ಮಾಜಿ ಪ್ರಧಾನಿ ನವಾಜ್ ಷರೀಫ್ 'ಪಲಾಯನ': ಪಾಕಿಸ್ತಾನ ಘೋಷಣೆ
ಇಸ್ಲಾಮಾಬಾದ್, ಫೆಬ್ರವರಿ 27: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ 'ನಾಪತ್ತೆ'ಯಾಗಿದ್ದಾರೆ. ಹಾಗೆಂದು ಪಾಕಿಸ್ತಾನ ಸರ್ಕಾರ ಘೋಷಿಸಿದೆ.
ಲಂಡನ್ನಲ್ಲಿರುವ ತಮ್ಮ ವೈದ್ಯರಿಂದ ವೈದ್ಯಕೀಯ ವರದಿಯನ್ನು ಸಲ್ಲಿಸುವಲ್ಲಿ ವಿಫಲರಾಗಿರುವ ನವಾಜ್ ಷರೀಫ್ ಅವರು ಜಾಮೀನು ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಅವರು 'ಪಲಾಯನಗಾರ' ಎಂದು ಸರ್ಕಾರ ಪ್ರಕಟಿಸಿದೆ.
ಅನಾರೋಗ್ಯದಿಂದ ಬಳಲುತ್ತಿರುವ ನವಾಜ್ ಷರೀಫ್ (70) ಅವರು ಚಿಕಿತ್ಸೆ ಪಡೆಯುವ ಸಲುವಾಗಿ ವೈದ್ಯಕೀಯ ನೆಲೆಯ ಆಧಾರದಲ್ಲಿ ಲಾಹೋರ್ ಹೈಕೋರ್ಟ್ ಅವರಿಗೆ ಕಳೆದ ವರ್ಷದ ನವೆಂಬರ್ನಲ್ಲಿ ನಾಲ್ಕು ವಾರಗಳ ಅವಕಾಶ ಮಂಜೂರು ಮಾಡಿತ್ತು.

ಷರೀಫ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಅವರು ಸಂಕೀರ್ಣವಾದ ಬಹು ರಕ್ತನಾಳ ಪರಿಧಮನಿ ಕಾಯಿಲೆಯಿಂದ ಬಳಲುತ್ತಿದ್ದು, ತೀವ್ರ ರಕ್ತ ಕೊರತೆ ಎದುರಿಸುತ್ತಿದ್ದಾರೆ. ಅವರ ಹೃದಯದ ಸ್ನಾಯು ಶಸ್ತ್ರಚಿಕಿತ್ಸೆ ಸಹ ಬಾಕಿ ಉಳಿದಿದೆ ಎಂದು ತಿಳಿಸಿದ್ದಾರೆ.
ನವಾಜ್ ಷರೀಫ್ ಅವರಿಗೆ ನೀಡಲಾಗಿರುವ ಜಾಮೀನನ್ನು ವಿಸ್ತರಿಸದೆ ಇರಲು ನಿರ್ಧರಿಸಿರುವ ಪಾಕಿಸ್ತಾನ ಸರ್ಕಾರ, ಜಾಮೀನು ನೀಡಲು ಅಗತ್ಯವಾದ ತಮ್ಮ ವೈದ್ಯಕೀಯ ವರದಿಗಳನ್ನು ಇಸ್ಲಾಮಾಬಾದ್ ಹೈಕೋರ್ಟ್ ಆದೇಶದಂತೆ ರಚಿಸಲಾಗಿರುವ ಮಂಡಳಿ ಎದುರು ಹಾಜರುಪಡಿಸಲು ಸಾಧ್ಯವಾಗದೆ ಷರತ್ತುಗಳನ್ನು ಉಲ್ಲಂಘಿಸಿರುವುದರಿಂದ ಅವರನ್ನು ಪಲಾಯನಗಾರ ಎಂದು ಘೋಷಿಸಿದೆ.
ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ನಡೆದ ಫೆಡರಲ್ ಕ್ಯಾಬಿನೆಟ್ನಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications