ಯಾರದ್ದೋ ಯುದ್ಧಕ್ಕಾಗಿ ಅಮೆರಿಕ ನಮ್ಮನ್ನು ಬಳಸಿಕೊಂಡಿತು: ಇಮ್ರಾನ್ ಖಾನ್
ಇಸ್ಲಾಮಾಬಾದ್, ಡಿಸೆಂಬರ್ 7: ಪಾಕಿಸ್ತಾನ ಮತ್ತು ಅಮೆರಿಕ ನಡುವಿನ ಮನಸ್ತಾಪ ಇನ್ನಷ್ಟು ಭುಗಿಲೇಳುವ ಸಾಧ್ಯತೆಗಳು ಕಂಡುಬರುತ್ತಿವೆ.
ಪಾಕಿಸ್ತಾನಕ್ಕೆ ನೀಡುತ್ತಿದ್ದ ಸೇನಾ ನೆರವನ್ನು ಕಡಿತಗೊಳಿಸಿದ್ದ ಅಮೆರಿಕ ಅಧ್ಯಕ್ಷ ಡೊನಲ್ಡ್ ಟ್ರಂಪ್, ಇಮ್ರಾನ್ ಖಾನ್ ಅವರೊಂದಿಗೆ ಟ್ವಿಟ್ಟರ್ನಲ್ಲಿ ವಾಗ್ವಾದ ನಡೆಸಿದ್ದರು.
ಅಲ್ಲದೆ, ಅಫ್ಘಾನಿಸ್ತಾನ ಮತ್ತು ದಕ್ಷಿಣ ಏಷ್ಯಾದಲ್ಲಿ ಶಾಂತಿ ಕಾಪಾಡಲು ಪಾಕಿಸ್ತಾನ ಮುಂದಾಗಬೇಕು ಎಂದು ಅಮೆರಿಕ ಒತ್ತಾಯಿಸಿತ್ತು.

ಅಮೆರಿಕದಿಂದ ಒತ್ತಡ ಹೆಚ್ಚುತ್ತಿರುವಂತೆಯೇ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ತಿರುಗೇಟು ನೀಡಿದ್ದಾರೆ. ವಾಷಿಂಗ್ಟನ್ ಪೋಸ್ಟ್ಗೆ ನೀಡಿರುವ ಸಂದರ್ಶನದಲ್ಲಿ ಅವರು ಅಮೆರಿಕದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಲಿಬಾನ್ ಮುಖಂಡರ ಬೆಳವಣಿಗೆಗೆ ಪಾಕಿಸ್ತಾನವೇ ಕಾರಣ ಎಂದ ಟ್ರಂಪ್ ಆರೋಪಿಸಿದ್ದರು. ಆದರೆ, ಪಾಕಿಸ್ತಾನದಲ್ಲಿ ಯಾವ ತಾಲಿಬಾನಿಗಳೂ ಇಲ್ಲ. ನಮ್ಮ ನೆಲದಲ್ಲಿ 2.7 ಮಿಲಿಯನ್ ಆಫ್ಘನ್ ನಿರಾಶ್ರಿತರಿದ್ದಾರೆ. ಅವರಿಗಾಗಿ ಬೃಹತ್ ನಿರಾಶ್ರಿತರ ಶಿಬಿರ ತೆರೆಯಲಾಗಿದೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿಯಲ್ಲಿ ಭಾರಿ ಭದ್ರತೆ, ಕಣ್ಗಾವಲಿದೆ. ಅಮರಿಕದ ಉಪಗ್ರಹಗಳು, ಡ್ರೋಣ್ಗಳಿವೆ. ಈ ಜನರು ಗಡಿ ದಾಟುವುದುನ್ನು ಅದರಲ್ಲಿ ನೋಡಬಹುದು ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿರುವ ತಾಲಿಬಾನಿಗಳನ್ನು ಪಾಕಿಸ್ತಾನ ಪೋಷಿಸುತ್ತಿಲ್ಲ. 9/11ರ ದಾಳಿಗೂ ಪಾಕಿಸ್ತಾನಕ್ಕೂ ಸಂಬಂಧವೇ ಇಲ್ಲ. ಅದರಲ್ಲಿ ಪಾಕಿಸ್ತಾನಿಗಳಾರೂ ಭಾಗಿಯಾಗಿಲ್ಲ. ಅಮೆರಿಕದ ಜೊತೆಗೂಡಿ ಜಿಹಾದಿಗಳ ವಿರುದ್ಧ ಕಾರ್ಯಾಚರಣೆ ಮಾಡಿದ್ದೇವೆ. ಅದಕ್ಕಾಗಿ ಭಾರಿ ಬೆಲೆ ತೆರಬೇಕಿದೆ. ಇಲ್ಲಿಗೆ ಹೂಡಿಕೆದಾರರು ಬರುವುದಿಲ್ಲ. ಕ್ರೀಡಾ ತಂಡಗಳೂ ಕಾಲಿಡುವುದಿಲ್ಲ. ಪಾಕಿಸ್ತಾನವು ಜಗತ್ತಿನಲ್ಲಿ ಅತಿ ಅಪಾಯಕಾರಿ ದೇಶ ಎನಿಸಿಕೊಂಡು ಬಿಟ್ಟಿದೆ.
ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸಲು ಸೇನಾ ಕಾರ್ಯಾಚರಣೆ ಅಗತ್ಯವಿಲ್ಲ ಎಂದು ಹಲವು ವರ್ಷಗಳಿಂದ ಹೇಳಿದ್ದೆ. ಆಗ ನನ್ನನ್ನು 'ತಾಲಿಬಾನ್ ಖಾನ್' ಎಂದು ಕರೆಯಲಾಯಿತು. ನೀವು ಅಮೆರಿಕದ ನೀತಿಗಳನ್ನು ಒಪ್ಪದೆ ಇದ್ದರೆ, ನೀವು ಅಮೆರಿಕ ವಿರೋಧಿ.
ಯಾರದ್ದೋ ಯುದ್ಧಕ್ಕಾಗಿ ಹಣ ಕೊಟ್ಟು ಬಾಡಿಗೆ ಪಿಸ್ತೂಲುದಾರನಾಗಿ ಪಾಕಿಸ್ತಾನವನ್ನು ಬಳಸಿಕೊಳ್ಳುವ ಸಂಬಂಧ ನಮಗೆ ಬೇಡ. ಈ ಪರಿಸ್ಥಿತಿಯಲ್ಲಿ ಮತ್ತೆ ನಾವು ಸಿಲುಕಲು ಬಯಸುವುದಿಲ್ಲ. ಇದು ಜನರ ಜೀವದ ಬೆಲೆ ತೆರವುದು ಮಾತ್ರವಲ್ಲ, ನಮ್ಮ ಬುಡಕಟ್ಟು ಪ್ರದೇಶಗಳ ನಾಶವಾಗುತ್ತದೆ ಜೊತೆಗೆ ನಮ್ಮ ಘನತೆಯೂ ಮಣ್ಣುಪಾಲಾಗುತ್ತದೆ. ನಮಗೆ ಅಮೆರಿಕದೊಂದಿಗೆ ಸೂಕ್ತವಾದ ಸಂಬಂಧ ಬೇಕು ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications