ಪಾಕಿಸ್ತಾನದ ಚುನಾವಣೆಗೆ ಭಾರತದ ವೋಟಿಂಗ್ ಮೆಷಿನ್!
ಇಸ್ಲಮಾಬಾದ್, ಅ 25: ಒಂದು ಕಡೆ ಪಾಕಿಸ್ತಾನದಿಂದ ಗಡಿ ಉಲ್ಲಂಘನೆ, ಇನ್ನೊಂದೆಡೆ ಭಯೋತ್ಪಾದಕರ ನುಸುಳುವಿಕೆ, ಈ ಮಧ್ಯೆ ಪಾಕಿಸ್ತಾನದ ಚುನಾವಣಾ ಅಯೋಗಕ್ಕೆ ಭಾರತದ ಚುನಾವಣೆಯಲ್ಲಿ ಚಾಲ್ತಿಯಲ್ಲಿರುವ ವಿದ್ಯುನ್ಮಾನ ಮತಯಂತ್ರದ (Electronic Voting Machine) ಮೇಲೆ ಪ್ಯಾರ್ಗೆ ಆಗ್ಬಿಟ್ಟೈತಂತೆ.
ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುತ್ತಿರುವ ಇವಿಎಂ ಅನ್ನು ನಮ್ಮ ದೇಶದಲ್ಲಿ ನಡೆಯುವ ಚುನಾವಣೆಗೆ ಬಳಸಿಕೊಳ್ಳಲು ಉತ್ಸುಕರಾಗಿದ್ದೇವೆ. ನಮಗೂ ಈ ಮತಯಂತ್ರವನ್ನು ಪೂರೈಸಿ ಎಂದು ಪಾಕಿಸ್ತಾನದ ಚುನಾವಣಾ ಆಯೋಗ ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ಮೂಲಗಳ ಪ್ರಕಾರ, ಪಾಕ್ ಚುನಾವಣಾ ಆಯೋಗ ಈ ಸಂಬಂಧ ಅಂತಿಮ ನಿರ್ಧಾರ ಇನ್ನೂ ತೆಗೆದುಕೊಂಡಿಲ್ಲ. ವಿದೇಶಾಂಗ ವ್ಯವಹಾರ ಸಚಿವಾಲಯದ ಜೊತೆ ಆಯೋಗ ಮಾತುಕತೆ ನಡೆಸುತ್ತಿದೆ.

ಭಾರತದ ಇವಿಎಂಗಳನ್ನು ಬಳಸಿಕೊಂಡು ಪಾರದರ್ಶಕ ಚುನಾವಣೆ ನಡೆಸ ಬೇಕೆನ್ನುವುದು ಪಾಕಿಸ್ತಾನ ಚುನಾವಣಾ ಆಯೋಗದ ಇಚ್ಚೆಯಾಗಿದೆ ಎಂದು ತಿಳಿದು ಬಂದಿದೆ.
ಭಾರತದ ಚುನಾವಣಾ ಆಯೋಗ ಭಾರತದಲ್ಲಿರುವ ಪಾಕಿಸ್ತಾನದ ಹೈಕಮಿಷನರ್ ಅವರಿಗೆ ಇವಿಎಂಎ ಕಾರ್ಯನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಕೇಂದ್ರ ಸರಕಾರದ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲು ಭಾರತದ ಚುನಾವಣಾ ಆಯೋಗ ನಿರ್ಧರಿಸಿದೆ.
ಸದ್ಯ ಭಾರತದ ಚುನಾವಣಾ ಆಯೋಗದ ಬಳಿ ಹದಿನಾಲ್ಕು ಲಕ್ಷ ಇವಿಎಂ ಗಳಿದ್ದು, ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಹೆಚ್ಚುವರಿಯಾಗಿ ಎರಡು ಲಕ್ಷ ಮತಯಂತ್ರಗಳನ್ನು ಖರೀದಿಸುತ್ತಿದೆ.
ಆದರೂ ಭಾರತ ಸರಕಾರ ಪಾಕಿಸ್ತಾನಕ್ಕೆ ಇವಿಎಂ ನೀಡುವ ವಿಚಾರದಲ್ಲಿ ಸರಿಯಾಗಿ ಯೋಚಿಸಿ ಮುಂದಿನ ಕ್ರಮ ಕೈಗೊಳ್ಳುವುದು ಉತ್ತಮ ಎನ್ನುವುದು ಪ್ರಜ್ಞಾವಂತ ನಾಗರಿಕರ ಅಭಿಪ್ರಾಯ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications