ಪಾಕಿಸ್ತಾನದಲ್ಲಿ ಹಿಂದೂ ದೇಗುಲ ನಿರ್ಮಾಣಕ್ಕೆ ಅಡ್ಡಿ ಆತಂಕ ದೂರ
ಇಸ್ಲಾಮಾಬಾದ್, ಜುಲೈ 09: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ ಹಿಂದೂ ದೇಗುಲ ನಿರ್ಮಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ಇಲ್ಲಿನ ನ್ಯಾಯಾಲಯವೊಂದು ತಳ್ಳಿ ಹಾಕಿದೆ. ಆದರೆ, ದೇಗುಲ ನಿರ್ಮಾಣಕ್ಕೆ ಇದ್ದ ಅಡ್ಡಿ ದೂರಾಗಿದೆ ಎನ್ನುವಷ್ಟರಲ್ಲಿ ಈ ಬಗ್ಗೆ ವರದಿ ಸಲ್ಲಿಸುವಂತೆ ಉನ್ನತಮಟ್ಟದ ಸಮಿತಿಗೆ ಸರ್ಕಾರ ಸೂಚಿಸಿದೆ.
Recommended Video
ದೇಗುಲ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಅಮೀರ್ ಫಾರೂಕ್ ಅವರನ್ನೊಳಗೊಂಡ ಏಕ ಸದಸ್ಯ ಇಸ್ಲಾಮಾಬಾದ್ ಹೈಕೋರ್ಟ್ ಪೀಠವು ಅರ್ಜಿಗಳನ್ನು ತಳ್ಳಿ ಹಾಕಿದೆ. ಹಿಂದೂ ಪಂಚಾಯತ್ ತನ್ನ ಸ್ವಂತ ಹಣದಿಂದ ದೇವಾಲಯ ಕಟ್ಟಲು ಯಾವುದೇ ಅಡ್ಡಿಇಲ್ಲ ಎಂದು ತಿಳಿಸಿದೆ.
ರಾಜಧಾನಿಯ ಎಚ್ - 9 ಆಡಳಿತ ವಿಭಾಗದಲ್ಲಿ 20 ಸಾವಿರ ಚದರಡಿ(ಸುಮಾರು 0.5 ಎಕರೆ) ಜಾಗದಲ್ಲಿ ಶ್ರೀಕೃಷ್ಣ ದೇವಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ. ಮಾನವ ಹಕ್ಕುಗಳ ಸಂಸದೀಯ ಕಾರ್ಯದರ್ಶಿ ಲಾಲ್ ಚಂದ್ ಮಾಲ್ಹಿ ಅವರು ಇತ್ತೀಚೆಗೆ ದೇವಾಲಯಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು.

ಪಾಕ್ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಪಿಎಂಎಲ್ - ಕ್ಯೂ ಪಕ್ಷ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಿ, ದೇವಾಲಯ ನಿರ್ಮಿಸುವುದು ಇಸ್ಲಾಂ ತತ್ವಗಳಿಗೆ ವಿರುದ್ಧವಾಗಿದೆ ಎಂದು ವಾದಿಸಿದೆ. 2017ರಲ್ಲೇ ಈ ಜಾಗದಲ್ಲಿ ಧಾರ್ಮಿಕ ಕೇಂದ್ರ ನಿರ್ಮಾಣಕ್ಕಾಗಿ ಜಾಗ ಮಂಜೂರಾಗಿದೆ. ಸಾರ್ವಜನಿಕರ ಹಣ ಬಳಸದೆ ದೇಗುಲ ನಿರ್ಮಿಸಬಹುದು ಎಂದು ಸಚಿವ ಬಷೀರ್ ಹೇಳಿದ್ದಾರೆ. 220 ಮಿಲಿಯನ್ ಜನಸಂಖ್ಯೆಯುಳ್ಳ ಪಾಕಿಸ್ತಾನದಲ್ಲಿ 3.5 ಮಿಲಿಯನ್ ಅಥವಾ ಶೇ 1.6 ರಷ್ಟು ಮಾತ್ರ ಹಿಂದುಗಳಿದ್ದು, ಸಿಖ್, ಕೈಸ್ತರ ಜೊತೆ ಅಲ್ಪಸಂಖ್ಯಾತರಾಗಿದ್ದಾರೆ. ಅಲ್ಪಸಂಖ್ಯಾತರ ಹಕ್ಕುಗಳಿಗೆ ಬೆಲೆ ನೀಡಲಾಗುವುದು ದೇಶದ ಎಲ್ಲಾ ನಾಗರಿಕರನ್ನು ಸಮಾನ ದೃಷ್ಟಿಯಿಂದ ಕಾಣಲಾಗುತ್ತಿದೆ ಎಂದು ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications