ಅನ್ನ ಮತ್ತು ನೀರು ಸಿಗದ ಪರಿಸ್ಥಿತಿಯಲ್ಲಿ ಅರಬ್ ದೇಶಗಳು, ಸೂಪರ್ ಮಾರ್ಕೆಟ್ ಖಾಲಿ ಖಾಲಿ | Operation Roaring Lion
ಇರಾನ್ ಸರ್ವಾಧಿಕಾರಿ ಖಮೇನಿ ಹತ್ಯೆ ನಂತರ ಅಮೆರಿಕ ಹಾಗೂ ಇಸ್ರೇಲ್ ವಿರುದ್ಧ ರೊಚ್ಚಿಗೆದ್ದು ಇಡೀ ಮಧ್ಯಪ್ರಾಚ್ಯ ಪ್ರದೇಶವನ್ನೇ ಸ್ಮಶಾನ ಮಾಡುತ್ತಿದೆ ಇರಾನ್ನ ಸೇನೆ. ಅದರಲ್ಲೂ ಪೆಟ್ರೋಲ್ & ಡೀಸೆಲ್ ಮಾರಾಟ ಮಾಡಿಕೊಂಡು ಲಕ್ಷಾಂತರ ಕೋಟಿ ರೂಪಾಯಿ ಹಣ ಸಂಪಾದನೆ ಮಾಡಿ, ಜಗತ್ತಿನ ಅತ್ಯಂತ ಶ್ರೀಮಂತ ದೇಶಗಳಲ್ಲಿ ಒಂದಾಗಿವೆ ಅರಬ್ ದೇಶಗಳು. ಆದರೆ ದಿಢೀರ್ ಇರಾನ್ ವಿರುದ್ಧ ಇಸ್ರೇಲ್ & ಅಮೆರಿಕ ಸೇನೆಗಳು ಯುದ್ಧ ಆರಂಭ ಮಾಡಿರುವುದು ಅಲ್ಲೋಲ ಕಲ್ಲೋಲ ಸೃಷ್ಟಿಗೆ ಕಾರಣವಾಗುತ್ತಿದೆ. ಇದೇ ಕಾರಣಕ್ಕೆ ಇರಾನ್ ತನ್ನ ಜಲಗಡಿಯ ಮೇಲೆ ಸಂಪೂರ್ಣ ನಿಯಂತ್ರಣ ಪಡೆದುಕೊಂಡು ಶತ್ರು ದೇಶಗಳ ಹಡಗುಗಳು ಮುಂದೆ ಹೋಗದಂತೆ ಕಾವಲು ಕಾಯುತ್ತಿದೆ. ಈ ಕಾರಣಕ್ಕೆ ದಿಢೀರ್ ವಸ್ತುಗಳ ಪೂರೈಕೆಗೆ ಬ್ರೇಕ್ ಬಿದ್ದು ತಲೆನೋವು ಜೋರಾಗಿದೆ.
ಅರಬ್ ದೇಶಗಳಿಗೆ ಅಕ್ಕಿ & ನೀರು ಸೇರಿದಂತೆ ಪ್ರಮುಖವಾಗಿ ಬೇಕಿರುವ ವಸ್ತುಗಳನ್ನು ಭಾರತ ರಫ್ತು ಮಾಡುತ್ತದೆ. ಅದರಲ್ಲೂ ಭಾರತದ ಕಡೆಯಿಂದ ವಸ್ತುಗಳು ಬರದೇ ಇದ್ದರೆ ಅರಬ್ ದೇಶಗಳು ನಿತ್ಯ ನರಳುವ ಸ್ಥಿತಿ ಇದೆ. ಹೀಗಿದ್ದಾಗ ಇರಾನ್ ದಾಳಿ ಭೀತಿ ಹಿನ್ನೆಲೆಯಲ್ಲಿ ಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳು ಅರಬ್ ದೇಶಗಳಿಗೆ ಸಪ್ಲೈ ಮಾಡುತ್ತಿದ್ದ ವಸ್ತುಗಳು ನಿಂತಲ್ಲೇ ನಿಂತಿವೆ. ಈ ಕಾರಣಕ್ಕೆ ಇದೀಗ ಅರಬ್ ದೇಶಗಳ ಜನರು ಸೂಕ್ತವಾಗಿ ಪದಾರ್ಥಗಳು ಸಿಗದೆ ಒದ್ದಾಡುತ್ತಿದ್ದಾರೆ. ಮತ್ತೊಂದು ಕಡೆ ಯುದ್ಧ ಇನ್ನಷ್ಟು ದಿನಗಳ ಕಾಲ ಮುಂದುವರಿಯುವ ಭೀತಿ ಇರುವ ಕಾರಣಕ್ಕೆ ಸೂಪರ್ ಮಾರ್ಕೆಟ್ ಸೇರಿದಂತೆ ಅಂಗಡಿಗಳಲ್ಲಿ ದಿನಸಿ ಪದಾರ್ಥಗಳ ಖರೀದಿ ಜೋರಾಗಿದೆ. ಅರಬ್ ನಿವಾಸಿಗಳು ತಮ್ಮ ತಮ್ಮ ಮನೆ ಹಾಗೂ ಕುಟುಂಬ ನಿರ್ವಹಣೆಗೆ ಪರದಾಡುವಂತೆ ಆಗುತ್ತಿದೆ.

-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications