ಪಾಕ್ ನ ಜಲಾಂತರ್ಗಾಮಿ ಕ್ಷಿಪಣಿ ಬಾಬರ್-III ಯಶಸ್ವಿ
ಇಸ್ಲಾಮಾಬಾದ್, ಜನವರಿ 10: ಜಲಾಂತರ್ಗಾಮಿಯಿಂದ (ಸಬ್ ಮರೀನ್) ಉಡಾಯಿಸಬಹುದಾದ ಪಾಕಿಸ್ತಾನದ ಮೊದಲ ಕ್ಷಿಪಣಿ ಬಾಬರ್-III ಪರೀಕ್ಷೆ ಯಶಸ್ವಿಯಾಗಿದೆ. ಇದು 450 ಕಿ.ಮೀ ವರೆಗೆ ತಲುಪುವ ಶಕ್ತಿ ಹೊಂದಿದೆ. ಕ್ಷಿಪಣಿ ಯಶಸ್ಸಿನ ಹಿಂದೆ ಕೆಲಸ ಮಾಡಿರುವ ಎಲ್ಲರಿಗೂ ಅಲ್ಲಿನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಅಭಿನಂದನೆ ಸಲ್ಲಿಸಿದ್ದಾರೆ.
#Pakistan successfully test fired first Submarine launched Cruise Missile Babur-3. Rg 450 Km. #COAS congrats Nation and the team involved. pic.twitter.com/YRNei5oF65
— Maj Gen Asif Ghafoor (@OfficialDGISPR) 9 January 2017
ಹಿಂದೂ ಮಹಾಸಾಗರದ ಅಜ್ಞಾತ ಸ್ಥಳವೊಂದರಿಂದ ಕ್ಷಿಪಣಿ ಪ್ರಯೋಗ ನಡೆಸಲಾಯಿತು ಎಂದು ಪಾಕಿಸ್ತಾನ ರೇಡಿಯೋ ವರದಿ ಮಾಡಿದೆ. ನೀರಿನಾಳದಿಂದ ಇದನ್ನು ಉಡಾಯಿಸಿದ್ದು, ನಿರ್ದಿಷ್ಟ ಗುರಿಯನ್ನು ತಲುಪುವ ಸಾಮರ್ಥ್ಯ ಹೊಂದಿದೆ. ಬಾಬರ್-III ಸಮುದ್ರದಿಂದ ಬಳಸುವಂಥ ಬಾಬರ್-II ಮಾದರಿಯ ಕ್ಷಿಪಣಿ. ಇನ್ನು ಬಾಬರ್-II ನೆಲದಿಂದ ಉಡಾಯಿಸುವಂಥ ಕ್ಷಿಪಣಿ, ಡಿಸೆಂಬರ್ ಕೊನೆಯಲ್ಲಿ ಅದರ ಪರೀಕ್ಷೆ ಮಾಡಿತ್ತು ಪಾಕಿಸ್ತಾನ.[ಸ್ವದೇಶಿ ನಿರ್ವಿುತ ಅಗ್ನಿ 5 ಕ್ಷಿಪಣಿ ಯಶಸ್ವಿ ಪರೀಕ್ಷೆ]

ಈಗ ಪರೀಕ್ಷೆ ಮಾಡಿರುವ ಬಾಬರ್-III ಅತ್ಯುನ್ನತ ತಂತ್ರಜ್ಞಾನವನ್ನು ಹೊಂದಿದೆ. ನೀರಿನಾಳದಿಂದ ನಿಯಂತ್ರಿಸಬಹುದಾದ ಮತ್ತು ಆಧುನಿಕ ಸೂಚನೆಗಳನ್ನು ಅನುಸರಿಸುವ, ಜಾಗತಿಕ ಮಟ್ಟದಲ್ಲಿ ಯಾವ ಸ್ಥಳವನ್ನು ಬೇಕಾದರೂ ತಲುಪಬಹುದಾದ ವ್ಯವಸ್ಥೆಯನ್ನು ಇದರಲ್ಲಿ ಅಳವಡಿಸಲಾಗಿದೆ. ಕ್ಷಿಪಣಿ ಯಶಸ್ವಿಯಾದ ಬಗ್ಗೆ ಅಲ್ಲಿನ ಪತ್ರಿಕೆ ಡಾನ್ ವರದಿ ಮಾಡಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications