ಕೆಲಸ ಬಿಡದಿದ್ದಕ್ಕೆ ಪತ್ರಕರ್ತೆಯನ್ನು ಗುಂಡಿಕ್ಕಿ ಕೊಂದ ಗಂಡ
ಲಾಹೋರ್, ನವೆಂಬರ್ 27: ಕೆಲಸ ತ್ಯಜಿಸಲು ನಿರಾಕರಿಸಿದ ಕಾರಣಕ್ಕೆ 27 ವರ್ಷದ ಪತ್ರಕರ್ತೆಯನ್ನು ಆಕೆಯ ಗಂಡ ಗುಂಡಿಕ್ಕಿ ಕೊಂದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಈ ದಂಪತಿ ಏಳು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಆದರೆ ಮದುವೆಯಾಗಿ ಕೆಲವು ದಿನಗಳಲ್ಲಿಯೇ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿತ್ತು ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿರುವ ಮಾಹಿತಿ ತಿಳಿಸಿದೆ.
ಉರ್ದು ದಿನಪತ್ರಿಕೆಯೊಂದಲ್ಲಿ ಕೆಲಸ ಮಾಡುತ್ತಿದ್ದ ಉರೂಜ್ ಇಕ್ಬಾಲ್ ಕೇಂದ್ರ ಲಾಹೋರ್ನ ಖಿಲಾ ಗುಜ್ಜರ್ ಸಿಂಗ್ನಲ್ಲಿರುವ ತಮ್ಮ ಕಚೇರಿಗೆ ಪ್ರವೇಶಿಸುತ್ತಿದ್ದರು. ಆ ವೇಳೆ ಆಕೆಯ ಪತಿ ದಿಲಾವರ್ ಅಲಿ ತಲೆಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉರೂಜ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಗಲೇ ಅವರು ಮೃತಪಟ್ಟಿದ್ದರು. ಆಕೆಯ ಪತಿ ದಿಲಾವರ್ ಕೂಡ ಮತ್ತೊಂದು ಉರ್ದು ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಉರೂಜ್ ಅವರ ಸಹೋದರ ಯಾಸಿರ್ ಇಕ್ಬಾಲ್ ನೀಡಿರುವ ದೂರಿನಂತೆ ಕೊಲೆಯಾದ ಮಹಿಳೆಯ ಪತಿ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ತಮ್ಮ ಸಹೋದರಿ ಮತ್ತು ದಿಲಾವರ್ ಇಬ್ಬರೂ ಏಳು ತಿಂಗಳ ಹಿಂದಷ್ಟೇ ಪ್ರೇಮವಿವಾಹವಾಗಿದ್ದರು. ಆದರೆ ವಿವಿಧ ಕೌಟುಂಬಿಕ ಕಾರಣಗಳಿಂದಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಇದರಿಂದ ಸಂಬಂಧ ಹಳಸಿತ್ತು. ಆಕೆಯನ್ನು ಕೆಲಸ ತ್ಯಜಿಸುವಂತೆ ದಿಲಾವರ್ ಪದೇ ಪದೇ ಒತ್ತಡ ಹೇರುತ್ತಿದ್ದ ಎಂದು ಇಕ್ಬಾಲ್ ದೂರಿನಲ್ಲಿ ತಿಳಿಸಿದ್ದಾರೆ.
ಇದೇ ವಿಚಾರಕ್ಕೆ ದಿಲಾವರ್ ಪತ್ನಿಗೆ ಹಿಂಸೆ ನೀಡುತ್ತಿದ್ದ. ಹೀಗಾಗಿ ಆತನ ವಿರುದ್ಧ ಇತ್ತೀಚೆಗೆ ದೂರು ಕೂಡ ನೀಡಲಾಗಿತ್ತು. ಆದರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಿದ್ದಾರೆ.
ಅಪರಾಧ ವರದಿಗಾರ್ತಿಯಾಗಿದ್ದ ಉರೂಜ್, ಪತಿಯೊಂದಿಗೆ ಮನಸ್ತಾಪ ಉಂಟಾದ ಬಳಿಕ ಆತನಿಂದ ದೂರವಾಗಿ ತನ್ನ ಪತ್ರಿಕೆ ಇರುವ ಕಟ್ಟಡದಲ್ಲಿಯೇ ಹೊಂದಿಕೊಂಡಂತೆ ಇರುವ ಕೊಠಡಿಯೊಂದರಲ್ಲಿ ವಾಸಿಸುತ್ತಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications