ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಸ್ಥಿತಿ ಗಂಭೀರ
ಇಸ್ಲಾಮಾಬಾದ್, ಅಕ್ಟೋಬರ್ 29: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ 'ಸಾವು- ಬದುಕಿನ' ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ರಕ್ತದ ಪ್ಲೇಟ್ ಲೆಟ್ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ನವಾಜ್ ಷರೀಫ್ ರ ವೈದ್ಯರು ಮಂಗಳವಾರ ತಿಳಿಸಿದ್ದಾರೆ. ಈಚೆಗೆ ಅವರನ್ನು ತುರ್ತಾಗಿ ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಅರವತ್ತೊಂಬತ್ತು ವರ್ಷದ ನವಾಜ್ ಷರೀಫ್ ಅವರನ್ನು ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಂಚ ವಿರೋಧಿ ದಳದ ವಶದಲ್ಲಿ ಇದ್ದ ಅವರ ಪ್ಲೇಟ್ ಲೆಟ್ ಸಂಖ್ಯೆ ಎರಡು ಸಾವಿರಕ್ಕೆ ಇಳಿದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇನ್ನು ಚಿಕಿತ್ಸೆ ಪಡೆಯುವ ವೇಳೆಯಲ್ಲೇ ಹೃದಯದ ಸಮಸ್ಯೆಯಿಂದ ನರಳುತ್ತಿದ್ದರು.
ಈಚೆಗಿನ ವರದಿ ಪ್ರಕಾರ, ರಕ್ತದಲ್ಲಿನ ಸಕ್ಕರೆ ಮಟ್ಟ ಮತ್ತು ರಕ್ತದೊತ್ತಡದಲ್ಲಿ ಏರಿಕೆಯಾಗಿ ನವಾಜ್ ಷರೀಫ್ ಆರೋಗ್ಯದಲ್ಲಿ ಮತ್ತೂ ಸಮಸ್ಯೆಯಾಗಿತ್ತು. ಭಾನುವಾರ ಒಂದೇ ದಿನ ಅವರ ರಕ್ತದ ಪ್ಲೇಟ್ ಲೆಟ್ ಸಂಖ್ಯೆಯು ನಲವತ್ತೈದು ಸಾವಿರದಿಂದ ಇಪ್ಪತ್ತೈದು ಸಾವಿರಕ್ಕೆ ಇಳಿದಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾದ ಮೇಲೆ ನವಾಜ್ ಷರೀಫ್ ತೂಕ ಏಳು ಕೇಜಿ ತೂಕ ಕಡಿಮೆ ಆಗಿದ್ದಾರೆ. ಆ ಮೂಲಕ ನೂರಾ ಏಳು ಕೇಜಿ ತೂಕ ಇದ್ದವರು ನೂರು ಕೇಜಿಗೆ ಇಳಿದಿದ್ದಾರೆ. ಚೌಧರಿ ಶುಗರ್ ಮಿಲ್ಸ್ ಪ್ರಕರಣದಲ್ಲಿ ನವಾಜ್ ಷರೀಫ್ ಮತ್ತು ಕುಟುಂಬದವರ ವಿಚಾರಣೆಯನ್ನು ರಾಷ್ಟ್ರೀಯ ಉತ್ತರದಾಯಿತ್ವ ಸಂಸ್ಥೆಯು ನಡೆಸುತ್ತಿದೆ.
ಇದಕ್ಕೂ ಮುನ್ನ ಕಳೆದ ವರ್ಷ ಡಿಸೆಂಬರ್ ನಲ್ಲಿ ಅಲ್- ಅಜಿಜಿಯಾ ಸ್ಟೀಲ್ ಮಿಲ್ಸ್ ಭ್ರಷ್ಟಾಚಾರ ಪ್ರಕರಣದಲ್ಲಿ ನವಾಜ್ ಷರೀಫ್ ಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಆ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications