ಭಾರತದ ವಿಮಾನಗಳಿಗೆ ಪಾಕಿಸ್ತಾನ ಮತ್ತೆ ನಿರ್ಬಂಧ
ಇಸ್ಲಾಮಾಬಾದ್, ಆಗಸ್ಟ್ 8: ಬಾಲಾಕೋಟ್ ಸರ್ಜಿಕಲ್ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿನ ವಿಮಾನಯಾನ ಪ್ರದೇಶವನ್ನು ಪರಸ್ಪರ ರದ್ದುಗೊಳಿಸಲಾಗಿತ್ತು.
ಈಗ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಬೆನ್ನಲ್ಲೇ ಈಗ ಪಾಕಿಸ್ತಾನವು ತನ್ನ ವಿಮಾನಯಾನ ಪ್ರದೇಶದಲ್ಲಿ ಭಾರತದ ವಿಮಾನ ಹಾರಾಟವನ್ನುಭಾಗಶಃ ಸ್ಥಗಿತಗೊಳಿಸಿದೆ.
ಬೆಳಗಿನ ಜಾವ 2 ಗಂಟೆಯಿಂದ 11 ಗಂಟೆವರೆಗೆ ವಾಯುಯಾನ ಸ್ಥಗಿತಗೊಳಿಸಿದ ಆದೇಶಿಸಿದೆ. ಈ ಹಿಂದೆಯೂ ಇದೇ ರೀತಿಯ ಆದೇಶ ಮಾಡಿದ್ದರಿಂದ ಪಾಕಿಸ್ತಾನಕ್ಕೆ 820ಕ್ಕೂ ಅಧಿಕ ಕೋಟಿ ರೂ ನಷ್ಟವಾಗಿತ್ತು. ಭಾರತಕ್ಕೆ 416ಕ್ಕೂ ಅಧಿಕ ಕೋಟಿ ರೂ ತೊಂದರೆಯಾಗಿತ್ತು.

ಈಗ ಕೆಲ ಸಿನಗಳ ಹಿಂದೆ ಮಾತ್ರ ಭಾರತೀಯ ವಿಮಾನಗಳಿಗೂ ಪಾಕಿಸ್ತಾನ ವಾಯುಯಾನ ಪ್ರದೇಶದಲ್ಲಿ ಹಾರಾಡಲು ಅನುಮತಿ ನೀಡಲಾಗಿತ್ತು.
ಆದರೆ ಈಗ ಮತ್ತೆ ಪಾಕಿಸ್ತಾನ ಅದೇ ಎಡವಟ್ಟು ಮಾಡುತ್ತಿದೆ.ವಿದೇಶಿ ವಿಮಾನಗಳು ಓಡಾಡುವ ಸಮಯವನ್ನೇ ಗುರಿಯಾಗಿಸಿಕೊಂಡು ಈ ಬದಲಾವಣೆ ಮಾಡಲಾಗುತ್ತಿದೆ. ಬೆಳಗಿನ ಸಮಯದಲ್ಲಿ ಹೆಚ್ಚು ಪ್ರಾದೇಶಿಕ ವಿಮಾನಗಳು ಓಡಾಡುತ್ತವೆ. ವಿದೇಶಿ ವಿಮಾನಗಳ ಮೇಲೆ ಪ್ರತಿಬಂಧ ಹೇರುವುದರಿಂದ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನದ ಧ್ವನಿಗೆ ಬೆಂಬಲ ನೀಡುವಂತಾಗಲಿ ಎನ್ನುವ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ಭಾರತದೊಂದಿಗೆ ದ್ವಿಪಕ್ಷೀಯ ವಾಣಿಜ್ಯ ಸಂಬಂಧ ಭಾಗಶಃ ರದ್ದುಪಡಿಸಲು ಇಮ್ರಾನ್ ಖಾನ್ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.
ಇದರಿಂದ ಭಾರತ ಹಾಗೂ ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಇನ್ನಷ್ಟು ಹಳಸಲಿದೆ. ಪಾಕಿಸ್ತಾನದ ಕ್ರಮಕ್ಕೆ ಪ್ರತಿಯಾಗಿ ಭಾರತವು ಶೀಘ್ರದಲ್ಲೇ ಈ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು ಇದರಿಂದ ಗಡಿ ದೇಶಗಳ ಸಮಸ್ಯೆಗಳು ಇನ್ನಷ್ಟು ಉಲ್ಬಣಿಸುವ ಸಾಧ್ಯತೆ ಇದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications