ಭಾರತದ ಮೇಲಿದ್ದ ಅಂಚೆ ನಿಷೇಧ ತೆರವುಗೊಳಿಸಿದ ಪಾಕ್
ನವದೆಹಲಿ, ನವೆಂಬರ್ 19: ಭಾರತದ ಮೇಲೆ ಹೇರಿದ್ದ ಅಂಚೆ ನಿಷೇಧವನ್ನು ಪಾಕಿಸ್ತಾನ ಹಿಂಪಡೆದಿದೆ. ಆದರೆ ಪಾರ್ಸೆಲ್ ಸೇವೆ ಮೇಲೆ ನಿಷೇಧ ಮುಂದುವರೆದಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.
ಪಾಕಿಸ್ತಾನ ಯಾವುದೇ ಪೂರ್ವ ಮಾಹಿತಿ ನೀಡದೆ ಉಭಯ ರಾಷ್ಟ್ರಗಳ ನಡುವಿನ ಅಂಚೆ ಸೇವೆಯನ್ನು ಸ್ಥಗಿತಗೊಳಿಸಿತ್ತು. ಈ ಮೂಲಕ ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದೆ. ಆದರೂ ಪಾಕಿಸ್ತಾನ ಪಾಕಿಸ್ತಾನೇ . ಅದು ಯಾವತ್ತೂ ಬದಲಾಗಲ್ಲ ಜೇಂದ್ರ ಸಚಿವರು ತೀವ್ರ ವಾಗ್ದಾಳಿ ನಡೆಸಿದ್ದರು.
ಜಮ್ಮ ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಆಗಸ್ಟ್ 27ರಿಂದ ಪಾಕಿಸ್ತಾನ ಯಾವುದೇ ಅಂಚೆ ಪತ್ರಗಳನ್ನು ಸ್ವೀಕರಿಸುತ್ತಿಲ್ಲ ಮತ್ತು ಕಳುಹಿಸುತ್ತಿರಲಿಲ್ಲ.

ಪಾಕಿಸ್ತಾನ ಅಂತಾರಾಷ್ಟ್ರೀಯ ನಿಯಮಗಳ ವಿಚಾರದಲ್ಲಿ ದ್ವಂದ್ವ ನೀತಿ ಅನುಸರಿಸರಿಸುತ್ತಿತ್ತು. ಕಳೆದ ಮೂರು ತಿಂಗಳಿಂದ ಉಭಯ ದೇಶಗಳ ನಡುವೆ ಅಂಚೆ ಸೇವೆ ನಡೆದಿಲ್ಲ.
ಪಾಕಿಸ್ತಾನ ಅಂಚೆ ಸೇವೆ ಸ್ಥಗಿತಗೊಳಿಸಿದ್ದರಿಂದಾಗಿ ಭಾರತಕ್ಕೆ ಅಲ್ಲಿಂದ ಯಾವುದೇ ಅಂಚೆ ಟಪಾಲು ಬಂದಿರಲಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಮಾಹಿತಿ ನೀಡಿದ್ದರು.
ಈ ಎಲ್ಲ ವಿಚಾರಗಳು ಜಾಗತಿಕ ಪೋಸ್ಟಲ್ ಯೂನಿಯನ್ನ ನಿಯಮಾವಳಿ ವ್ಯಾಪ್ತಿಗೆ ಬರುತ್ತವೆ. ಜಗತ್ತಿನ ಎಲ್ಲ ದೇಶಗಳ ಅಂಚೆ ವ್ಯವಸ್ಥೆ ಈ ನಿಯಮಾವಳಿ ಪ್ರಕಾರವೇ ಕೆಲಸ ಮಾಡುವುದು. ಆದರೆ ಪಾಕಿಸ್ತಾನ ನಿಯಮ ಉಲ್ಲಂಘಿಸಿತ್ತು. ಇದೀಗ ನಿಷೇಧವನ್ನು ಸ್ವಲ್ಪ ಸಡಿಲಿಸಿದೆ ಆದರೂ ಪಾರ್ಸೆಲ್ ಮೇಲೆ ಹೇರಿದ್ದ ನಿಷೇಧವನ್ನು ಹಾಗೆಯೇ ಮುಂದುವರೆಸಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications