ಉಗ್ರ ಒಸಾಮಾ ಬಿನ್ ಲಾಡೆನ್ ಪುತ್ರ ಹಮ್ಜಾ ಲಾಡೆನ್ ಸಾವು
Recommended Video
ವಾಷಿಂಗ್ಟನ್, ಆಗಸ್ಟ್ 01: ಅಲ್ ಖೈದಾ ಉಗ್ರ ಸಂಘಟನೆಯ ಉಗ್ರ, ಒಸಾಮಾ ಬಿನ್ ಲಾಡೆನ್ ಮಗ ಹಮ್ಜಾ ಲಾಡೆನ್ ಮೃತಪಟ್ಟಿರುವ ಸುದ್ದಿ ಬಂದಿದೆ ಎನ್ ಬಿಸಿ ನ್ಯೂಸ್ ಮೊದಲಿಗೆ ವರದಿ ಮಾಡಿದ್ದು, ಅಧಿಕಾರಿಗಳು ಸುದ್ದಿಯನ್ನು ಖಚಿತಪಡಿಸಿದ್ದಾರೆ.
ಜ್ಯೂನಿಯರ್ ಲಾಡೆನ್ ಸತ್ತಿರುವುದು ನಿಜವಾದರೂ ಹಮ್ಜಾ ಸತ್ತಿದ್ದು ಹೇಗೆ? ಹಮ್ಜಾನನ್ನು ಯಾರು ಕೊಂದರು? ಯುಎಸ್ ಅಧಿಕಾರಿಗಳ ತಂತ್ರಗಾರಿಕೆ ಇದೆಯೆ? ಹಮ್ಜಾ ಸಾಯುವ ವೇಳೆಗೆ ಯಾವ ತಾಣದಲ್ಲಿದ್ದ ಎಂಬುದು ಬಹಿರಂಗವಾಗಿದೆಯೆ? ಎಂಬೆಲ್ಲ ಪ್ರಶ್ನೆಗಳು ಉದ್ಭವಿಸಿವೆ. ಅಫ್ಘಾನಿಸ್ತಾನ, ಇರಾನ್, ಪಾಕಿಸ್ತಾನ ಅಥವಾ ಸಿರಿಯಾಗಳಲ್ಲಿ ಜ್ಯೂನಿಯರ್ ಲಾಡೆನ್ ಅಡುಗುತಾಣಗಳಿತ್ತು. ಈ ದೇಶಗಳಲ್ಲಿ ಯಾವುದೋ ಒಂದು ದೇಶದಲ್ಲಿ ಮೃತಪಟ್ಟಿದ್ದಾನೆ ಎಂದು ಸದ್ಯಕ್ಕೆ ಲಭ್ಯ ಮಾಹಿತಿ.

ಲಾಡೆನ್ ಸಾವಿನ ಪ್ರತೀಕಾರ: ಅಮೆರಿಕಕ್ಕೆ ಸವಾಲು ಹಾಕಿದ್ದ ಉಗ್ರ ಒಸಾಮಾ ಬಿನ್ ಲಾಡೆನ್ ಹತ್ಯೆಯಾದ ಬಳಿಕ ಅಲ್ ಖೈದಾ ಉಗ್ರ ಸಂಘಟನೆ ಮುನ್ನಡೆಸುವವರು ಇಲ್ಲದ್ದಂತಾಗಿತ್ತು. ಹಮ್ಜಾ ಲಾಡೆನ್ ಮುಖಂಡನಾಗಿ ಹೊರಹೊಮ್ಮುವ ವೇಳೆಗೆ ಅಲ್ ಖೈದಾ ಸಂಘಟನೆಯಲ್ಲಿ ಒಡಕು ಮೂಡಿ ಎರಡು ಮೂರು ಪ್ರತ್ಯೇಕ ಬಣಗಳಾಗಿ ಮಾರ್ಪಟ್ಟಿದ್ದವು.
ಆದರೆ, ತಂದೆ ಸಾವಿನ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿದ್ದ ಹಮ್ಜಾ, ಅಮೆರಿಕ ವಿರುದ್ಧ ಯುದ್ಧ ಸಾರಿದ್ದ. ಕಳೆದ ವರ್ಷ ಸೌದಿ ಅರೇಬಿಯಾದಲ್ಲಿ ಸರ್ಕಾರದ ವಿರುದ್ಧ ದಂಗೆ ಏಳುವಂತೆ ಅಲ್ಲಿನ ಜನತೆಗೆ ಹಮ್ಜಾ ಕರೆ ನೀಡಿದ್ದ. ಲಾಡೆನ್ ಮೂರು ಪತ್ನಿಗಳ ಪೈಕಿ ಖೈರಾಯ್ಯ ಸಬರ್ ಪುತ್ರ ಹಮ್ಜಾ ಕೊನೆಗಾಲದಲ್ಲಿ ಅಬೊಟಾಬಾದ್ ನಲ್ಲಿದ್ದ ಎಂದು ತಿಳಿದು ಬಂದಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications