ಒಲ್ಲದ ಮನಸ್ಸಿನಿಂದ ಕೊನೆಗೂ ಒತ್ತಡಕ್ಕೆ ಮಣಿದ ಪಾಕಿಸ್ತಾನ
Recommended Video

ಇಸ್ಲಮಾಬಾದ್, ಫೆ 13: ಯಾರು ಏನೇ ಹೇಳಿದರು, ತನ್ನ ನಿಲುವಿನಿಂದ ಹಿಂದಕ್ಕೆ ಸರಿಯದೇ ಇದ್ದ ಪಾಕಿಸ್ತಾನ, ಕೊನೆಗೂ 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸೇರಿ ಹಲವಾರು ಮುಸ್ಲಿಂ ನಾಯಕರು ಮತ್ತು ಸಂಘಟನೆಗಳನ್ನು 'ಭಯೋತ್ಪಾದಕ'ರ ಪಟ್ಟಿಗೆ ಅಧಿಕೃತವಾಗಿ ಸೇರಿಸಿದೆ.
ವಿಶ್ವಸಂಸ್ಥೆಯ ಭದ್ರತಾ ಕೌನ್ಸಿಲ್ ಪಟ್ಟಿ ಮಾಡಿರುವ ಎಲ್ಲಾ ವ್ಯಕ್ತಿಗಳನ್ನು ಮತ್ತು ಸಂಘಟನೆಗಳನ್ನು, ಭಯೋತ್ಪಾದಕರ ಪಟ್ಟಿಗೆ ಸೇರಿಸುವ ಕಡತಕ್ಕೆ ಪಾಕಿಸ್ತಾನದ ರಾಷ್ಟ್ರಪತಿ ಸೋಮವಾರ (ಫೆ 12) ಅಂಕಿತ ಹಾಕಿದ್ದಾರೆ.
ಈ ಪಟ್ಟಿಯಲ್ಲಿ ಪಾಕಿಸ್ತಾನದಲ್ಲಿ ಭಾರೀ ಪ್ರಭಾವಿ ವ್ಯಕ್ತಿಯಾಗಿರುವ ಹಫೀಜ್ ಸಯೀದ್ ಅವರ ಜೆಯುಡಿ (ಜಮಾತ್-ಉದ್-ದವಾ) ಉಗ್ರ ಸಂಘಟನೆಯೂ ಒಂದು. ಈ ಎಲ್ಲಾ ಸಂಘಟನೆಗಳ ಬ್ಯಾಂಕ್ ಅಕೌಂಟ್ ಅನ್ನು ಪಾಕಿಸ್ತಾನ ಸರಕಾರ ಸದ್ಯದಲ್ಲೇ ಮುಟ್ಟುಗೋಲು ಹಾಕಿಕೊಳ್ಳಲಿದೆ.

ವಿಶ್ವಸಂಸ್ಥೆಯ ಭದ್ರತಾ ಕೌನ್ಸಿಲ್ ಈಗಾಗಲೇ ನಿಷೇಧ ಹೇರಿರುವ 72 ವ್ಯಕ್ತಿಗಳನ್ನು, ಪಾಕಿಸ್ತಾನದ ಗೃಹ ಸಚಿವಾಲಯ ಜನವರಿ ತಿಂಗಳಲ್ಲಿ ಉಗ್ರರ ಪಟ್ಟಿಗೆ ಸೇರಿಸಬೇಕೆಂದು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿತ್ತು.
ಕಳೆದ ವರ್ಷ ಹಫೀಜ್ ಸಯೀದ್ ನನ್ನು ಪಾಕಿಸ್ತಾನ ಗೃಹಬಂಧನದಿಂದ ಬಿಡುಗಡೆಗೊಳಿಸಿತ್ತು. ಪಾಕಿಸ್ತಾನದ ಈ ಕ್ರಮ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಗೃಹಬಂಧನದಿಂದ ಹೊರಬಂದ ನಂತರ ಪಟ್ಟಿಯಿಂದ ಕೈಬಿಡುವಂತೆ ಹಫೀಜ್ ಪರ ವಕೀಲರು ವಿಶ್ವಸಂಸ್ಥೆಗೆ ಮನವಿ ಸಲ್ಲಿಸಿದ್ದರು.
ಎಫ್ಎಟಿಎಫ್ (Financial Action Task Force) ಮಂಡಳಿಯ ನಿರ್ಣಾಯಕ ಸಭೆ ಮುಂದಿನ ವಾರ ನಡೆಯಲಿದ್ದು, ಅದಕ್ಕೆ ಮೊದಲೇ ಪಾಕಿಸ್ತಾನ ಸರಕಾರ, ಭಯೋತ್ಪಾದಕರ ಪಟ್ಟಿಗೆ ಸೇರಿಸುವ ಕಡತಕ್ಕೆ ಸಹಿಹಾಕುವ ಮೂಲಕ ಸದ್ಯಕ್ಕೆ ಬಚಾವ್ ಆಗಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications