ನವಾಜ್ ಷರೀಫ್ ಮೇಲೆ ಮತ್ತೊಂದು ಆರೋಪ; ಜೈಲಿನಿಂದ NAB ವಶಕ್ಕೆ
ಇಸ್ಲಾಮಾಬಾದ್, ಅಕ್ಟೋಬರ್ 11: ಸದ್ಯಕ್ಕೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಶುಕ್ರವಾರ ಲಂಚ ವಿರೋಧಿ ದಳಕ್ಕೆ ಹದಿನಾಲ್ಕು ದಿನಗಳ ಕಾಲ ನೀಡಲಾಗಿದೆ. ಮತ್ತೊಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿದ ಮೇಲೆ ಹದಿನಾಲ್ಕು ದಿನ ವಶಕ್ಕೆ ನೀಡಲಾಗಿದೆ.
ಅಲ್ ಅಜಿಜಿಯಾ ಮಿಲ್ಸ್ ಭ್ರಷ್ಟಾಚಾರ ಪ್ರಕರಣದಲ್ಲಿ ಅರತ್ತೊಂಬತ್ತು ವರ್ಷದ ನವಾಜ್ ಷರೀಫ್ ಈಗ ಲಾಹೋರ್ ನ ಕೋಟ್ ಲಖ್ ಪತ್ ಜೈಲಿನಲ್ಲಿ ಏಳು ವರ್ಷದ ಶಿಕ್ಷೆ ಅನುಭವಿಸುತ್ತಿದ್ದಾರೆ. ಅವರನ್ನು ನ್ಯಾಷನಲ್ ಅಕೌಂಟಬಿಲಿಟಿ ಬ್ಯುರೋ ತಂಡವು ವಶಕ್ಕೆ ಪಡೆದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.
ಚೌಧರಿ ಶುಗರ್ ಮಿಲ್ಸ್ ಷೇರು ಮಾರಾಟ ಹಾಗೂ ಖರೀದಿಯಲ್ಲಿ ಅಕ್ರಮ ಹಣ ವರ್ಗಾವಣೆ ಆಗಿದ್ದು, ಅದರಲ್ಲಿ ಆರೋಪಿ ಷರೀಫ್ ಭಾಗಿಯಾಗಿರುವ ಶಂಕೆ ಇದೆ. ಆದ್ದರಿಂದ ಹದಿನೈದು ದಿನಗಳ ಕಾಲ ವಶಕ್ಕೆ ನೀಡಬೇಕು ಎಂದು ಕೇಳಲಾಗಿದೆ. ಚೌಧರಿ ಶುಗರ್ ಮಿಲ್ಸ್ ಪ್ರಕರಣದಲ್ಲಿ ಷರೀಫ್ ನೇರ ಫಲಾನುಭವಿ ಆಗಿದ್ದಾರೆ ಎಂದು ಆರೋಪಿಸಲಾಗಿದೆ.

ಷರೀಫ್ ಅವರ ಮಗಳು ಮರ್ಯಾಮ್ ಮತ್ತು ಆಕೆಯ ಸೋದರ ಸಂಬಂಧಿ ಯೂಸೂಫ್ ಅಬ್ಬಾಸ್ ರನ್ನು ಇದೇ ಪ್ರಕರಣದಲ್ಲಿ ಕಳೆದ ಆಗಸ್ಟ್ ನಲ್ಲಿ ಬಂಧಿಸಲಾಗಿತ್ತು. ಷರೀಫ್ ರನ್ನು ಹದಿನಾಲ್ಕು ದಿನಗಳ ಕಾಲ ಎನ್ ಎಬಿ ವಶಕ್ಕೆ ನೀಡಲು ಕೋರ್ಟ್ ಒಪ್ಪಿದೆ. ಲಾಹೋರ್ ನಲ್ಲಿ ಇರುವ ಎನ್ ಎಬಿ ಮುಖ್ಯ ಕಚೇರಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷರೀಫ್ ವಿಚಾರಣೆ ನಡೆಸಲಾಗುತ್ತದೆ.
ಪನಾಮಾ ಪೇಪರ್ಸ್ ಗೆ ಸಂಬಂಧಿಸಿದಂತೆ ಎರಡು ವರ್ಷಗಳ ಹಿಂದೆ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಲಾಯಿತು. ಆ ನಂತರ ಅವೆನ್ ಫೀಲ್ಡ್ ಹಾಗೂ ಅಲ್- ಅಜಿಜಿಯಾ ಭ್ರಷ್ಟಾಚಾರ ಹಗರಣಗಳಲ್ಲಿ ಕ್ರಮವಾಗಿ ಹತ್ತು ಮತ್ತು ಏಳು ವರ್ಷಗಳ ಶಿಕ್ಷೆ ಆಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications