ಬುರ್ಕಿನಾ ಫಾಸೊ ದೇಶದಲ್ಲಿ ಭೀಕರ ದಾಳಿ: 50ಕ್ಕೂ ಹೆಚ್ಚು ಮಂದಿ ಸಾವು
ನವದೆಹಲಿ, ಮೇ 26: ಆಫ್ರಿಕಾ ಖಂಡದ ಪಶ್ಚಿಮ ಭಾಗದಲ್ಲಿರುವ ಬುರ್ಕಿನಾ ಫಾಸೊ (Burkina Faso) ದೇಶದಲ್ಲಿ ನಡೆದ ಸಶಸ್ತ್ರ ದಾಳಿಯೊಂದರಲ್ಲಿ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಘೋರ ಘಟನೆ ವರದಿಯಾಗಿದೆ. ಬುರ್ಕಿನಾ ಫಾಸೊ ದೇಶದ ಪೂರ್ವಭಾಗದಲ್ಲಿರುವ ಮಡ್ಜೋರಿ ಎಂಬಲ್ಲಿ ಮೇ 25ರಂದು ಘಟನೆ ನಡೆದಿದೆ ಎಂದು ಆ ಪ್ರದೇಶದ ಗವರ್ನರ್ ಹೂಬರ್ಟ್ ಯಮಿಯೋಗೊ ಇಂದು ಗುರುವಾರ ಮಾಹಿತಿ ನೀಡಿದ್ದಾರೆ.
ಈ ದಾಳಿಯ ಹಿಂದೆ ಯಾರಿದ್ದಾರೆ ಎಂಬುದು ಇನ್ನೂ ಗೊತ್ತಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಆಫ್ರಿಕನ್ ರಾಷ್ಟ್ರದಲ್ಲಿ ಇಸ್ಲಾಮೀ ಉಗ್ರಗಾಮಿ ಗುಂಪುಗಳು ಸಕ್ರಿಯವಾಗಿದ್ದು ಬಹಳಷ್ಟು ಬಾರಿ ದಾಳಿಗಳಲ್ಲಿ ಅವುಗಳ ಕೈವಾಡ ಇರುವುದು ಬೆಳಕಿಗೆ ಬಂದಿದೆ. ಹಿಂಸಾಚಾರಗಳಿಂದಾಗಿ ಕಳೆದ ಕೆಲ ವರ್ಷಗಳಿಂದ ಲಕ್ಷಾಂತರ ಜನರು ಗುಳೆ ಹೋಗುವಂತಾಗಿದೆ.

ಇದೇ ಮೇ ತಿಂಗಳ ಆರಂಭದಲ್ಲಿ ಬುರ್ಕಿನಾ ಫಾಸೊದ ಸಾಹೆಲ್ ಎಂಬ ಪ್ರದೇಶದಲ್ಲಿ ಅಪರಿಚಿತ ಸಶಸ್ತ್ರಧಾರಿ ವ್ಯಕ್ತಿಗಳು ನಡೆಸಿದ ದಾಳಿಯಲ್ಲಿ 10 ಸೇನಾ ಯೋಧರು ಸೇರಿ 12 ಮಂದಿ ಬಲಿಯಾಗಿದ್ದರು. ಆಹಾರ ಸರಬರಾಜು ಮಾಡುತ್ತಿದ್ದ ವಾಹನಕ್ಕೆ ಬೆಂಗಾವಲಾಗಿ ಹೋಗುತ್ತಿದ್ದ ಸೇನಾ ಯೋಧರ ತಂಡವೊಂದನ್ನು ಗುರಿಯಾಗಿಸಿ ಆ ಭೀಕರ ದಾಳಿ ನಡೆದಿತ್ತು. ಸತ್ತವರಲ್ಲಿ ಇಬ್ಬರು ನಾಗರಿಕರೂ ಸೇರಿದ್ದರು.
ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲೇ 600 ಮಂದಿ ಹತ್ಯೆಯಾಗಿದ್ದಾರೆಂಬ ಮಾಹಿತಿ ಇದೆ. ಒಂದು ಅಂದಾಜಿನ ಪ್ರಕಾರ 18 ಲಕ್ಷಕ್ಕೂ ಹೆಚ್ಚು ಮಂದಿ ಮನೆಮಠ ಕಳೆದುಕೊಂಡು ಊರು ಬಿಟ್ಟು ಹೋಗಿದ್ದಾರೆ.
ಬುರ್ಕಿನಾ ಫಾಸೊ ದೇಶದಲ್ಲಿ ಉಗ್ರಗಾಮಿ ಸಂಘಟನೆಗಳ ಅಟ್ಟಹಾಸ ಮಾತ್ರವಲ್ಲ, ಅಲ್ಲಿಯ ಭದ್ರತಾ ಪಡೆಗಳೂ ಕೂಡ ನಾಗರಿಕರ ಮೇಲೆ ದೌರ್ಜನ್ಯ ತೋರುತ್ತವೆ ಎಂಬಂತಹ ವರದಿಗಳಿವೆ. ಭದ್ರತಾ ಪಡೆಗಳು ಆಗಾಗ್ಗೆ ಕಾನೂನುಬಾಹಿರವಾಗಿ ನಾಗರಿಕರ ಹತ್ಯೆ ಮತ್ತು ಅಪಹರಣಗಳಂತಹ ಕೃತ್ಯಗಳನ್ನು ಎಸಗುತ್ತಿರುತ್ತಾರಂತೆ. ಮಹಿಳೆಯರ ಮೇಲೆ ಅತ್ಯಾಚಾರ ಅಗುವುದು ಸಾಮಾನ್ಯವಾಗಿದೆ. ಸಣ್ಣ ಮಕ್ಕಳನ್ನು ಸೇನಾ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತದೆ ಎಂದು ಕ್ಸಿನ್ಹುವಾ ಮೊದಲಾದ ಸುದ್ದಿ ಸಂಸ್ಥೆಗಳು ಹೇಳುತ್ತವೆ.

ಬುರ್ಕಿನಾ ಫಾಸೊ ದೇಶದಲ್ಲಿ ಇದೇ ಜನವರಿಯಲ್ಲಿ ಅಧ್ಯಕ್ಷ ರೋಚ್ ಮಾರ್ಕ್ ಕ್ರಿಸ್ಟಿಯನ್ ಕಾಬೋರೆ ಅವರನ್ನು ಕೆಳಗಿಸಿ ಸೇನೆಯೇ ಆಡಳಿತ ನಡೆಸುತ್ತಿದೆ. ಜಿಹಾದಿ ಸಂಬಂಧಿತ ಹಿಂಸಾಚಾರವನ್ನು ಸರಕಾರ ಸರಿಯಾಗಿ ನಿಭಾಯಿಸಲಿಲ್ಲ ಎಂಬ ಕಾರಣಕ್ಕೆ ಮಿಲಿಟರಿಯೇ ಆಡಳಿತ ವಹಿಸಿಕೊಂಡಿದೆ. ಆದರೂ ಕೂಡ ಅಲ್ಲಿ ಹಿಂಸಾಚಾರಗಳು ಕಡಿಮೆ ಆಗುತ್ತಿಲ್ಲ. ಉಗ್ರರ ಅಟ್ಟಹಾಸದ ಜೊತೆಗೆ ಭದ್ರತಾ ಪಡೆಗಳ ದೌರ್ಜನ್ಯವೂ ಸೇರಿಕೊಂಡು ನಾಗರಿಕರನ್ನು ಭಯಭೀತಗೊಳಿಸಿದೆ ಎಂದು ಹೇಳಲಾಗುತ್ತಿದೆ.
(ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications