ಕಾಮಿಡಿ.. ಕಾಮಿಡಿ.. ಕಾಮಿಡಿ ಮಾಡಿದ ಪಾಪಿ ಪಾಕಿಸ್ತಾನ, ಡೊನಾಲ್ಡ್ ಟ್ರಂಪ್ಗೆ ನೊಬೆಲ್ ಶಾಂತಿ ಪ್ರಶಸ್ತಿ... Donald Trump
ಡೊನಾಲ್ಡ್ ಟ್ರಂಪ್ ಕಾಲ ಕೆಳಗೆ ಬಿದ್ದು ಒದ್ದಾಡುತ್ತಿರುವ ಪಾಪಿ ಪಾಕಿಸ್ತಾನ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಅಮೆರಿಕ ನೀಡುವ ಎಂಜಲು ಕಾಸಿಗಾಗಿ ಸಾಯುತ್ತಿದೆ. ಅದರಲ್ಲೂ ಭಾರತದ ವಿರುದ್ಧ ಪಾಪಿ ಉಗ್ರರನ್ನು ಛೂ ಬಿಟ್ಟು ಆಟ ನೋಡಿದ್ದಕ್ಕೆ ಪಾಕಿಸ್ತಾನಕ್ಕೆ ಈಗಾಗಲೇ ಭಾರತೀಯ ಸೇನೆ ಸರಿಯಾಗಿ ಪಾಠ ಕಲಿಸಿದೆ. ಯುದ್ಧ ಎಂಬ ಬೆಂಕಿಗೆ ಸಿಲುಕಿ ವಿಲವಿಲ ಒದ್ದಾಡಿದ್ದ ಪಾಪಿ ಪಾಕಿಸ್ತಾನ ಕೊನೆಗೆ ಅಮೆರಿಕದ ಕಾಲು ಹಿಡಿದು ಬೃಹತ್ ಸಂಕಷ್ಟದಿಂದ ಪಾರಾಗಿತ್ತು. ಇಂತಹ ಸಮಯದಲ್ಲೇ ಕಾಮಿಡಿ ಮಾಡಿರುವ ಪಾಪಿ ಪಾಕಿಸ್ತಾನ, ಡೊನಾಲ್ಡ್ ಟ್ರಂಪ್ಗೆ ನೊಬೆಲ್ ಶಾಂತಿ ಪ್ರಶಸ್ತಿ ಕೊಡಿಸುತ್ತಂತೆ!
ಡೊನಾಲ್ಡ್ ಟ್ರಂಪ್ ತಮ್ಮ ಅಧಿಕಾರದ ಜೊತೆಗೆ ವಿವಾದ ಇಟ್ಟುಕೊಂಡು ಬಂದಿದ್ದಾರೆ ಅಂತಾ ಕಾಣುತ್ತದೆ. ಯಾಕಂದ್ರೆ ಅಮೆರಿಕ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಡೊನಾಲ್ಡ್ ಟ್ರಂಪ್ ನೂರಾರು ವಿವಾದ ಸೃಷ್ಟಿಸಿದ್ದು, ಸಾಲು ಸಾಲು ಸಮಸ್ಯೆ ಅಮೆರಿಕಗೆ ಎದುರಾಗುವಂತೆ ಮಾಡಿದ್ದಾರೆ ಅನ್ನೋ ಆರೋಪ ಕೂಡ ಕೇಳಿ ಬರುತ್ತಿದೆ. ಅದರಲ್ಲೂ ಜಗತ್ತಿನ ದೊಡ್ಡಣ್ಣ ಅಂತಾ ಕರೆಸಿಕೊಳ್ಳುವ ಅಮೆರಿಕದ ಮರ್ಯಾದಿ ಹಿಂಗೆಲ್ಲಾ ಹೋಗಲು, ಅಮೆರಿಕ ಜಗತ್ತಿನ ಎದುರು ತಲೆ ತಗ್ಗಿಸುವ ಹಲವು ಪರಿಸ್ಥಿತಿ ಸೃಷ್ಟಿಯಾಗಲು ಡೊನಾಲ್ಡ್ ಟ್ರಂಪ್ ಕಾರಣ ಅನ್ನೋ ಆರೋಪ ಕೂಡ ಇದೆ.

ಡೊನಾಲ್ಡ್ ಟ್ರಂಪ್ಗೆ ನೊಬೆಲ್ ಶಾಂತಿ ಪ್ರಶಸ್ತಿ?
ನೂರಾರು ವಿವಾದಗಳ ಸರದಾರ ಡೊನಾಲ್ಡ್ ಟ್ರಂಪ್, ಇದೇ ರೀತಿ ಭಾರತ & ಪಾಕಿಸ್ತಾನ ಯುದ್ಧ ನಾನೇ ನಿಲ್ಲಿಸಿದ್ದು ಅಂತಾ ಊರು ತುಂಬಾ ಹೇಳಿಕೊಂಡು ಓಡಾಡುತ್ತಿದ್ದಾರೆ. ಇಷ್ಟೆಲ್ಲದರ ನಡುವೆ ಪಾಪಿ ಪಾಕ್ ಕೂಡ ಟ್ರಂಪ್ ಕಾಲು ಹಿಡಿಯಲು ಹೊರಟಿದೆ. ಈ ಮೂಲಕ ಡೊನಾಲ್ಡ್ ಟ್ರಂಪ್ ನೊಬೆಲ್ ಶಾಂತಿ ಪ್ರಶಸ್ತಿ ಪಡೆಯಲು ಅರ್ಹರು ಅಂತಾ ಹೇಳುತ್ತಿದೆ ಭಾರತದ ಶತ್ರು ಪಾಪಿ ಪಾಕಿಸ್ತಾನ...
ಕಾಲು ಹಿಡಿಯುತ್ತಿದೆಯಂತೆ ಪಾಪಿ ಪಾಕಿಸ್ತಾನ!
ಹೌದು, ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಶುರುವಾಗಿದ್ದ ಸಮಯದಲ್ಲಿ ರಾಜತಾಂತ್ರಿಕ ಮಧ್ಯಸ್ಥಿಕೆ ವಹಿಸಿದ್ದಕ್ಕಾಗಿ ಪಾಕಿಸ್ತಾನ ಡೊನಾಲ್ಡ್ ಟ್ರಂಪ್ಗೆ ನೊಬೆಲ್ ಪ್ರಶಸ್ತಿ ಕೊಡಿಸಲು ಮುಂದಾಗಿದೆ. ಪಾಕಿಸ್ತಾನ ಸಂಸತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರನ್ನು ಇದೀಗ 2026ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮಿನೇಟ್ ಅಂದ್ರೆ ನಾಮನಿರ್ದೇಶನ ಮಾಡಿದೆ. ಈ ಮೂಲಕ ಬಕೆಟ್ ಹಿಡಿಯುವ ಪಾಪಿ ಪಾಕಿಸ್ತಾನದ ಬುದ್ಧಿ ಮತ್ತೊಮ್ಮೆ ಇಡೀ ಜಗತ್ತಿಗೇ ಗೊತ್ತಾಗಿದೆ. ಭಾರತ & ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದಕ್ಕೆ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಅಂತಾ ಡೊನಾಲ್ಡ್ ಟ್ರಂಪ್ ಹೇಳಿದ ಬೆನ್ನಲ್ಲೇ, ಪಾಪಿ ಪಾಕಿಸ್ತಾನ ಈ ರೀತಿಯಾಗಿ ಕಾಲು ಹಿಡಿಯುವ ಕೆಲಸ ಮಾಡಿದೆ ಎಂದು ಸೋಷಿಯಲ್ ಮೀಡಿಯಾ ಮಂದಿ ಹೇಳುತ್ತಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications