ಟಿಂಡರ್ ಸೇರಿದಂತೆ ಐದು ಆನ್ಲೈನ್ ಡೇಟಿಂಗ್ ಆಪ್ ನಿಷೇಧ!
ಇಸ್ಲಾಮಾಬಾದ್, ಸೆ. 1: ಜನಪ್ರಿಯ ಆನ್ಲೈನ್ ಡೇಟಿಂಗ್ ಅಪ್ಲಿಕೇಷನ್ ಟಿಂಡರ್ ಸೇರಿದಂತೆ ಐದು ಅಪ್ಲಿಕೇಷನ್ ಮೇಲೆ ಪಾಕಿಸ್ತಾನ ಸರ್ಕಾರ ನಿಷೇಧ ಹೇರಿದೆ.
Recommended Video
ಪಾಕಿಸ್ತಾನದ ಟೆಲಿಕಾಂ ಪ್ರಾಧಿಕಾರ(ಪಿಟಿಎ) ಕ್ಕೆ ಹಲವಾರು ದೂರುಗಳು ಬಂದಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಮುನ್ನ ಜನಪ್ರಿಯ ಆನ್ ಲೈನ್ ವಿಡಿಯೋ ಗೇಮ್ ಪಬ್ಜಿ ಮೇಲೆ ತಾತ್ಕಾಲಿಕ ನಿಷೇಧ ಹೇರಲಾಗಿತ್ತು. ಪಬ್ಜಿ ಆಡುವುದರಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿತ್ತು.
ಟಿಂಡರ್ ನಿಷೇಧ ಏಕೆ?
ಟಿಂಡರ್ ಹಾಗೂ ಇನ್ನಿತರ ಅಪ್ಲಿಕೇಷನ್ ಗಳಿಂದ ಅನೈತಿಕ ಚಟುವಟಿಕೆಗಳು ಹೆಚ್ಚಾಗಿವೆ. ಅಸಭ್ಯ ಚಿತ್ರ, ಬರಹ, ಧರ್ಮ ವಿರೋಧಿ ಕಾರ್ಯಗಳಲ್ಲಿ ಯುವ ಜನಾಂಗ ತೊಡಗಿದೆ ಎಂದು ದೂರು ಬಂದಿದ್ದರಿಂದ ಈ ಕ್ರಮ ಜರುಗಿಸಲಾಗಿದೆ. ಯೂಟ್ಯೂಬ್ ನಲ್ಲೂ ಇಂಥ ವಿಡಿಯೋಗಳನ್ನು ನಿರ್ಬಂಧಿಸಲು ಕೋರಲಾಗಿದೆ. ಇಲ್ಲದಿದ್ದರೆ ಯೂಟ್ಯೂಬ್ ಬಳಕೆ ಕೂಡಾ ಬಂದ್ ಆಗಲಿದೆ ಎಂದು ಪಿಟಿಎ ಹೇಳಿದೆ.

ಯಾವೆಲ್ಲ ಆಪ್ ಬಳಕೆ ಬಂದ್?
ಟಿಂಡರ್, ಸಲಿಂಗಿಗಳ ಬಳಕೆಗೆ ಇರುವ ಗ್ರಿಂಡ್ರ್, ಸೇಹಾಯ್, ಟ್ಯಾಗ್ಡ್ ಹಾಗೂ ಸ್ಕೌಟ್ ಆಪ್ ಬಳಕೆ ನಿರ್ಬಂಧಿಸಲಾಗಿದೆ. ಸಾಮಾಜಿಕ ಜಾಲ ತಾಣಗಳು ಪಾಕಿಸ್ತಾನದ ಸಾಮಾಜಿಕ ಮಾಧ್ಯಮ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿವೆ ಎಂದು ಆದೇಶದಲ್ಲಿ ಹೇಳಲಾಗಿದೆ.
ನಿಷೇಧದ ವಿರುದ್ಧ ದನಿ
ಪಾಕಿಸ್ತಾನದ ಡಿಜಿಟಲ್ ಹಕ್ಕುಗಳ ಪರ ಹೋರಾಟ ನಡೆಸುವ ಬೈಟ್ಸ್ ಎಂಬ ಗುಂಪು ಪಿಟಿಎ ಈ ಕ್ರಮವನ್ನು ಬಲವಾಗಿ ಖಂಡಿಸಿದ್ದು, ನೈತಿಕ ಪೊಲೀಸ್ ಗಿರಿಯಿಂದಲೇ ಯುವ ಜನಾಂಗ ದಿಕ್ಕು ತಪ್ಪುತ್ತಿದೆ ಎಂದಿದೆ.
ಯಾವ ಆಪ್ ಬಳಕೆ ಮಾಡಬೇಕು ಮಾಡಬಾರದು ಎಂಬ ಪರಿಜ್ಞಾನ ನಾಗರಿಕರಲ್ಲಿ ಇರುತ್ತದೆ. ಬಳಕೆ ನಿರ್ಬಂಧ, ನಿಷೇಧ ಹೇರುವ ಮೂಲಕ ಯುವ ಜನಾಂಗದ ಮೇಲೆ ಮಾನಸಿಕ ಒತ್ತಡ ಹೇರಲು ಸರ್ಕಾರ ಹೊರಡಿದೆ ಎಂದು ಬೈಟ್ ಗುಂಪಿನ ಷಹಜಾದ್ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications