ಇಲ್ಲ ಇಲ್ಲ ಎಂದು ಕೊನೆಗೂ ಉಗ್ರರ ಹಾಜರಿ ಒಪ್ಪಿಕೊಂಡ ಪಾಕಿಸ್ತಾನ
ಇಸ್ಲಾಮಾಬಾದ್, ಏಪ್ರಿಲ್ 29: ಇಷ್ಟು ದಿನದಿಂದ ತನ್ನ ನೆಲದಲ್ಲಿ ಉಗ್ರರು ಮತ್ತು ಜಿಹಾದಿಗಳ ಅಸ್ತಿತ್ವವೇ ಇಲ್ಲ ಎನ್ನುತ್ತಿದ್ದ ಪಾಕಿಸ್ತಾನ, ಕೊನೆಗೂ ಉಗ್ರರು ತನ್ನ ಗಡಿಯೊಳಗೆ ನೆಲೆಸಿರುವುದನ್ನು ಒಪ್ಪಿಕೊಂಡಿದೆ.
ಭಯೋತ್ಪಾದನೆಯನ್ನು ಹತ್ತಿಕ್ಕಲು ತಾನು ಸಾಕಷ್ಟು ಕೆಲಸ ಮಾಡಬೇಕಿದೆ ಎಂದು ಪಾಕಿಸ್ತಾನದ ಸೇನೆ ಹೇಳಿದೆ.
'ನಾವು ಹಿಂಸಾಚಾರ ನಡೆಸುವ ಭಯೋತ್ಪಾದನಾ ಸಂಘಟನೆಗಳನ್ನು ಮತ್ತು ಜಿಹಾದಿ ಗುಂಪುಗಳನ್ನು ನಿಷೇಧಿಸಿದ್ದೇವೆ. ಅವರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ' ಎಂದು ಮೇಜರ್ ಜನರಲ್ ಆಸಿಫ್ ಗಫೂರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ದೇಶ ಭಯೋತ್ಪಾದನೆಯಿಂದ ತುಂಬಾ ಸಂಕಷ್ಟಗಳನ್ನು ಅನುಭವಿಸಿದೆ. ಅದನ್ನು ಹತ್ತಿಕ್ಕಲು ಸಾಕಷ್ಟು ಶ್ರಮವಹಿಸಬೇಕಿದೆ. ಭಯೋತ್ಪಾದನೆಯಿಂದಾಗಿ ಲಕ್ಷಾಂತರ ಮಂದಿಯನ್ನು ಕಳೆದುಕೊಂಡಿದ್ದೇವೆ. ಅದರ ವಿರುದ್ದದ ಹೋರಾಟದಲ್ಲಿ ಇನ್ನೂ ಮಾಡುವುದು ಬಹಳಷ್ಟಿದೆ ಎಂದರು.
ಹಿಂದಿನ ಸರ್ಕಾರಗಳು ಭಯೋತ್ಪಾದನೆಯನ್ನು ನಾಶಪಡಿಸಲು ವಿಫಲವಾಗಿದ್ದವು ಎಂಬುದನ್ನು ಒಪ್ಪಿಕೊಂಡ ಅವರು, ಅದರಿಂದಾಗಿ ಲಕ್ಷಾಂತರ ಡಾಲರ್ ಹಣ ಕಳೆದುಕೊಂಡಿದೆ ಎಂದು ಹೇಳಿದರು.
ಪಾಕಿಸ್ತಾನದ ಭದ್ರತಾ ಸಂಸ್ಥೆಗಳ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆಯ ಚಳವಳಿ ನಡೆಸಲು ಪಷ್ಟುನ್ ತಹಫುಜ್ ಮೂವ್ಮೆಂಟ್ (ಪಿಟಿಎಂ) ಸಂಘಟನೆಗೆ ಭಾರತದ ಗುಪ್ತಚರ ಸಂಸ್ಥೆ ರಾ ಹಣಕಾಸಿನ ನೆರವು ಒದಗಿಸುತ್ತಿದೆ ಎಂದು ಗಫೂರ್ ಆರೋಪಿಸಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications