ಸಾಮಾಜಿಕ ಜಾಲತಾಣಗಳ ಮೇಲೆ ನಿರ್ಬಂಧ ವಿಧಿಸಿದ ಪಾಕಿಸ್ತಾನ
ಇಸ್ಲಮಾಬಾದ್, ಏಪ್ರಿಲ್ 16: ಪಾಕಿಸ್ತಾನದಲ್ಲಿ ಫ್ರಾನ್ಸ್ ವಿರೋಧಿ ಪ್ರತಿಭಟನೆ-ಹಿಂಸಾಚಾರ ತೀವ್ರವಾಗಿರುವ ಬೆನ್ನಲ್ಲೇ ಅಲ್ಲಿನ ಸರ್ಕಾರ ಎಲ್ಲ ಸಾಮಾಜಿಕ ಮಾಧ್ಯಮಗಳ ಬಳಕೆ ಮೇಲೆ ನಿಷೇಧ ಹೇರಿದೆ. ದೇಶದ ಆಂತರಿಕ ಸಚಿವಾಲಯದ ಆದೇಶದಂತೆ ಫೇಸ್ಬುಕ್, ಟ್ವಿಟ್ಟರ್ ಒಳಗೊಂಡಂತೆ ಪ್ರಮುಖ ಸಾಮಾಜಿಕ ಜಾಲತಾಣಗಳ ಮೇಲೆ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಪಾಕಿಸ್ತಾನದ ಮಾಧ್ಯಮ ನಿಯಂತ್ರಣೆ ವಕ್ತಾರ ಖುರ್ರಮ್ ಮೆಹ್ರಾನ್ ಹೇಳಿದ್ದಾರೆ.
ಲಾಹೋರ್ ನಗರದ ಪೂರ್ವ ಭಾಗದಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿರುವ ಪ್ರತಿಭಟನಾಕಾರರನ್ನು ತೆರವುಗೊಳಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ನಿಷೇಧಿತ ಇಸ್ಲಾಮಿಸ್ಟ್ ರಾಜಕೀಯ ಪಕ್ಷದ ಮುಖಂಡ ಸಾದ್ ರಿಜ್ವಿ, ಪ್ರತಿಭಟನೆಯಿಂದ ಹಿಂದೆ ಸರಿಯುವಂತೆ ತನ್ನ ಬೆಂಬಲಿಗರಿಗೆ ಕರೆ ನೀಡಿದ್ದಾರೆ ಎಂಬ ಹೇಳಿಕೆ ಬೆನ್ನಲ್ಲೇ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.
ಸಾದ್ ರಿಜ್ವಿಯ ತೆಹ್ರೀಕ್-ಇ-ಲಬಾಯಿಕ್ ಪಾಕಿಸ್ತಾನ್ ಪಾರ್ಟಿಯು ಹಿಂಸಾಚಾರದ ಪ್ರತಿಭಟನೆಗೆ ಪ್ರಚೋದನೆ ನೀಡಿದ್ದರಿಂದ ಅದನ್ನು ನಿಯಂತ್ರಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಇದುವರೆಗಿನ ಹಿಂಸಾಚಾರಗಳಲ್ಲಿ ಇಬ್ಬರು ಪೊಲೀಸರು ಜೀವ ಕಳೆದುಕೊಂಡಿದ್ದು, 580 ಮಂದಿ ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ ಮೂವರು ಪ್ರತಿಭಟನಾಕಾರರು ಕೂಡ ಮೃತಪಟ್ಟಿದ್ದಾರೆ.

ಸಾದ್ ರಿಜ್ವಿಯ ಹೇಳಿಕೆ ಇರುವ ಫೋಟೊವೊಂದನ್ನು ಪ್ರಧಾನಿಯ ಸಲಹೆಗಾರರೊಬ್ಬರು ಬಿಡುಗಡೆ ಮಾಡಿದ್ದು, ಅದರಲ್ಲಿ ಅವರು ಪ್ರತಿಭಟನೆಯನ್ನು ಸ್ಥಗಿತಗೊಳಿಸುವಂತೆ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಆದರೆ ಈ ಬಗ್ಗೆ ರಿಜ್ವಿ ಅಥವಾ ಪಕ್ಷದ ಅವರ ಯಾವುದೇ ನಾಯಕರು ಖಾತರಿ ನೀಡಿಲ್ಲ. ಪ್ರತಿಭಟನೆ ನಿಲ್ಲಿಸುವುದಕ್ಕೂ ಮುನ್ನ ಸ್ವತಃ ರಿಜ್ವಿ ಅವರ ಮಾತನ್ನು ಕೇಳಬೇಕು ಎಂದು ಅವರ ಬೆಂಬಲಿಗರು ಪಟ್ಟುಹಿಡಿದಿದ್ದಾರೆ. ಲಾಹೋರ್ನಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ಮುಂದುವರಿದಿದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications