ಭಾರತದ ಯುವಕನಿಗೆ ಹಜ್ ವಿಸಾ ನಿರಾಕರಿಸಿದ ಪಾಕಿಸ್ತಾನ
ನವದೆಹಲಿ, ನವೆಂಬರ್ 24: ಕಾಲ್ನಡಿಗೆಯಲ್ಲಿ ಹಜ್ ಯಾತ್ರೆ ಕೈಗೊಳ್ಳಲು ತನಗೆ ವೀಸಾ ನೀಡುವಂತೆ 29 ವರ್ಷದ ಭಾರತೀಯ ಯುವಕ ಪಾಕಿಸ್ತಾನ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಯನ್ನು ಪಾಕ್ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ. ಹಜ್ ಯಾತ್ರೆಗೆ ಸಂಕಲ್ಪ ಮಾಡಿರುವ ಶಿಹಾಬ್ ಚೊಟ್ಟೂರು ಮೂಲತಃ ಕೇರಳದ ನಿವಾಸಿ. ಶಿಹಾಬ್ ಹಜ್ ಯಾತ್ರೆಗಾಗಿ ಪಾಕಿಸ್ತಾನದ ಮೂಲಕ ಕಾಲ್ನಡಿಗೆಯಲ್ಲಿ ಸೌದಿ ಅರೇಬಿಯಾಕ್ಕೆ ಹೋಗಲು ಬಯಸಿದ್ದರು.
ಶಿಹಾಬ್ ತಮ್ಮ ತವರು ರಾಜ್ಯವಾದ ಕೇರಳದಿಂದ ಹಜ್ ಯಾತ್ರೆಯನ್ನು ಪ್ರಾರಂಭಿಸಿದ್ದರು. ಕಳೆದ ತಿಂಗಳು ಅವರು ಸುಮಾರು 3,000 ಕಿ.ಮೀ ಪ್ರಯಾಣಿಸಿ ವಾಘಾ ಗಡಿ ತಲುಪಿದ್ದರು. ಆದರೆ ವಾಘಾ ಗಡಿಯಲ್ಲಿ ಪಾಕಿಸ್ತಾನದ ವಲಸೆ ಅಧಿಕಾರಿ ವೀಸಾ ಇಲ್ಲದ ಕಾರಣ ಅವರನ್ನು ತಡೆದಿದ್ದಾರೆ. ಆ ನಂತರ ಪಾಕಿಸ್ತಾನದ ಪ್ರಜೆಯಾಗಿರುವ ಸರ್ವರ್ ತಾಜ್ ಅವರು ಶಿಹಾಬ್ಗೆ ವೀಸಾ ನೀಡುವಂತೆ ನ್ಯಾಯಾಲಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿಯ ವಿಚಾರಣೆ ಕೈಗೆತ್ತಿಕೊಂಡ ಲಾಹೋರ್ ಹೈಕೋರ್ಟ್ ವೀಸಾ ನೀಡಲು ನಿರಾಕರಿಸಿದೆ.
ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
'ಶಿಹಾಬ್ ಪರ ಅರ್ಜಿ ಸಲ್ಲಿಸಿದವರು ಭಾರತೀಯ ಪ್ರಜೆಯಲ್ಲ. ನ್ಯಾಯಾಲಯವನ್ನು ಸಂಪರ್ಕಿಸಲು ಅವರು ಅಧಿಕಾರ ಹೊಂದಿಲ್ಲ' ಎಂದು ನ್ಯಾಯಾಲಯ ಹೇಳಿದೆ.

ಭಾರತೀಯ ಪ್ರಜೆಯಾಗಿರುವ ಶಿಹಾಬ್ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಅರ್ಜಿದಾರರಲ್ಲಿ ನ್ಯಾಯಾಲಯ ಕೋರಿತ್ತು. ಇದಾದ ಬಳಿಕ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ
ವೀಸಾ ತನಿಖಾ ಸಂಸ್ಥೆಯ ಪ್ರಕಾರ, ಶಿಹಾಬ್ ಅವರು ಕಾಲ್ನಡಿಗೆಯಲ್ಲಿ ಹಜ್ಗೆ ಪ್ರಯಾಣಿಸುತ್ತಿದ್ದೆ ಎಂದು ಪಾಕಿಸ್ತಾನದ ವಲಸೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಮಾನವೀಯ ನೆಲೆಯಲ್ಲಿ ಪಾಕಿಸ್ತಾನದ ಮೂಲಕ ಹೋಗಲು ಈ ಯುವಕನಿಗೆ ಅವಕಾಶ ನೀಡಬೇಕು. ಕೇರಳದ ನಿವಾಸಿ ಶಿಹಾಬ್ ಪಾಕಿಸ್ತಾನ ಮತ್ತು ಇರಾನ್ ಮಾರ್ಗವಾಗಿ ಸೌದಿ ಅರೇಬಿಯಾ ತಲುಪಲು ಟ್ರಾನ್ಸಿಟ್ ವೀಸಾ ಬಯಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications