400 ಜನರ ಜೀವ ತೆಗೆದ ಪಾಪಿ ಪಾಕಿಸ್ತಾನ, ಅಫ್ಘಾನಿಸ್ತಾನ ವಿರುದ್ಧ ದಾಳಿ | Pakistan And Afghanistan
ಪಾಕಿಸ್ತಾನ ಸೇನೆ ಮತ್ತೆ ಬಾಲ ಬಿಚ್ಚಿದೆ, ತನ್ನಲ್ಲೇ ನೂರಾರು ಹುಳುಕು ಇಟ್ಟುಕೊಂಡು ಅಕ್ಕಪಕ್ಕದಲ್ಲಿ ಇರುವ ದೇಶಗಳ ಜೊತೆಗೆ ಸದಾ ಕಿರಿಕ್ ಮಾಡುವ ಪಾಕಿಸ್ತಾನ ಮತ್ತೊಮ್ಮೆ ಈಗ ದೊಡ್ಡ ಎಡವಟ್ಟು ಮಾಡಿಕೊಂಡಿದೆ. ಅಂದಹಾಗೆ ಅಫ್ಘಾನಿಸ್ತಾನ ದೇಶದ ಆಡಳಿತ ನಡೆಸುತ್ತಿರುವ ತಾಲಿಬಾನ್ ವಿರುದ್ಧ ರೊಚ್ಚಿಗೆದ್ದು ವಾಯುದಾಳಿ ನಡೆಸಿರುವ ಪಾಕಿಸ್ತಾನ ಸೇನೆ 400 ಅಮಾಯಕರ ಜೀವ ತೆಗೆದ ಆರೋಪ ಕೇಳಿಬಂದಿದೆ. ಒಂದೇ ದಾಳಿಯಲ್ಲಿ ಸುಮಾರು 400 ಜನರ ಜೀವ ತೆಗೆದಿರುವುದು ಪಾಕಿಸ್ತಾನ ವಿರುದ್ಧ ಆಕ್ರೋಶ ಭುಗಿಲೇಳುವ ರೀತಿ ಮಾಡಿದೆ. ಹಾಗಾದರೆ ಪಾಕಿಸ್ತಾನ ದಾಳಿ ಮಾಡಿದ್ದು ಏಕೆ? ಪಾಕಿಸ್ತಾನ ಸೇನೆ ದಾಳಿ ಮಾಡಿದ ಪ್ರದೇಶದಲ್ಲಿ ಏನಾಯ್ತು? ಬನ್ನಿ ತಿಳಿಯೋಣ.
ಅಫ್ಘಾನಿಸ್ತಾನ ಅಧಿಕಾರಿಗಳ ಮಾಹಿತಿ ಪ್ರಕಾರ ಕಾಬೂಲ್ನ ವೈದ್ಯಕೀಯ ಕೇಂದ್ರದ ಮೇಲೆ ಪಾಪಿ ಪಾಕ್ ಸೇನೆ ಭೀಕರವಾದ ದಾಳಿ ನಡೆಸಿದೆ. ಅಂದಹಾಗೆ ಪಾಕಿಸ್ತಾನದ ಈ ವಾಯುದಾಳಿಯಲ್ಲಿ ಕನಿಷ್ಠ 400 ಜನ ಜೀವ ಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಪಾಕಿಸ್ತಾನ ದಾಳಿಯಲ್ಲಿ ಮೃತಪಟ್ಟವರು ಚಿಕಿತ್ಸೆಯನ್ನ ಪಡೆಯುತ್ತಿದ್ದರು, ಹಲವು ರೀತಿಯ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಿದ್ದ ಇವರನ್ನ ಚಿಕಿತ್ಸೆಗೆ ಎಂದು ದಾಖಲು ಮಾಡಲಾಗಿತ್ತು. ಆದರೆ ಪಾಕಿಸ್ತಾನ ಸೇನೆ ಯುದ್ಧದ ನಿಯಮ ಮುರಿದು ಆಸ್ಪತ್ರೆಯ ಮೇಲೆ ದಾಳಿ ನಡೆಸಿದೆ ಎಂದು ಆರೋಪ ಮಾಡಲಾಗಿದೆ. ಈ ದಾಳಿಯಲ್ಲಿ ವ್ಯಸನ ಚಿಕಿತ್ಸೆಗೆ ಒಳಗಾಗಿದ್ದ ರೋಗಿಗಳು ಬಲಿಯಾಗಿದ್ದಾರೆ. ಪಾಕಿಸ್ತಾನ ಸೇನೆ ನಡೆಸಿದ ದಾಳಿ ಎಷ್ಟು ಭೀಕರವಾಗಿ ಇತ್ತು ಎಂದರೆ, ಈ ದಾಳಿ ನಂತರ ದಿಢೀರ್ ಇಡೀ ಆಸ್ಪತ್ರೆ ಕಟ್ಟಡ ಧಗಧಗ ಹೊತ್ತಿ ಉರಿದಿದೆ.

250ಕ್ಕೂ ಹೆಚ್ಚು ಜನರಿಗೆ ಗಾಯ
ಪಾಕಿಸ್ತಾನದ ಕುತಂತ್ರಿ ರಾಜಕೀಯ ನಾಯಕರು ಹಾಗೂ ಅಲ್ಲಿನ ಕುತಂತ್ರಿ ಸೇನಾ ಮುಖ್ಯಸ್ಥ ಪದೇ & ಪದೇ ತಮ್ಮ ವಿಕೃತ ಮನಸ್ಥಿತಿಯಿಂದ ಅಕ್ಕಪಕ್ಕ ಇರುವ ದೇಶಗಳಿಗೆ ತೊಂದರೆ ಕೊಡುತ್ತಲೇ ಇದ್ದಾರೆ. 400 ಅಮಾಯಕರ ಜೀವ ಬಲಿಪಡೆದಿರುವ ಪಾಕಿಸ್ತಾನ ದಾಳಿ ಮತ್ತೊಂದು ಕಡೆ 250ಕ್ಕೂ ಹೆಚ್ಚು ಜನ ಗಾಯಗೊಂಡು ನರಳುವಂತೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ತಾಲಿಬಾನ್ ಸರ್ಕಾರದ ಉಪ ವಕ್ತಾರ ಹಮ್ದುಲ್ಲಾ ಫಿತ್ರತ್, ನಿನ್ನೆ ತಡರಾತ್ರಿ ನಡೆದ ದಾಳಿಯಿಂದ ಕಟ್ಟಡವು ಭಾರೀ ಹಾನಿಗೊಳಗಾಗಿದೆ.
250 ಜನ ಗಾಯಗೊಂಡಿದ್ದು, ರಕ್ಷಣಾ ತಂಡಗಳು ಬೆಂಕಿ ನಂದಿಸಲು ಹಾಗೂ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಲು ಒದ್ದಾಡಿವೆ. ಈ ದಾಳಿಯನ್ನು ಪಾಕಿಸ್ತಾನವೇ ನಡೆಸಿದೆ ಎಂದು ತಾಲಿಬಾನ್ ಆಡಳಿತ ಆರೋಪ ಮಾಡಿದ್ದು, ಇದಕ್ಕೆ ತಕ್ಕ ರಿವೇಂಜ್ ಗ್ಯಾರಂಟಿ ಎಂದಿದೆ. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ಈ ಆರೋಪಗಳನ್ನ ತಳ್ಳಿ ಹಾಕಿ, ಕಾಬೂಲ್ & ಪೂರ್ವ ಅಫ್ಘಾನಿಸ್ತಾನದಲ್ಲಿ ನಡೆದ ದಾಳಿಗಳು ನಾಗರಿಕ ಅಥವಾ ವೈದ್ಯಕೀಯ ಕೇಂದ್ರಗಳನ್ನ ಗುರಿಯಾಗಿಸಲಿಲ್ಲ ಎಂದು ತಿಪ್ಪೆ ಸಾರಿಸಿದೆ. ಈ ದಾಳಿಯ ನಂತರ ಅಪ್ಘಾನಿಸ್ತಾನ ಕುದ್ದು ಹೋಗಿದ್ದು, ಭೀಕರವಾದ ಮರುದಾಳಿಗೆ ಎಲ್ಲಾ ಸಿದ್ಧತೆಗಳ ಆರಂಭಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications