ಪಾಕಿಸ್ತಾನ ಚುನಾವಣೆ ಸಮೀಕ್ಷೆ: ಇಮ್ರಾನ್ ಖಾನ್ ಪಕ್ಷಕ್ಕೆ ಅಲ್ಪಮತದ ಜಯ?
ಇಸ್ಲಾಮಾಬಾದ್, ಜುಲೈ 24: ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯ ಪ್ರಚಾರ ಕಾರ್ಯ ಇಂದು ಅಂತ್ಯ ಕಂಡಿದ್ದು, ಬುಧವಾರ (ಜುಲೈ 25) ದಂದು ಮತದಾನ ನಡೆಯಲಿದೆ.
ಪಾಕಿಸ್ತಾನದ ಮಾಜಿ ನಾಯಕ, ಪಿಟಿಐ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಹಾಗೂ ಪಿಎಂಎಲ್ ಎನ್ ಪಕ್ಷದ ನವಾಜ್ ಷರೀಫ್ ಅವರ ಸೋದರ ಶಹಬಾಜ್ ಶರೀಫ್ ಅವರ ವಿರುದ್ಧ ನೇರಾನೇರ ಸ್ಪರ್ಧೆ ನಿರೀಕ್ಷಿಸಲಾಗಿದೆ.
ಚುನಾವಣಾ ಪೂರ್ವ ಸಮೀಕ್ಷೆಯಂತೆ ಷರೀಫ್ ಅವರ ಪಿಎಂಎಲ್- ಎನ್ ಗಿಂತ ಇಮ್ರಾನ್ ಖಾನ್ ಅವರ ಪಿಟಿಐ ಅಲ್ಪಮತಗಳ ಮುನ್ನಡೆ ಪಡೆಯುವ ನಿರೀಕ್ಷೆಯಿದೆ. ಅದರಲ್ಲೂ ಪ್ರಧಾನಿ ಹುದ್ದೆಗೆ ರಹದಾರಿ ತೋರಿಸಬಲ್ಲ ಪಂಜಾಬ್ ಪ್ರಾಂತ್ಯದಲ್ಲಿ ಶೇ 14ರಷ್ಟು ಅಧಿಕ ಮಂದಿ ಪಿಟಿಐ ಪರ ನಿಂತಿದ್ದಾರೆ.

ಪಿಟಿಐ ಪರ ಶೇ 29ರಷ್ಟು ಮತಗಳು ಬಂದಿದ್ದು, ಪಿಎಂಎಲ್ ಎನ್ ಗೆ ಶೇ 25ರಷ್ಟು ಮತಗಳು ಸಿಕ್ಕಿವೆ. ಬಿಲಾವಲ್ ಭುಟ್ಟೋ ಅವರ ಪಾಕಿಸ್ತಾನದ ಪೀಪಲ್ಸ್ ಪಾರ್ಟಿಗೆ ಶೇ20ರಷ್ಟು ಮತಗಳು ಬಂದಿವೆ.
ಹಫೀಜ್ ಸಯೀದ್ ಅವರ ಅಲ್ಲಾ -ಓ- ಅಕ್ಬರ್ ಪಕ್ಷದಿಂದ ಸುಮಾರು 79 ಮಂದಿ ರಾಷ್ಟ್ರೀಯ ಅಸೆಂಬ್ಲಿಗೆ ಸ್ಪರ್ಧಿಸಿದ್ದಾರೆ. 181 ಮಂದಿ ನಾಲ್ಕು ಪ್ರಾಂತ್ಯದ ಅಸೆಂಬ್ಲಿಗೆ ಸ್ಪರ್ಧಿಸುತ್ತಿದ್ದಾರೆ.
ಕೆಳಮನೆಯಲ್ಲಿ 342 ಸ್ಥಾನಗಳಿದ್ದರೆ ನೇರವಾಗಿ ಚುನಾವಣೆ ನಡೆಯುವುದು 272 ಸ್ಥಾನಗಳಿಗೆ ಮಾತ್ರ. ಇಷ್ಟು ಸ್ಥಾನಗಳ ಪೈಕಿ 141 ಸ್ಥಾನಗಳು ಪಾಕಿಸ್ತಾನದಲ್ಲಿರುವ ಪಂಜಾಬ್ ಪ್ರಾಂತ್ಯದಲ್ಲೇ ಬರುತ್ತದೆ. ಇನ್ನು ಸಿಂಧ್ ಪ್ರಾತ್ಯದಲ್ಲಿ 61, ಖೈಬರ್ ಪಖ್ತುನ್ವಾ 39, ಬಲೂಚಿಸ್ತಾನ್ 16, ಎಫ್ ಎಟಿಎ (ಫತಾ) 12, ರಾಜಧಾನಿ (ಇಸ್ಲಾಮಾಬಾದ್ ಭಾಗಕ್ಕೆ) 3 ಸ್ಥಾನಗಳಿವೆ.
ನವಾಜ್ ಷರೀಫ್ ರ ಸೋದರ ಮುನ್ನಡೆಸುತ್ತಿರುವ ಪಾಕಿಸ್ತಾನ ಮುಸ್ಲಿಮ್ ಲೀಗ್ (ಎನ್), ಬೆನಜಿರ್ ಭುಟ್ಟೋ ಮಗ ಬಿಲಾವಲ್ ಭುಟ್ಟೋ ಮುನ್ನಡೆಸುತ್ತಿರುವ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಇ- ಇನ್ಸಾಫ್ ಪ್ರಮುಖ ಪಕ್ಷಗಳು.
ಪಾಕಿಸ್ತಾನದ 55 ಜಿಲ್ಲೆಗಳಲ್ಲಿ ಜೂನ್ 25 ಹಾಗೂ ಜುಲೈ 12ರ ನಡುವೆ ಪಂಜಾಬ್, ಖೈಬರ್ ಪಾಖ್ತುಖ್ವಾ, ಸಿಂಧ್ ಹಾಗೂ ಬಲೂಚಿಸ್ತಾನಗಳಲ್ಲಿ ಮುಖ್ಯವಾಗಿ ಸಮೀಕ್ಷೆ ನಡೆಸಿ ಫಲಿತಾಂಶ ಸಂಗ್ರಹಿಸಲಾಗಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications