ಲಡಾಖ್ ಬಳಿ ಪಾಕ್ ಯುದ್ಧ ವಿಮಾನ, ಎದುರಿಸಲು ಭಾರತವೂ ಸಿದ್ಧ
ಶ್ರೀನಗರ, ಆಗಸ್ಟ್ 12: ಸಂವಿಧಾನದ 370 ನೇ ವಿಧಿಯನ್ನು ಭಾರತ ರದ್ದು ಮಾಡಿದ ನಂತರ ಭಾರತ-ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಬಿಗುಡಾಯಿಸಿದ್ದು, ಪಾಕಿಸ್ತಾನ ಲಡಾಖ್ ಬಳಿಯ ಸ್ಕರ್ಡು ಪ್ರದೇಶದಲ್ಲಿ ತನ್ನ ಯುದ್ಧ ವಿಮಾನಗಳನ್ನು ನಿಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನದ ಪ್ರತಿ ಚಲನವಲನವನ್ನೂ ಭಾರತ ಹದ್ದಿನ ಕಣ್ಣಿಟ್ಟು ವೀಕ್ಷಿಸುತ್ತಿದ್ದು, ಈಗಾಗಲೇ ಗಡಿಯ ಬಳಿ ಪಾಕಿಸ್ತಾನ ಯುದ್ಧ ಸಾಮಾಗ್ರಿಗಳನ್ನು ಕಳಿಸುತ್ತಿದೆ ಎನ್ನಲಾಗಿದೆ.
"ಶನಿವಾರದಂದು ಪಾಕಿಸ್ತಾನಿ ವಾಯುಸೇನೆಗೆ ಸೇರಿದ ಮೂರು ಜೆಎಫ್ -17 ಫೈಟರ್ ಯುದ್ಧ ವಿಮಾನಗಳು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆಗೊಂಡ ಲಡಾಖ್ ಗೆ ಮುಖವಾಗಿ ನಿಂತಿವೆ. ಪಾಕಿಸ್ತಾನ ಯಾವುದೇ ರೀತಿಯ ಆತುರದ ಕ್ರಮಕ್ಕೆ ಮುಂದಾದರೆ ಸೂಕ್ತ ಪ್ರತ್ಯುತ್ತರ ನೀಡಲು ಭಾರತ ಸಿದ್ಧವಾಗಿದೆ" ಎಂದು ಸರ್ಕಾರ ಹೇಳಿಕೆ ನೀಡಿರುವುದಾಗಿ ಎ ಎನ್ ಐ ನ್ಯೂಸ್ ಏಜೆನ್ಸಿ ತಿಳಿಸಿದೆ.

ಅಮೆರಿಕ ಪೂರೈಸಿದ್ದ C-130 ಟ್ರಾನ್ಸ್ ಪೂರ್ಟ್ ವಿಮಾನದ ಹಳೆಯ ಆವೃತ್ತಿಯನ್ನು ಹೊಂದಿರುವ ಪಾಕಿಸ್ತಾನ, ಜೆಅಫ್ -17 ಫೈಟರ್ ವಿಮಾನಗಳನ್ನು ಸ್ಕರ್ದು ಪ್ರದೇಶದಲ್ಲಿ ನಿಯೋಜನೆ ಮಾಡಿದೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಭಾರತ ಸರ್ಕಾರ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿ, ಜಮ್ಮು-ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿತ್ತು. ಮಾತ್ರವಲ್ಲ, ಜಮ್ಮು ಮತ್ತು ಕಾಶ್ಮೀರ, ಹಾಗೂ ಲಡಾಖ್ ಅನ್ನು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು.
ಭಾರತದ ಈ ಕ್ರಮದಿಂದಾಗಿ ಉಭಯ ದೇಶಗಳ ನಡುವೆ ಯುದ್ಧದಂಥ ಸನ್ನಿವೇಶ ಏರ್ಪಾಡಾಗಿದ್ದು, ಭಾರತವೂ ಸೇನೆಯಲ್ಲಿ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜಿಸಿದೆ.
ಭಾರತ ಅಮೃತಸರದಿಂದ ಪಾಕಿಸ್ತಾನದ ಲಾಹೋರ್ ಗೆ ಅಟ್ಟಾರಿ ಮತ್ತು ವಾಘಾ ಗಡಿಯಿಂದ ತೆರಳುತ್ತಿದ್ದ ಸಂಜೋತಾ ಎಕ್ಸ್ ಪ್ರೆಸ್ ರೈಲಿನ ಸಂಚಾರವನ್ನೂ ಉಭಯ ದೇಶಗಳೂ ರದ್ದುಗೊಳಿಸಿವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications