ಪಾಕಿಸ್ತಾನ ಭಯೋತ್ಪಾದಕ ಪ್ರಾಯೋಜಕ ದೇಶ: ಆನ್ ಲೈನ್ ಅರ್ಜಿಗೆ ಲಕ್ಷ ಸಹಿ
ನ್ಯೂಯಾರ್ಕ್, ಸೆಪ್ಟೆಂಬರ್ 27: ಪಾಕಿಸ್ತಾನವನ್ನು ಭಯೋತ್ಪಾದನೆ ಪ್ರಾಯೋಜಕ ದೇಶ ಎಂದು ಘೋಷಿಸಲು ವೈಟ್ ಹೌಸ್ ಗೆ ಸಲ್ಲಿಸಿದ ಆನ್ ಲೈನ್ ಅರ್ಜಿಗೆ ಸಹಿ ಹಾಕಿದವರ ಸಂಖ್ಯೆ ಒಂದು ಲಕ್ಷ ದಾಟಿದೆ. ಆ ಮೂಲಕ ಬರಾಕ್ ಒಬಾಮ ಆಡಳಿತದಿಂದ ಪ್ರತಿಕ್ರಿಯೆ ಪಡೆಯುವ ಅರ್ಹತೆ ಪಡೆದಿದೆ.
ಇದು ಆನ್ ಲೈನ್ ಮೂಲಕ ವೈಟ್ ಹೌಸ್ ಗೆ ಸಲ್ಲಿಸಿರುವ ಮೂರನೇ ಜನಪ್ರಿಯ ಅರ್ಜಿಯಾಗಿದೆ. ಒಂದು ಲಕ್ಷದ ಹತ್ತು ಸಾವಿರ ಮಂದಿ ಈ ಅರ್ಜಿಗೆ ಸಹಿ ಹಾಕಿದ್ದಾರೆ. ಇನ್ನು ಅರವತ್ತು ದಿನದೊಳಗೆ ಒಬಾಮ ಆಡಳಿತ ಯಂತ್ರದಿಂದ ಪ್ರತಿಕ್ರಿಯೆ ದೊರೆಯುವ ನಿರೀಕ್ಷೆಯಿದೆ. ಈ ಆನ್ ಲೈನ್ ಅರ್ಜಿ ಸೆ.21ರಂದು ರೂಪಿಸಲಾಯಿತು.[ಕಾಶ್ಮೀರದ ಕನಸು ಮರೆತುಬಿಡಿ: ವಿಶ್ವಸಂಸ್ಥೆಯಲ್ಲಿ ಸುಷ್ಮಾ ಖಡಕ್ ಸಂದೇಶ]

ಕಾಂಗ್ರೆಸ್ ನ ಟೆಡ್ ಪೊ, ಡಾಣಾ ರೊಹ್ರಾಬಚೆರ್ 'ಪಾಕಿಸ್ತಾನ ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರ' ಕಾಯ್ದೆಯನ್ನು ಜನ ಪ್ರತಿನಿಧಿಗಳ ಸಭೆಯಲ್ಲಿ ಮಂಡಿಸಿದ್ದರು. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದ ನಿರಂತರವಾಗಿ ತೊಂದರೆ ಅನುಭವಿಸುತ್ತಿರುವ ಅಮೆರಿಕಾ, ಭಾರತ ಮತ್ತು ಇತರ ದೇಶಗಳ ಜನರಿಗೆ ಈ ಅರ್ಜಿ ಬಹಳ ಮುಖ್ಯವಾದದ್ದು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.[ಸೈನಿಕರ ತ್ಯಾಗ ವ್ಯರ್ಥವಾಗಲ್ಲ, ಉರಿ ದಾಳಿ ಮರೆಯಲ್ಲ: ಮೋದಿ]
'ವಿ ದ ಪೀಪಲ್' ವೈಟ್ ಹೌಸ್ ನ ಆನ್ ಲೈನ್ ಅರ್ಜಿ ಅಮೆರಿಕಾ ರಾಷ್ಟ್ರಪತಿ ಬರಾಕ್ ಒಬಾಮ ಅವರೇ ಆರಂಭಿಸಿದ್ದು, ಅಮೆರಿಕಾ ನಾಗರಿಕರು ಯಾವುದೇ ನಿರ್ದಿಷ್ಟ ವಿಷಯದ ಬಗ್ಗೆ ಆಡಳಿತ ಯಂತ್ರದ ಗಮನ ಸೆಳೆಯಲು ಈ ರೀತಿ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಾರೆ. ಸದ್ಯಕ್ಕೆ ಈ ಅರ್ಜಿ ಮೂರನೇ ಸ್ಥಾನದಲ್ಲಿದೆ.
ಈ ರೀತಿ ಘೋಷಿಸುವುದಕ್ಕೆ ನಿರ್ದಿಷ್ಟ ಕ್ರಮ ಅನುಸರಿಸಬೇಕು. ಇದರಲ್ಲಿ ಕೆಲವು ಕಾನೂನು ಪ್ರಕ್ರಿಯೆಗಳು, ಮೌಲ್ಯಮಾಪನ ಇರುತ್ತವೆ ಎಂದು ವೈಟ್ ಹೌಸ್ ನ ಉಪ ವಕ್ತಾರ ಮಾರ್ಕ್ ಟೋನರ್ ಹೇಳಿದ್ದಾರೆ. "ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕಿಸ್ತಾನದ ಶಕ್ತಿ ಹೆಚ್ಚಿಸುವುದು, ಹಿಂಸಾತ್ಮಕ ಭಯೋತ್ಪಾದಕ ಕೃತ್ಯದ ವಿರುದ್ಧ ಅಭಿಯಾನಕ್ಕೆ ನೆರವಾಗುವುದಕ್ಕೆ ನಮ್ಮ ಗಮನ" ಎಂದು ಅವರು ಹೇಳಿದ್ದಾರೆ.[ಗಡಿಯಾಚೆಗಿನ ಕಾರ್ಯಾಚರಣೆ ನಡೆದಿಲ್ಲ: ಭಾರತೀಯ ಸೇನೆ]
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನ ಪ್ರಗತಿ ಹಾದಿಯಲ್ಲಿದೆ. ಆದರೆ ನೆರೆಯ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಭಯೋತ್ಪಾದಕ ಗುಂಪುಗಳು ವಿರುದ್ಧ ಪಾಕಿಸ್ತಾನ ಕ್ರಮಕ್ಕೆ ಮುಂದಾಗಬೇಕು. ಉಗ್ರಗಾಮಿಗಳಿಗೆ ಸ್ವರ್ಗದಂತಿರುವ ಎಲ್ಲ ಜಾಗಗಳು ಹೇಳಹೆಸರಿಲ್ಲದಂತೆ ಆಗಬೇಕು ಎಂದು ಟೋನರ್ ಹೇಳಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications