ಗಡಿ ಸಮೀಪದ ಪ್ರದೇಶ ತಾಲಿಬಾನ್ ವಶಕ್ಕೆ ಪಡೆದ ಬಳಿಕ ಅಫ್ಘಾನ್ನ ಪ್ರಮುಖ ಗಡಿ ಮುಚ್ಚಿದ ಪಾಕ್
ಕರಾಚಿ, ಜು.15: ಅಫ್ಘಾನಿಸ್ತಾನದ ಪ್ರಮುಖ ಗಡಿ ಪ್ರದೇಶ ಸ್ಪಿನ್ ಬೋಲ್ಡಾಕ್ ಅನ್ನು ತಾಲಿಬಾನ್ ಉಗ್ರರು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ ಎಂಬ ವರದಿಗಳಾಗಿದೆ. ಈ ಹಿನ್ನೆಲೆಯಲ್ಲಿ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಅಫ್ಘಾನಿಸ್ತಾನದೊಂದಿಗಿನ ತನ್ನ ಪ್ರಮುಖ ಗಡಿಯನ್ನು ಪಾಕಿಸ್ತಾನ ಮುಚ್ಚಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
Recommended Video
ಚಮನ್ ಗಡಿಯಲ್ಲಿರುವ ಅಫ್ಘಾನಿಸ್ತಾನದೊಂದಿಗಿನ ಸ್ನೇಹ ಗೇಟ್ ಕ್ರಾಸಿಂಗ್ ಅನ್ನು ಮುಚ್ಚಲಾಗಿದೆ ಎಂದು ಚಮನ್ ಸಹಾಯಕ ಆಯುಕ್ತ ಆರಿಫ್ ಕಾಕರ್ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.
"ಭದ್ರತೆಯು ಹೆಚ್ಚಿನ ಎಚ್ಚರಿಕೆಯಲ್ಲಿದೆ" ಎಂದು ಹೇಳಿದ ಚಮನ್ ಸಹಾಯಕ ಆಯುಕ್ತ ಆರಿಫ್ ಕಾಕರ್, ಸ್ಪಿನ್ ಬೋಲ್ಡಾಕ್ ಕ್ರಾಸಿಂಗ್ನ ನಿಯಂತ್ರಣವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಲಿಲ್ಲ.

ಗಡಿ ಪಾಕಿಸ್ತಾನದ ಪಟ್ಟಣವಾದ ಚಮನ್ ಜೊತೆಗೆ ಸಂಪರ್ಕ ಸಾಧಿಸಲು ಸ್ಪಿನ್ ಬೋಲ್ಡಾಕ್ ಪ್ರಮುಖ ಗಡಿ ಪ್ರದೇಶವಾಗಿದೆ. ಈ ಮೂಲಕ ಉಭಯ ದೇಶಗಳ ನಡುವೆ ಹೆಚ್ಚಿನ ವ್ಯಾಪಾರ ನಡೆಯುತ್ತದೆ. ಆದರೆ ಈಗ ಅಫ್ಘಾನಿಸ್ತಾನಕ್ಕೆ ತಾಲಿಬಾನ್ ದಾಳಿ ಬೆನ್ನಲ್ಲೇ ಪಾಕಿಸ್ತಾನ ಈ ಗಡಿ ಪ್ರದೇಶ ಮುಚ್ಚಿದೆ.
ಇತ್ತೀಚಿನ ವಾರಗಳಲ್ಲಿ ತಾಲಿಬಾನ್, ಅಫ್ಘಾನಿಸ್ತಾನದ ಗಡಿ ಪ್ರದೇಶಗಳನ್ನು, ಬಂದರುಗಳನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಸ್ಪಿನ್ ಬೋಲ್ಡಾಕ್ ಕ್ರಾಸಿಂಗ್ ಬಳಿ ತಾಲಿಬಾನ್ ಉಗ್ರರು ಇರುವ ಚಿತ್ರಗಳು ವೈರಲ್ ಆಗುತ್ತಿದೆ. ಆದರೆ ಅಫ್ಘಾನ್ ಸರ್ಕಾರಿ ಅಧಿಕಾರಿಗಳು ಈ ಪ್ರದೇಶದ ಮೇಲೆ ಇನ್ನೂ ತಾವು ನಿಯಂತ್ರಣವನ್ನು ಹೊಂದಿದ್ದಾರೆಂದು ಹೇಳಿದ್ದಾರೆ.
"ಬೋಲ್ಡಾಕ್ ಮತ್ತು ಚಮನ್ ನಡುವಿನ ಪ್ರಮುಖ ರಸ್ತೆಯನ್ನು (ಸ್ಪಿನ್) ತಾಲಿಬಾನ್ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಈ ಪ್ರದೇಶದ ವ್ಯಾಪಾರಿಗಳು ಮತ್ತು ನಿವಾಸಿಗಳಿಗೆ ತಮ್ಮ ಭದ್ರತೆಯನ್ನು ಖಾತರಿಪಡಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮ ವರದಿಗಳನ್ನು ತೋರಿಸಿದೆ. ಹಾಗೆಯೇ ಯುದ್ಧ ಪೀಡಿತ ದೇಶದಿಂದ ವಿದೇಶಿ ಪಡೆಗಳು ಹಿಂದೆ ಸರಿದಿರುವ ಕಾರಣ ಅಫ್ಘಾನಿಸ್ತಾನದ ಪರವಾಗಿ ಪಾಕಿಸ್ತಾನ ಸರ್ಕಾರ ನಿಲ್ಲದು ಎಂದು ಹೇಳಲಾಗಿದೆ.
ಇತ್ತೀಚಿನ ವಾರಗಳಲ್ಲಿ ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದಲ್ಲಿ ಹಲವಾರು ಜಿಲ್ಲೆಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಹಲವಾರು ಸೈನಿಕರು ಗಡಿ ಪ್ರದೇಶದಿಂದ ಓಡಿ ಹೋಗಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಅಫ್ಘಾನಿಸ್ತಾನದಿಂದ ಅಮೆರಿಕ ತನ್ನ ಸೇನೆಯನ್ನು ಹಿಂಪಡೆದ ಬಳಿಕ ನಡೆದಿದೆ. ಅಫ್ಘಾನಿಸ್ತಾನದಲ್ಲಿ ಸುಮಾರು 20 ವರ್ಷಗಳ ಕಾಲ ಅಮೆರಿಕದ ಮಿಲಿಟರಿ ಮಿಷನ್ ಇತ್ತು. ಆಗಸ್ಟ್ 31 ರಂದು ಮುಕ್ತಾಯಗೊಳ್ಳಲಿದೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡನ್ ಕಳೆದ ವಾರ ಘೋಷಿಸಿದ್ದರು.
(ಒನ್ಇಂಡಿಯಾ ಸುದ್ದಿ)
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications