2014ರ ಸಂಸತ್ ದಾಳಿ ಪ್ರಕರಣ: ಇಮ್ರಾನ್ ಖಾನ್ ಖುಲಾಸೆ
ಇಸ್ಲಾಮಾಬಾದ್, ಅಕ್ಟೋಬರ್ 29: ಪಾಕಿಸ್ತಾನ ಸಂಸತ್ ಮೇಲೆ 2014ರಲ್ಲಿ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಖುಲಾಸೆಗೊಂಡಿದ್ದಾರೆ.
ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಖುಲಾಸೆಗೊಳಿಸಿದೆ. ಆದರೆ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಸೇರಿದಂತೆ ಇತರ ಹಿರಿಯ ಸಚಿವರಿಗೆ ದೋಷಾರೋಪಣೆಗಾಗಿ ಸಮನ್ಸ್ ಜಾರಿ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಡಾನ್ ಪತ್ರಿಕೆಯ ವರದಿಯ ಪ್ರಕಾರ, ಇನ್ನು ಮುಂದೆ ಪ್ರಕರಣವನ್ನು ಮುಂದುವರಿಸಲು ಆಸಕ್ತಿ ಹೊಂದಿಲ್ಲವಾದ್ದರಿಂದ ತಮ್ಮನ್ನು ಖುಲಾಸೆಗೊಳಿಸುವಂತೆ ಪಾಕ್ ಪ್ರಧಾನಿ ನ್ಯಾಯಾಲಯವನ್ನು ಒತ್ತಾಯಿಸಿದ ನಂತರ ಇಮ್ರಾನ್ ಖಾನ್ ಅವರನ್ನು ಖುಲಾಸೆಗೊಳಿಸಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಜಾ ಜವಾದ್ ಅಬ್ಬಾಸ್ ಹಸನ್, ಪಾಕಿಸ್ತಾನ ಅಧ್ಯಕ್ಷ ಆರಿಫ್ ಅಲ್ವಿ ಅವರಿಗೆ ಅಧ್ಯಕ್ಷೀಯ ವಿನಾಯಿತಿ ನೀಡಿದ್ದರಿಂದ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿಲ್ಲ ಎಂದು ದಿ ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.
ಈ ಸಂಬಂಧ ಪೊಲೀಸರು ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಇತರ ನಾಯಕರ ವಿರುದ್ಧ ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿ ಕೇಸ್ ದಾಖಲಿಸಿದ್ದರು.
ಆಗಸ್ಟ್ 31, 2014 ರಂದು, ಈಗ ಆಡಳಿತ ನಡೆಸುತ್ತಿರುವ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಮತ್ತು ಪಾಕಿಸ್ತಾನ ಅವಾಮಿ ತೆಹ್ರೀಕ್ ಪಕ್ಷದ ಕಾರ್ಯಕರ್ತರು ಸಂಸತ್ ಮತ್ತು ಪ್ರಧಾನಿ ಕಚೇರಿಗೆ ಮುತ್ತಿಗೆ ಹಾಕಿದ್ದರು. ಈ ವೇಳೆ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಮೂವರು ಮೃತಪಟ್ಟಿದ್ದು ಮತ್ತು 26 ಮಂದಿ ಗಾಯಗೊಂಡಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications