ಪುಲ್ವಾಮಾ ಉಗ್ರರ ದಾಳಿ ನಡೆಸಿದ್ದು ನಾವೇ: ಬಹಿರಂಗವಾಗಿ ಒಪ್ಪಿಕೊಂಡ ಪಾಕ್
ಇಸ್ಲಾಮಾಬಾದ್, ಅಕ್ಟೋಬರ್ 29: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರಲ್ಲಿ ನಡೆದ ಉಗ್ರರ ದಾಳಿ ಕೃತ್ಯದಲ್ಲಿ ಪಾಕಿಸ್ತಾನದ ಮುಖವಾಡ ಕಳಚಿಬಿದ್ದಿದೆ. ಇಮ್ರಾನ್ ಖಾನ್ ಅವರ ಆದೇಶದಂತೆ ಈ ಭಯೋತ್ಪಾದನಾ ದಾಳಿ ನಡೆಸಲಾಗಿತ್ತು ಎಂಬುದನ್ನು ಅವರ ಸರ್ಕಾರದ ಸಚಿವರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.
ಪಾಕಿಸ್ತಾನ ರಾಷ್ಟ್ರೀಯ ಸಂಸತ್ನಲ್ಲಿ ಮಾತನಾಡಿದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಚೌಧರಿ ಫವಾದ್ ಹುಸೇನ್, ಪುಲ್ವಾಮಾ ದಾಳಿಯು ಇಮ್ರಾನ್ ಖಾನ್ ನಾಯಕತ್ವದ ಸರ್ಕಾರದ ಅತ್ಯಂತ ದೊಡ್ಡ ಸಾಧನೆಯಾಗಿದೆ ಎಂದು ಬಣ್ಣಿಸಿದ್ದಾರೆ.

'ನಾವು ಭಾರತವನ್ನು ಅವರ ಭೂಮಿಯಲ್ಲಿಯೇ ಹೊಡೆದಿದ್ದೆವು. ಪುಲ್ವಾಮಾ ದಾಳಿಯು ಇಮ್ರಾನ್ ಖಾನ್ ನಾಯಕತ್ವದಲ್ಲಿನ ಜನರ ಯಶಸ್ಸು. ಆ ಯಶಸ್ಸಿನಲ್ಲಿ ನೀವು ಮತ್ತು ನಾವೆಲ್ಲರೂ ಭಾಗಿಯಾಗಿದ್ದೇವೆ' ಎಂದು ಫವಾದ್ ಹುಸೇನ್ ಸಂಸತ್ನಲ್ಲಿ ಹೇಳುತ್ತಿರುವ ವಿಡಿಯೋ ಬಹಿರಂಗವಾಗಿದೆ.
#WATCH: Pakistan's Federal Minister Fawad Choudhry, in the National Assembly, says Pulwama was a great achievement under Imran Khan's leadership. pic.twitter.com/qnJNnWvmqP
— ANI (@ANI) October 29, 2020
ಪುಲ್ವಾಮಾ ದಾಳಿಯ ಬಳಿಕ ಭಾರತವು ಪಾಕಿಸ್ತಾನದ ಗಡಿಯೊಳಗೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಅದರ ಬೆನ್ನಲ್ಲೇ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಫೈಟರ್ ಜೆಟ್ಅನ್ನು ಹೊಡೆದುರುಳಿಸಿತ್ತು. ಆ ಸಂದರ್ಭದಲ್ಲಿ ವಿಂಗ್ ಕಮಾಂಡರ್ ಅಭಿನಂದನ್, ಪಾಕಿಸ್ತಾನ ಸೈನಿಕರಿಗೆ ಸೆರೆ ಸಿಕ್ಕಿದ್ದರು. ಅಭಿನಂದನ್ ಅವರನ್ನು ಬಿಡುಗಡೆ ಮಾಡದೆ ಹೋದರೆ ಭಾರತ ದಾಳಿ ನಡೆಸಲಿದೆ ಎಂದು ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಹೇಳಿದಾಗ ಸೇನಾ ಮುಖ್ಯಸ್ಥ ಖಮರ್ ಬಾಜ್ವಾ ಅವರ ಕಾಲುಗಳು ನಡುಗುತ್ತಿದ್ದವು ಎಂದು ವಿರೋಧಪಕ್ಷದ ನಾಯಕ ಅಯಾಜ್ ಸಾದಿಕ್ ಸಂಸತ್ನಲ್ಲಿ ತಿಳಿಸಿದ್ದರು. ಅದರ ಬೆನ್ನಲ್ಲೇ ಈ ವಿಡಿಯೋ ವೈರಲ್ ಆಗಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications