ಪಾಕಿಸ್ತಾನದ ಕರಾಚಿ ದುರಂತಕ್ಕೆ ಮಕ್ಕಳು ಸೇರಿ 16 ಜನ ಬಲಿ, ಅನುಮಾನ ಮೂಡಿಸಿದ ಘಟನೆ | Pakistan Military
ಪಾಕಿಸ್ತಾನದ ಕರಾಚಿ ವಸತಿ ಸಮುಚ್ಚಯ ಒಂದರಲ್ಲಿ ಇದೀಗ ಭೀಕರ ದುರಂತ ಸಂಭವಿಸಿದ್ದು, ಇದೇ ದುರಂತಕ್ಕೆ ಸುಮಾರು 16 ಪಾಕಿಸ್ತಾನಿ ಪ್ರಜೆಗಳು ಬಲಿಯಾಗಿದ್ದಾರೆ. ಮಹಿಳೆಯರು & ಮಕ್ಕಳೂ ಸೇರಿ ಒಟ್ಟಾರೆ 16 ಜನ ದುರಂತದಲ್ಲಿ ಜೀವ ಬಿಟ್ಟಿದ್ದಾರೆ. ಸ್ಪೋಟಕ್ಕೆ ಅನಿಲ ಸೋರಿಕೆ ಕಾರಣ ಎಂಬ ಮಾಹಿತಿ ಈಗ ಪ್ರಾಥಮಿಕ ಹಂತದಲ್ಲಿ ಸಿಕ್ಕಿದ್ದರೂ ದುರಂತದ ಬಗ್ಗೆ ಸಾಕಷ್ಟು ಅನುಮಾನಗಳು ಕಾಡುತ್ತಾ ಇವೆ. ಹೀಗಾಗಿ ಪಾಕಿಸ್ತಾನಿ ಪೊಲೀಸರು & ಭದ್ರತಾ ಸಿಬ್ಬಂದಿ ಅಲರ್ಟ್ ಆಗಿ ತನಿಖೆ ಆರಂಭಿಸಿದ್ದಾರೆ. ಇತ್ತೀಚೆಗೆ ಪಾಕಿಸ್ತಾನದ ಇಸ್ಲಾಮಾಬಾದ್ ನಗರದ ಮಸೀದಿ ಒಂದರಲ್ಲಿ ಉಗ್ರರು ಭೀಕರವಾದ ದಾಳಿ ನಡೆಸಿದ್ದರು, ಈಗ ನೋಡಿದರೆ ಮತ್ತೆ ಒಂದು ದೊಡ್ಡ ಸ್ಫೋಟ ಸಂಭವಿಸಿರುವುದು ಅನುಮಾನ ಹೆಚ್ಚಿಸಿದೆ.
ಭಾರತದ ನೆರೆಯ ದೇಶ ಪಾಕಿಸ್ತಾನವು ಪದೇ, ಪದೇ ಬೇಡದಿರುವ ವಿಚಾರಗಳಿಗೆ ಸುದ್ದಿಯಲ್ಲಿ ಇರುತ್ತದೆ. ಪಾಕಿಸ್ತಾನಕ್ಕೆ ತನ್ನನ್ನು ತಾನು ಸಾಕಿಕೊಳ್ಳುವ & ರಕ್ಷಿಸಿಕೊಳ್ಳುವ ಯೋಗ್ಯತೆ ಇಲ್ಲದೇ ಇದ್ದರೂ ಅಕ್ಕಪಕ್ಕದ ದೇಶಗಳ ಮೇಲೆ ಕಣ್ಣು ಹಾಕುವ ಕೆಟ್ಟ ಅಭ್ಯಾಸ ಇದೆ. ಉಗ್ರರು ಪಾಕಿಸ್ತಾನದ ಒಳಗಡೆಗೆ ನುಗ್ಗಿ ಸಾವಿರಾರು ಜನರನ್ನು ಬಲಿ ಪಡೆಯುತ್ತಿದ್ದರೂ ಅದರ ಬಗ್ಗೆ ಕೇರ್ ಮಾಡದ ಅಲ್ಲಿನ ರಾಜಕೀಯ ನಾಯಕರು ಹಾಗೂ ಸರ್ಕಾರ, ಭಾರತದ ಕಿರೀಟ ಕಾಶ್ಮೀರದ ಮೇಲೆ ಕಣ್ಣು ಹಾಕಿ ಪದೇ ಪದೇ ಪೆಟ್ಟು ತಿಂದು ಹೋಗುತ್ತಿದ್ದಾರೆ. ಇಷ್ಟೆಲ್ಲದರ ನಡುವೆ ಈಗ ಪಾಕಿಸ್ತಾನದ ಕರಾಚಿಯಲ್ಲಿ ಭೀಕರ ಸ್ಫೋಟ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿ 16 ಜನ ಬಲಿಯಾಗಿದ್ದಾರೆ.

ಭ್ರಷ್ಟ ವ್ಯವಸ್ಥೆಯಲ್ಲಿ ಭೀಕರ ಸ್ಫೋಟ
ಪಾಕಿಸ್ತಾನ ಜನರ ಪರಿಸ್ಥಿತಿ ಹೇಗೆ ಆಗಿದೆ ಎಂದರೆ, ತಾವು ಕಟ್ಟುವ ತೆರಿಗೆಗೆ ವಾಪಸ್ ಕನಿಷ್ಠ ಸೌಲಭ್ಯ ಕೂಡ ಅಲ್ಲಿನ ಜನರಿಗೆ ಸಿಗದ ರೀತಿ ಆಗಿದೆ. ಏಕೆಂದರೆ ಪಾಕಿಸ್ತಾನದಲ್ಲಿ ಭ್ರಷ್ಟ ವ್ಯವಸ್ಥೆ ಅಷ್ಟೊಂದು ಸಮಸ್ಯೆ ಸೃಷ್ಟಿ ಮಾಡುತ್ತಿದ್ದು, ಜನರು ಕೂಡ ಬದುಕಲು ಪರದಾಡುತ್ತಿದ್ದಾರೆ. ಅದೇ ರೀತಿ ಎಲ್ಪಿಜಿ ಸಿಲಿಂಡರ್ ಪಡೆಯುವುದು ಕೂಡ ಪರದಾಟದ ಪ್ರಶ್ನೆ ಆಗಿದೆ, ಸಿಲಿಂಡರ್ ಸಿಕ್ಕರೂ ಅದರಲ್ಲಿ ಸಮಸ್ಯೆಗಳ ಸಾಗರವೇ ಇರುತ್ತದೆ. ಪಾಕಿಸ್ತಾನ ನೆಲದಲ್ಲಿ ತಮ್ಮ ಸಮಸ್ಯೆಗಳನ್ನು ಪ್ರಜೆಗಳು ಹೇಳಿಕೊಂಡರೂ ಅದು ಪ್ರಯೋಜನಕ್ಕೆ ಬರೋದೆ ಇಲ್ಲ.
ಹಲವು ಕಟ್ಟಡಗಳಿಗೆ ಭಾರಿ ಹಾನಿ
ಹೀಗಿದ್ದಾಗ ದಿಢೀರ್ ಕರಾಚಿಯ ಕಟ್ಟಡ ಒಂದರಲ್ಲಿ ಎಲ್ಪಿಜಿ ಸಿಲಿಂಡರ್ ಬ್ಲಾಸ್ಟ್ ಆಗಿ ಈವರೆಗೆ 16 ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮತ್ತೊಂದು ಕಡೆ ಪಡೆ ಪಾಕಿಸ್ತಾನದಲ್ಲಿ ಪದೇ ಪದೇ ಉಗ್ರರ ದಾಳಿಗಳು ನಡೆಯುತ್ತಿರುವ ಹಿನ್ನೆಲೆ ಈ ಸ್ಫೋಟದ ಬಗ್ಗೆ ಅನುಮಾನ ಕೂಡ ಮೂಡಿದೆ. ಹೀಗಾಗಿಯೇ ಇದೀಗ ತನಿಖೆ ಮುಂದುವರಿದಿದ್ದು, ಸ್ಫೋಟ ಸಂಭವಿಸಿದ ಜಾಗದಲ್ಲಿ ಸುತ್ತಮುತ್ತಲ ಕಟ್ಟಡಗಳಿಗೆ ಕೂಡ ಹಾನಿ ಆಗಿದೆ. ಅಲ್ಲದೆ ಸ್ಥಳೀಯರಿಗೆ ಇದೀಗ ಭಯ ಶುರುವಾಗಿದ್ದು, ಸೂಕ್ತ ತನಿಖೆ ನಡೆಸಲು ಸರ್ಕಾರಕ್ಕೆ ಆಗ್ರಹವನ್ನ ಮಾಡಿದ್ದಾರೆ. ಇಸ್ಲಾಮಾಬಾದ್ ಘಟನೆ ನಂತರ ಈಗ ಕರಾಚಿಯಲ್ಲಿ ಸಂಭವಿಸಿದ ಸ್ಫೋಟ ಸಹಜವಾಗಿ ಭಯ ಸೃಷ್ಟಿಸಿದೆ ಜನರಲ್ಲಿ.
ಕರಾಚಿಯ ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶ ಕಟ್ಟಡದ ಮೊದಲನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿ ಮತ್ತಷ್ಟು ಭೀತಿ ಹುಟ್ಟಿಸಿದೆ. ರಂಜಾನ್ ಸಮಯದಲ್ಲೇ ಇಂತಹ ಘಟನೆ ನಡೆದಿದ್ದು, ಇದೀಗ ಜನರು ಹೊರಗೆ ಬರುವುದಕ್ಕೂ ನೂರು ಬಾರಿ ಯೋಚನೆ ಮಾಡುವಂತೆ ಆಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಅನಿಲ ಸೋರಿಕೆ ಈ ಘಟನೆಗೆ ಕಾರಣ ಎನ್ನಲಾಗಿದ್ದರೂ, ತನಿಖೆ ಎಲ್ಲಾ ಆಯಾಮದಲ್ಲೂ ನಡೆಯುತ್ತಿದೆ. ಉಗ್ರ ಪೋಷಕ ಪಾಕಿಸ್ತಾನದಲ್ಲಿ ಕ್ಷಣಕ್ಷಣಕ್ಕೂ ಭಯದಲ್ಲೇ ಜನರು ಬದುಕುವಂತೆ ಆಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications