India Vs Pakistan: ಪಹಲ್ಗಾಮ್ ದಾಳಿ ಬಗ್ಗೆ ಅಂತಾರಾಷ್ಟ್ರೀಯ ತನಿಖೆಗೆ ಪಾಕ್ ಒತ್ತಾಯ
ಪಾಕಿಸ್ತಾನಕ್ಕೆ ಎಷ್ಟೇ ಹೇಳಿದರೂ ಬುದ್ಧಿ ಬರಲ್ಲ ಅನ್ನೋದು ಮತ್ತೆ ಮತ್ತೆ ಕನ್ಫರ್ಮ್ ಆಗುತ್ತಿದೆ. ಒಂದು ಕಡೆ ಪಾಕಿಸ್ತಾನದ ಮೂಲಕ ಬಂದಿರುವ ಉಗ್ರರೇ ಕಾಶ್ಮೀರದಲ್ಲಿ ದಾಳಿ ಮಾಡಿದ್ದಾರೆ ಅನ್ನೋದಕ್ಕೆ ಸಾಕ್ಷ್ಯ ಸಿಕ್ಕಿದ್ದರೂ, ಇನ್ನೊಂದು ಕಡೆ ಪಾಕಿಸ್ತಾನ ಮಾತ್ರ ತನ್ನ ಕಿರಿಕ್ ಬಿಡ್ತಾನೇ ಇಲ್ಲ. ಹೀಗಿದ್ದಾಗಲೇ ಮತ್ತೊಂದು ಡಿಮ್ಯಾಂಡ್ ಇಟ್ಟಿರುವ ಪಾಕಿಸ್ತಾನ, ಭಾರತದ ವಿರುದ್ಧ ಅಂತಾರಾಷ್ಟ್ರೀಯ ಸಮುದಾಯವನ್ನು ಎತ್ತಿ ಕಟ್ಟಲು ಮುಂದಾಗಿದೆ.
ಪಾಕಿಸ್ತಾನ ಉಗ್ರರ ಕಾರ್ಖಾನೆ ಆಗಿದ್ದು, ಪದೇ ಪದೇ ಅಲ್ಲಿಂದಲೇ ಉಗ್ರರು ನುಸುಳಿ ಬರ್ತಾ ಇದ್ದಾರೆ. ಈಗಲೂ ಪಾಕಿಸ್ತಾನದ ಮೂಲಕ ನುಗ್ಗಿ ಬಂದಿದ್ದ ಉಗ್ರರು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ದಾಳಿ ನಡೆಸಿ 26 ಜನರನ್ನ ಕೊಲೆ ಮಾಡಿದ್ದಾರೆ. ಪ್ರವಾಸಕ್ಕೆ ಎಂದು ಪಹಲ್ಗಾಮ್ ಪ್ರದೇಶಕ್ಕೆ ಹೋಗಿದ್ದ ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳ ಪ್ರಜೆಗಳು, ಕಾಶ್ಮೀರದ ಸುಂದರ ವಾತಾವರಣದಲ್ಲಿ ಸುತ್ತಾಡುವ ಸಮಯದಲ್ಲೇ ಪಾಪಿ ಉಗ್ರರು ದಿಢೀರ್ ಗನ್ ಹಿಡಿದು ನುಗ್ಗಿ ಅಮಾಯಕರ ಮೇಲೆ ಶೂಟ್ ಮಾಡಿ ಹತ್ಯೆಯನ್ನು ಮಾಡಿದ್ದರು. ಇಂತಹ ಪರಿಸ್ಥಿತಿಯಲ್ಲಿ ಮತ್ತೆ ಪಾಕಿಸ್ತಾನ ಹೊಸ ಕಿರಿಕ್ ತೆಗೆದಿದೆ.

ಅಂತಾರಾಷ್ಟ್ರೀಯ ಸಮುದಾಯಕ್ಕೆ ಪಾಕ್ ಕರೆ!
ಹೌದು, ಅಮೆರಿಕ, ಚೀನಾ, ರಷ್ಯಾ ರೀತಿಯ ದೊಡ್ಡ ದೊಡ್ಡ ದೇಶಗಳ ಸಾಲಿನಲ್ಲಿ ಭಾರತೀಯ ಸೇನೆ ಕೂಡ ಇದ್ದು, ಭಾರತದ ಸೇನೆ ಸಾಕಷ್ಟು ಶಕ್ತಿಶಾಲಿ ಆಗಿದೆ. ಹೀಗಿದ್ದಾಗ ಶತ್ರುಗಳ ನೆಲವನ್ನ ಕ್ಷಣಮಾತ್ರದಲ್ಲಿ ಉಡಾಯಿಸುವ ಶಕ್ತಿ ಭಾರತೀಯ ಸೇನೆಗೆ ಇದೆ. ಪಾಕಿಸ್ತಾನಕ್ಕೆ ಭರ್ಜರಿ 4 ಬಾರಿ ನಮ್ಮ ತಾಕತ್ ಏನು ಅನ್ನೋದನ್ನ ತೋರಿಸಿದೆ ಭಾರತ. ಇಷ್ಟಾದ್ರೂ ಪಾಕಿಸ್ತಾನ ಮಾತ್ರ ಚೇಂಜ್ ಆಗಲೇ ಇಲ್ಲ, ಉಗ್ರರ ಮೂಲಕ ಭಾರತಕ್ಕೆ ತೊಂದರೆ ಕೊಡುತ್ತಲೇ ಬಂದಿರುವ ಈ ಪಾಕಿಸ್ತಾನ ಮತ್ತೆ ಬಾಲ ಬಿಚ್ಚಿದೆ. ಹೀಗಿದ್ದಾಗಲೇ ಪಾಕಿಸ್ತಾನ ಸರ್ಕಾರದ ಕಡೆಯಿಂದ ಅಂತಾರಾಷ್ಟ್ರೀಯ ಸಮುದಾಯವನ್ನು ಕೆಣಕುವ ಕೆಲಸ ಆಗುತ್ತಿದೆ.
ಅಂದಹಾಗೆ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಇದೀಗ ಭಾರತದ ವಿರುದ್ಧ ಮತ್ತೆ ವಿಷ ಕಾರಿದ್ದು, ಅಂತಾರಾಷ್ಟ್ರೀಯ ಸಮುದಾಯ ಮುಂದೆ ಬಂದು ಕಾಶ್ಮೀರ ಘಟನೆ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹ ಮಾಡಿದ್ದಾರೆ. ಅಂತಾರಾಷ್ಟ್ರೀಯ ತನಿಖೆಗೆ ಈಗ ಎಲ್ಲಾ ರೀತಿಯಲ್ಲೂ ಪಾಕಿಸ್ತಾನ ಸಹಕರಿಸಲು ಸಿದ್ಧ ಎಂದಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್, ಪರೋಕ್ಷವಾಗಿ ಭಾರತ & ಪಾಕ್ ವಿಚಾರದಲ್ಲಿ 3ನೇ ದೇಶವನ್ನು ಎಳೆದು ತರುತ್ತಿದ್ದಾರೆ. ಹೀಗಾಗಿ ಖವಾಜಾ ಮುಹಮ್ಮದ್ ಆಸಿಫ್ ಹೇಳಿಕೆ ಮತ್ತಷ್ಟು ಸಂಚಲನ ಸೃಷ್ಟಿ ಮಾಡಿದೆ.
ಗಡಿಯಲ್ಲಿ ಯುದ್ಧಕ್ಕೆ ಶುರುವಾಯ್ತಾ ಸಿದ್ಧತೆ?
ಭಾರತವು ಜಲ ಒಪ್ಪಂದ ಸ್ಥಗಿತಗೊಳಿಸಿದ್ದು ರಾಜಕೀಯ ಉದ್ದೇಶಗಳಿಗೆ ಅಂತಾ ಭಾರಿ ಗಂಭೀರ ಆರೋಪ ಕೂಡ ಮಾಡಿರುವ ಖವಾಜಾ ಮುಹಮ್ಮದ್ ಆಸಿಫ್, ಯಾವುದೇ ಪುರಾವೆಗಳಿಲ್ಲದೆ ಹಾಗೂ ಯಾವುದೇ ತನಿಖೆಯಿಲ್ಲದೆ ಪಾಕಿಸ್ತಾನವನ್ನ ಶಿಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಮತ್ತೊಂದು ಕಡೆ ಪಾಕಿಸ್ತಾನ & ಭಾರತದ ಗಡಿಯಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣ ಆಗಿದೆ. ಎರಡೂ ದೇಶಗಳ ಸೈನಿಕರ ನಡುವೆ ಪದೇ ಪದೇ ಗುಂಡಿನ ದಾಳಿ ನಡೆಯುತ್ತಿದ್ದು, ಹೀಗೆ ಮುಂದುವರಿದರೆ ಮುಂದೆ ಕಷ್ಟ ಕಷ್ಟ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications