ಜಗತ್ತಿಗೇ ಗೊತ್ತಿರುವ ಸತ್ಯವನ್ನು ಕೊನೆಗೂ ಒಪ್ಪಿಕೊಂಡ ಪಾಕಿಸ್ತಾನ
ನಮ್ಮ ನೆಲದಲ್ಲಿ ಯಾವುದೇ ಉಗ್ರ ಸಂಘಟನೆಗಳು ಬೀಡುಬಿಟ್ಟಿಲ್ಲ ಎಂದು ಹಸಿಹಸಿ ಸುಳ್ಳು ಹೇಳುತ್ತಿದ್ದ ಪಾಕಿಸ್ತಾನ, ಎರಡು ಪ್ರಮುಖ ಉಗ್ರ ಸಂಘಟನೆಗಳು ಪಾಕಿಸ್ತಾನದಿಂದಲೇ ಕಾರ್ಯನಿರ್ವಹಿಸುತ್ತಿದೆ ಎಂದು ಒಪ್ಪಿಕೊಂಡಿದೆ.
ಲಾಹೋರ್, ಸೆ 6: ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲಿ, ಭಯೋತ್ಪಾದಕರ ತವರೂರು ಪಾಕಿಸ್ತಾನ ಕೊನೆಗೂ ಸತ್ಯವನ್ನು ಒಪ್ಪಿಕೊಂಡಿದೆ. ಬ್ರಿಕ್ಸ್ ಸಮ್ಮೇಳನದಲ್ಲಿ ಪಾಕಿಸ್ತಾನಕ್ಕೆ ಮುಖಭಂಗ ಆಗುತ್ತಿದ್ದಂತೆಯೇ ವಿಶ್ವಕ್ಕೇ ಗೊತ್ತಿರುವ ಸತ್ಯವನ್ನು ಪಾಕ್ ವಿದೇಶಾಂಗ ಸಚಿವರು ಬಾಯ್ಬಿಟ್ಟಿರುವುದು ವಿಶೇಷ.
ನಮ್ಮ ನೆಲದಲ್ಲಿ ಯಾವುದೇ ಉಗ್ರ ಸಂಘಟನೆಗಳು ಬೀಡುಬಿಟ್ಟಿಲ್ಲ ಎಂದು ಹಸಿಹಸಿ ಸುಳ್ಳು ಹೇಳುತ್ತಿದ್ದ ಪಾಕಿಸ್ತಾನ, ಎರಡು ಪ್ರಮುಖ ಉಗ್ರ ಸಂಘಟನೆಗಳು ಪಾಕಿಸ್ತಾನದಿಂದಲೇ ಕಾರ್ಯನಿರ್ವಹಿಸುತ್ತಿದೆ ಎಂದು ಒಪ್ಪಿಕೊಂಡಿದೆ.

ಜಗತ್ತಿಗೆ ಕಂಟಕವಾಗಿರುವ ಎಲ್ಇಟಿ (ಲಷ್ಕರ್ -ಇ-ತೊಯ್ಬಾ) ಮತ್ತು ಜೆಇಎಂ (ಜೈಶ್-ಇ-ಮೊಹಮ್ಮದ್) ಉಗ್ರ ಸಂಘಟನೆಗಳಿಗೆ ಪಾಕಿಸ್ತಾನ ತವರೂರು ಎಂದು ಅಲ್ಲಿನ ವಿದೇಶಾಂಗ ಖಾತೆಯ ಸಚಿವ ಕ್ವಾಜಾ ಆಸಿಫ್ ಹೇಳಿದ್ದಾರೆಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ಮಿತ್ರ ರಾಷ್ಟ್ರ ಚೀನಾ ಪ್ರತೀ ಬಾರಿ ನಮ್ಮನ್ನು ಪರೀಕ್ಷಿಸಬಾರದು, ಇದರ ಬದಲು ಎರಡು ಉಗ್ರ ಸಂಘಟನೆಗಳ ಚಟುವಟಿಕೆಯ ಮೇಲೆ ಕೆಲವೊಂದು ನಿರ್ಬಂಧ ಹೇರಲಿ ಎಂದು ಕ್ವಾಜಾ ಆಸಿಫ್, ಚೀನಾಗೆ ಮನವಿ ಮಾಡಿದ್ದಾರೆ.
ಮಸೂದ್ ಅಜರ್ ನನ್ನು 'ಜಾಗತಿಕ ಉಗ್ರ; ಎಂದು ಒಪ್ಪಿಕೊಳ್ಳಲು ಈ ಹಿಂದೆ ಹಲವು ಬಾರಿ ತಯಾರಿಲ್ಲದ ಚೀನಾ, ಕ್ಸಿಯಾಮೆನ್ ನಲ್ಲಿ (ಸೆ 4) ನಡೆದ ಬ್ರಿಕ್ಸ್ ಸಮ್ಮೇಳನದಲ್ಲಿ ಭಾರತದ ಪರವಾಗಿ ನಿಂತಿತ್ತು.
ಉಗ್ರರ ವಿರುದ್ದ ಒಗ್ಗಟ್ಟಿನ ಹೋರಾಟ ಅನಿವಾರ್ಯ ಎನ್ನುವುದನ್ನೂ ಕೊನೆಗೂ ಅರಿತ ಚೀನಾ, ತಾಲಿಬಾನ್, ಅಲ್ ಖೈದಾ, ಎಲ್ಇಟಿ, ಜೆಇಎಂ ಮುಂತಾದ ಉಗ್ರ ಸಂಘಟನೆಗಳ ವಿರುದ್ದ ಒಗ್ಗಟ್ಟಿನ ಹೋರಾಟದ ಘೋಷಣಾ ಪತ್ರಕ್ಕೆ ಬ್ರಿಕ್ಸ್ ಸಮ್ಮೇಳನದಲ್ಲಿ ಸಹಿಹಾಕಿತ್ತು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications