LOCಯಲ್ಲಿ ಭಾರತೀಯ ಸೇನೆಯಿಂದ ದಾಳಿ, ನಾಲ್ವರು ಸಾವು: ಪಾಕ್ ಆರೋಪ
ಇಸ್ಲಾಮಾಬಾದ್, ಜೂನ್ 18: ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೈನಿಕರು ದಾಳಿ ನಡೆಸಿ ನಾಲ್ವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಪಾಕ್ ಸೇನೆ ಹೇಳಿದೆ.
Recommended Video
ಮೃತಪಟ್ಟ ನಾಲ್ವರು ನಾಗರಿಕರಲ್ಲಿ ಮಹಿಳೆ ಸೇರಿದ್ದಾರೆ. ಮತ್ತೊಬ್ಬರಿಗೆ ಗಾಯವಾಗಿದೆ. ಭಾರತೀಯ ಸೈನಿಕರ ಗುಂಡಿನ ದಾಳಿಗೆ ಪಾಕಿಸ್ತಾನ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಾಕಿಸ್ತಾನ ಸೇನಾಪಡೆಯ ವಕ್ತಾರ ಮೇಜರ್ ಜನರಲ್ ಬಾಬರ್ ಇಫ್ತಿಖಾರ್, ನಿಕಿಯಾಲ್ ಮತ್ತು ಬಗ್ಸಾರ್ ವಲಯಗಳಲ್ಲಿ ನಾಗರಿಕರ ಮೇಲೆ ಗುರಿಯಾಗಿಟ್ಟುಕೊಂಡು ಭಾರತೀಯ ಸೇನಾ ಯೋಧರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದರು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರತ್ತಾ ಜಬ್ಬಾರ್ ಹಾಗೂ ಲೆವಾನಾ ಖೈತರ್ ಪ್ರದೇಶದಲ್ಲಿ ಮಹಿಳೆ ಸೇರಿ ನಾಲ್ವರನ್ನು ಹತ್ಯೆ ಮಾಡಿದ್ದು, ಓರ್ವರಿಗೆ ಗಂಭೀರ ಗಾಯವಾಗಿದೆ ಎಂದು ಹೇಳಿದ್ದಾರೆ. ಬುಧವಾರ ಪಾಕಿಸ್ತಾನವು ನೌಗಾಮ್ ಗಡಿಯಲ್ಲಿ ಗದನವಿರಾಮ ಉಲ್ಲಂಘನೆ ಮಾಡಿತ್ತು, ಭಾರತದ ಸೈನಿಕರ ಮೇಲೆ ಮಾರ್ಟರ್ ಶೆಲ್ಗಳ ದಾಳಿ ನಡೆಸಿದೆ.
ಜೂನ್ 16ರಂದು ಸಂಜೆ ಸಮಯದಲ್ಲಿ ಅಪ್ರಚೋದಿತ ಕದನವಿರಾಮ ಉಲ್ಲಂಘನೆ ಮಾಡಿತ್ತು. ಮಾರ್ಟರ್ ಶೆಲ್ಗಳು ಹಾಗೂ ಆಯುಧಗಳ ಮೂಲಕ ದಾಳಿ ನಡೆಸಿತ್ತು.
ಭಾರತವು ತಕ್ಕ ಪ್ರತಿಕ್ರಿಯೆಯನ್ನು ನೀಡಿದ್ದು, ಪಾಕಿಸ್ತಾನದ ಸೈನಿಕರ ಮೇಲೆ ಪ್ರತಿದಾಳಿ ನಡೆಸಿತ್ತು. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಮೇಲೆ ಆರೋಪ ಮಾಡಿದೆ.
-
US-Iran Talks: ಪಾಕ್ ನೆಲದಲ್ಲಿ 21 ಗಂಟೆಗಳ ಸಂಧಾನ ಮಾತುಕತೆ ವಿಫಲ: ಹೆಚ್ಚಿದ ಯುದ್ಧ ಭೀತಿ- ಪ್ರಮುಖಾಂಶಗಳು -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ












Click it and Unblock the Notifications