಟ್ಯಾಂಕ್ ಕುಸಿದು ಸೋರಿಕೆ ಸಂಭವಿಸಿದೆ ಎಂದು ಬಿಬಿಸಿ ವರದಿ ತಿಳಿಸಿದೆ. ಅಧ್ಯಕ್ಷ ಪುಟಿನ್ ಈ ಘಟನೆಯ ಬಗ್ಗೆ ಕಿಡಿ ಕಾರಿದ್ದು, ದೂರದರ್ಶನದ ವಿಡಿಯೋ ಕಾನ್ಫರೆನ್ಸ್ನಲ್ಲಿ ಕಂಪನಿಯ ಮುಖ್ಯಸ್ಥರರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟಕವು ನೊರಿಲ್ಸ್ಕ್ ನಿಕಲ್ ಅವರ ಅಂಗಸಂಸ್ಥೆಯ ಒಡೆತನದಲ್ಲಿದೆ, ಇದು ವಿಶ್ವದ ಪ್ರಮುಖ ನಿಕಲ್ ಮತ್ತು ಪಲ್ಲಾಡಿಯಮ್ ಉತ್ಪಾದಕ ಕಂಪನಿಯಾಗಿದೆ.
ಈ ಸೋರಿಕೆ 350 ಚದರ ಕಿ.ಮೀ ಪ್ರದೇಶವನ್ನು ಕಲುಷಿತಗೊಳಿಸಿದೆ ಎಂದು ಬಿಬಿಸಿ ರಾಜ್ಯ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದೆ. ಈ ಘಟನೆ ಬಗ್ಗೆ ತನಿಖೆ ನಡೆಸಲು ಅಧ್ಯಕ್ಷ ಪುಟಿನ್ ಆದೇಶಿಸಿದ್ದಾರೆ.

ವರದಿಗಳ ಪ್ರಕಾರ, ವಿದ್ಯುತ್ ಸ್ಥಾವರದಲ್ಲಿ ಇಂಧನ ಟ್ಯಾಂಕ್ ಗೆ ಆಧಾರವಾಗಿರುವ ಕಂಬಗಳು ಮುಳುಗಲು ಪ್ರಾರಂಭಿಸಿದಾಗ ಈ ಅಪಘಾತ ಸಂಭವಿಸಿದೆ. ಈ ಪ್ರದೇಶವು ಪರ್ಮಾಫ್ರಾಸ್ಟ್ನಲ್ಲಿ ನಿರ್ಮಿಸಲ್ಪಟ್ಟಿದೆ, ಇದು ಹವಾಮಾನವು ಬೆಚ್ಚಗಾಗುತ್ತಿದ್ದಂತೆ ಕರಗುತ್ತಿದೆ. ಸೋರಿಕೆಯಾದ ತೈಲವು ಅಪಘಾತದ ಸ್ಥಳದಿಂದ ಸುಮಾರು 12 ಕಿ.ಮೀ ದೂರದಲ್ಲಿ ಚಲಿಸಿದ್ದು, ಅಂಬರ್ನಾಯಾ ನದಿಯ ನೀರನ್ನು ಕೆಂಪು ಬಣ್ಣಕ್ಕೆ ತಿರುಗಿಸಿತು.
ವಿದ್ಯುತ್ ಸ್ಥಾವರ ನಿರ್ದೇಶಕ ವ್ಯಾಚೆಸ್ಲಾವ್ ಸ್ಟಾರ್ಸ್ಟಿನ್ ಅವರನ್ನು ಜುಲೈ 31 ರವರೆಗೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ರಷ್ಯಾದ ತನಿಖಾ ಸಮಿತಿ (ಎಸ್ಕೆ) ಮಾಲಿನ್ಯ ಮತ್ತು ನಿರ್ಲಕ್ಷ್ಯದ ಬಗ್ಗೆ ಕ್ರಿಮಿನಲ್ ಮೊಕದ್ದಮೆ ಹೂಡಿದೆ ಎಂದು ವರದಿ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications