ವೈಮಾನಿಕ ದಾಳಿ ಭೀತಿ, ಪಾಕಿಸ್ತಾನದ ವಿ. ನಿಲ್ದಾಣಗಳು ಬಂದ್
ಇಸ್ಲಾಮಾಬಾದ್, ಫೆಬ್ರವರಿ 27: ಪುಲ್ವಾಮಾ ಮೇಲಿನ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತದ ಸಂಭಾವ್ಯ ವೈಮಾನಿಕ ದಾಳಿಯ ಭೀತಿಯಿಂದ ಪಾಕಿಸ್ತಾನ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಪ್ರಮುಖ ನಗರಗಳಾದ ಲಾಹೋರ್, ಮುಲ್ತಾನ್, ಫೈಸಲಾಬಾದ್, ಸಿಯೋಲ್ ಕೋಟ್ ಹಾಗೂ ಇಸ್ಲಾಮಾಬಾದ್ ವಿಮಾನ ನಿಲ್ದಾಣಗಳಿಂದ ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
ಜಿಯೋ ನ್ಯೂಸ್ ಪ್ರಕಾರ, ಲಾಹೋರ್ ವಿಮಾನ ನಿಲ್ದಾಣ ಸಂಪೂರ್ಣ ಬಂದ್ ಆಗಿದೆ. ಮುಂದಿನ ಆದೇಶದ ತನಕ ಸಂಚಾರ ಸ್ಥಗಿತಗೊಳಿಸಲಾಗಿದೆ. ಚೀನಾದ ಗುವಾಂಗ್ ಜೋ ನಿಂದ ಬರುತ್ತಿದ್ದ ವಿಮಾನವನ್ನು ವಾಪಸ್ ಕಳಿಸಿರುವ ಸುದ್ದಿ ಬಂದಿದೆ. ಪೇಶಾವಾರ್ ನ ಬಚಾ ಖಾನ್ ವಿಮಾನನಿಲ್ದಾಣದಲ್ಲಿ ನಾಗರಿಕ ವಿಮಾನವೊಂದನ್ನು ಟೇಕಾಫ್ ಸಂದರ್ಭದಲ್ಲಿ ನಿಲ್ಲಿಸಲಾಗಿದೆ ಎಂದು ವರದಿ ಬಂದಿದೆ.

ಇದೆ ವೇಳೆ ಭಾರತದಲ್ಲಿ ಜಮ್ಮು ಕಾಶ್ಮೀರದ ಏರ್ಪೋರ್ಟ್ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಶ್ರೀನಗರ, ಲೇಹ್, ಪಠಾಣ್ಕೋಟ್, ಡೆಹ್ರಾಡೂನ್ ವಿಮಾನ ನಿಲ್ದಾಣಗಳಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
International flights that transit between Indian and Pakistani airspace now being affected. Some flights returning to origin, while others appear to be seeking alternate routing. https://t.co/sXbkX0qrGI pic.twitter.com/tojnJCii4w
— Flightradar24 (@flightradar24) February 27, 2019
ಫೆಬ್ರವರಿ 14 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಆದಿಲ್ ದಾರ್ ಎಂಬ ಆತ್ಮಾಹುತಿ ದಾಳಿಕೋರ ಕಾರ್ ಬಾಂಬ್ ಸ್ಫೋಟಿಸಿ 44 ಯೋಧರ ಬಲಿದಾನಕ್ಕೆ ಕಾರಣವಾಗಿದ್ದ. ಅದರ ಪ್ರತೀಕಾರ ಎಂಬಂತೆ ಭಾರತ ಈಗ ಉಗ್ರನೆಲೆ ಮೇಲೆ ದಾಳಿ ನಡೆಸಿತ್ತು.
#TravelUpdate. Due to airspace restrictions, flights to and from Amritsar, Srinagar, Chandigarh and Jammu are currently on hold. Customers are requested to check flight status before commencing their journey to the airport. (1/2)
— Vistara (@airvistara) February 27, 2019
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications