ವಿಶ್ವಾಸಮತ ಗೆದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್
ಇಸ್ಲಾಮಾಬಾದ್, ಮಾರ್ಚ್ 6: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರದಂದು ಸಂಸತ್ತಿನಲ್ಲಿ ವಿಶ್ವಾಸಮತ ಯಾಚಿಸಿ, ಬಹುಮತ ಗಳಿಸಿದ್ದಾರೆ.
ಪಾಕಿಸ್ತಾನದ ಹಣಕಾಸು ಸಚಿವ ಅಬ್ದುಲ್ ಹಫೀಜ್ ಶೇಖ್ ಅವರು ಚುನಾವಣೆಯಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ಅವರು ಬಹುಮತ ಸಾಬೀತು ಪಡಿಸುವಂತ್ ವಿರೋದ ಪಕ್ಷದವರು ಆಗ್ರಹಿಸಿದ್ದರು.
ಸಂಸತ್ತಿನಲ್ಲಿ 342 ಸದಸ್ಯ ಬಲದ ಪೈಕಿ 178 ಸದಸ್ಯರ ಬೆಂಬಲ ಪಡೆದುಕೊಂಡ ಇಮ್ರಾನ್ ಖಾನ್ ಬಹುಮತ ಸಾಬೀತಪಡಿಸಿದ್ದಾರೆ. ಈ ವಿಶೇಷ ಅಧಿವೇಶನದಲ್ಲಿ ವಿಶ್ವಾಸಮತ ಗಳಿಸಲು 172 ಮತಗಳ ಅಗತ್ಯವಿತ್ತು. ಎರಡು ವರ್ಷದ ಕೆಳಗೆ 176 ಸದಸ್ಯರ ಬೆಂಬಲ ಹೊಂದಿದ್ದ ಇಮ್ರಾನ್ ಅವರು ಈಗ 178 ಸದಸ್ಯರ ಬಲ ಹೊಂದಿದ್ದಾರೆ ಎಂದು ಸ್ಪೀಕರ್ ಅಸರ್ ಖೈಸರ್ ಪ್ರಕಟಿಸಿದರು.
ವಿಶ್ವಾಸಮತ ಪ್ರಕ್ರಿಯೆಯನ್ನು ಬಹಿಷ್ಕರಿಸಿ ಪಾಕಿಸ್ತಾನ್ ಡೆಮಾಕ್ರಾಟಿಕ್ ಮೂವ್ಮೆಂಟ್ ಹಾಗೂ ಮೈತ್ರಿಕೂಟದ 11 ಪಕ್ಷಗಳು ಸದನದಿಂದ ಹೊರ ನಡೆದ ಘಟನೆ ಸಂಭವಿಸಿತು. ಫೈಸಲ್ ವೊದಾ ರಾಜೀನಾಮೆಯಿಂದ ಆಡಳಿತ ಪಕ್ಷದ ಸದಸ್ಯ ಬಲ 181ರಿಂದ 180ಕ್ಕೆ ಇಳಿಕೆಯಾಗಿತ್ತು. ವಿಪಕ್ಷ ಮೈತ್ರಿಕೂಟ 160 ಸದಸ್ಯ ಬಲ ಹೊಂದಿದ್ದು, ಒಂದು ಸ್ಥಾನ ಖಾಲಿಯಿದೆ.
ಪಾಕಿಸ್ತಾನದ ಹಣಕಾಸು ಸಚಿವ ಅಬ್ದುಲ್ ಹಫೀಜ್ ಶೇಖ್ ಅವರು ಚುನಾವಣೆಯಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ಅವರು ಬಹುಮತ ಸಾಬೀತು ಪಡಿಸುವಂತ್ ವಿರೋದ ಪಕ್ಷದವರು ಆಗ್ರಹಿಸಿದ್ದರು.
ಪಾಕಿಸ್ತಾನ್ ಡೆಮಾಕ್ರಾಟಿಕ್ ಮೂವ್ಮೆಂಟ್ ಅಭ್ಯರ್ಥಿ ಯೂಸೂಫ್ ರಾಜಾ ಗಿಲಾನಿ ವಿರುದ್ಧ ಶೇಖ್ ಅವರು ಸೋಲು ಕಂಡಿದ್ದರು. ಇದಾದ ಬಳಿಕ ಇಮ್ರಾನ್ ಅವರು ವಿಶ್ವಾಸಮತ ಯಾಚನೆ ಬಗ್ಗೆ ಆಡಳಿತ ಪಕ್ಷದ ಉಪಾಧ್ಯಕ್ಷ ಖುರೇಶಿ ಅವರು ಪ್ರಕಟಣೆ ಹೊರಡಿಸಿದ್ದರು.

ಬೆನಜೀರ್ ಭುಟ್ಟೋ, ನವಾಜ್ ಷರೀಫ್, ಜಫರುಲ್ಲಾ ಜಮಾಲಿ, ಚೌಧರಿ ಶುಜಾತ್, ಶೌಕತ್ಅಜೀಜ್ ಹಾಗೂ ಯೂಸುಫ್ ರಾಜಾ ಗಿಲಾನಿ ಅವರು ಈ ಹಿಂದೆ ವಿಶ್ವಾಸಮತ ಯಾಚನೆ ಮಾಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications