ಮಹಾಭಾರತ ಕಾಲದ ಪಾರಂಪರಿಕ ಸ್ಥಳದ ರಕ್ಷಣೆಗೆ ಮುಂದಾದ ಪಾಕಿಸ್ತಾನ
ಪೇಶಾವರದಲ್ಲಿರುವ ಹಿಂದೂ ಪ್ರಾಚೀನ ಧಾರ್ಮಿಕ ಸ್ಥಳ ಪಂಜ್ ತೀರ್ಥವನ್ನು ಖೈಬರ್ ಪಂಖ್ತುವಾ ಪ್ರಾಂತ್ಯದ ಸರಕಾರವು ರಾಷ್ಟ್ರೀಯ ಪಾರಂಪರಿಕ ಸ್ಥಳವನ್ನಾಗಿ ಘೋಷಣೆ ಮಾಡಿದೆ. ದೇವಾಲಯ, ಐದು ಕೊಳದ ತುಂಬ ನೀರು, ಹಸಿರಿನಿಂದ ತುಂಬಿದ ನೆಲ ಮತ್ತು ಇದರ ಜತೆಗೆ ಖರ್ಜೂರದ ಮರಗಳಿವೆ.
ಈ ಐದು ಕೊಳಗಳು ಇರುವ ಈ ಪಾರಂಪರಿಕ ಸ್ಥಳವು ಖೈಬರ್ ಪಂಖ್ತುವಾ ವಾಣಿಜ್ಯ ಹಾಗೂ ಕೈಗಾರಿಕೆ ಒಕ್ಕೂಟ ಹಾಗೂ ಚಾಚಾ ಯೂನುಸ್ ಉದ್ಯಾನ ವ್ಯಾಪ್ತಿಯಲ್ಲಿ ಬರುತ್ತದೆ. ನಂಬಿಕೆಹಳ ಪ್ರಕಾರ, ಮಹಾಭಾರತದಲ್ಲಿ ಬರುವ ಪಾಂಡು ಮಹಾರಾಜ ಇದೇ ಪ್ರದೇಶಕ್ಕೆ ಸೇರಿದವನು.

ಹಿಂದೂಗಳು ಕಾರ್ತೀಕ ಮಾಸದಲ್ಲಿ ಇಲ್ಲಿಗೆ ಬರುತ್ತಾರೆ. ಇಲ್ಲಿನ ಕೊಳಗಳಲ್ಲಿ ಸ್ನಾನ ಮಾಡಿ, ಎರಡು ದಿನಗಳ ಕಾಲ ಮರಗಳ ಅಡಿ ಆರಾಧನೆ ಮಾಡುತ್ತಾರೆ. ಅಫ್ಘನ್ ನ ದುರಾನಿ ವಂಶಸ್ಥರು ರಾಜ್ಯಭಾರ ನಡೆಸುವಾಗ ಅಂದರೆ 1747ರಲ್ಲಿ ಈ ಸ್ಥಳವು ಹಾಳಾಗಿತ್ತು. ಆ ನಂತರ ಇಲ್ಲಿನ ಸ್ಥಳೀಯ ಹಿಂದೂಗಳು 1834ರಲ್ಲಿ ಸಿಖ್ಖರ ಆಡಳಿತಾವಧಿಯಲ್ಲಿ ಮತ್ತೆ ದುರಸ್ತಿ ಮಾಡಿದರು.

ಈ ಸ್ಥಳವನ್ನು ಹಾಳು ಮಾಡಿದರೆ ಇಪ್ಪತ್ತು ಲಕ್ಷ ತನಕ ಜುಲ್ಮಾನೆ ಮತ್ತು ಐದು ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ಸರಕಾರ ಘೋಷಣೆ ಮಾಡಿದೆ. ಈ ಸ್ಥಳವನ್ನು ಇನ್ನೂ ಚೆನ್ನಾಗಿ ಅಭಿವೃದ್ಧಿಪಡಿಸಿ, ಕಾಯ್ದಿಟ್ಟುಕೊಳ್ಳುವ ಉದ್ದೇಶದಿಂದ ಸ್ಥಳೀಯವಾಗಿ ಒತ್ತುವರಿ ತೆರವುಗೊಳಿಸುವಂತೆ ಸ್ಥಳೀಯ ಸರಕಾರ ಸೂಚನೆ ನೀಡಿದೆ. ಜತೆಗೆ ಸುತ್ತಲೂ ಭದ್ರತಾ ಗೋಡೆ ನಿರ್ಮಾಣಕ್ಕೂ ಮುಂದಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications