Pakistan Bomb Blast: ಭಾರೀ ಬಾಂಬ್ ಸ್ಪೋಟಕ್ಕೆ ತತ್ತರಿಸಿದ ಪಾಕಿಸ್ತಾನ: ಭಯಾನಕ ದೃಶ್ಯ ವೈರಲ್!
ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕಿಸ್ತಾನವೇ ಇಂದು ಬಲಿಪಶುವಾಗಿದೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಇಸ್ಲಾಮಿಕ್ ಪಾರ್ಟಿಯ ರ್ಯಾಲಿಯಲ್ಲಿ ಕಳೆದ ದಿನ ಬಾಂಬ್ ಸ್ಫೋಟ ಸಂಭವಿಸಿದೆ. ಇದರಲ್ಲಿ ಇದುವರೆಗೆ 40ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಸ್ಫೋಟಗಳ ಭಯಾನಕ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಮುನ್ನೆಲೆಗೆ ಬಂದಿವೆ.
ಖೈಬರ್ ಪಖ್ತುಂಖ್ವಾದ ಬಜೌರ್ ಜಿಲ್ಲೆಯಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ (ಜೆಯುಐ-ಎಫ್) ರ ರ್ಯಾಲಿ ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟದ ಸದ್ದಿಗೆ ಇಡೀ ಪ್ರದೇಶದ ಜನರು ಬೆಚ್ಚಿಬಿದ್ದಿದ್ದಾರೆ. ಈ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಫೋಟದ ನಂತರ ವೀಡಿಯೊಗಳು ಮತ್ತು ಚಿತ್ರಗಳು ನಿರಂತರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮುತ್ತಿವೆ. ವಿಡಯೋದಲ್ಲಿ ಸ್ಫೋಟದ ನಂತರ ಭೀಕರ ಬೆಂಕಿ ಗೋಚರಿಸುತ್ತದೆ. ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ. ಸುತ್ತಲೂ ಅವಶೇಷಗಳು ಚಲ್ಲಾಪಿಲ್ಲಿಯಾಗಿ ಬಿದ್ದಿರುವುದನ್ನು ಕಾಣಬಹುದು. ಕೆಲವೆಡೆ ಜನರು ಗಾಯಾಳುಗಳೊಂದಿಗೆ ಓಡುತ್ತಿದ್ದಾರೆ. ಎಲ್ಲೆಡೆ ಗೊಂದಲದ ವಾತಾವರಣವಿದೆ.
#BigBreaking #पाकिस्तान के #खैबर पख्तूनख्वा राज्य के #बाजौर में रैली के दौरान #ब्लास्ट...#Pakistan #Bajaur #Blast #PakistanArmy #KhyberPakhtunkhwa #Death #injury #ViralVideos #breakingvideo pic.twitter.com/bDxutjjnw5
— mithilesh yadav (@mithilesh501) July 30, 2023
ಎಲ್ಲೆಡೆ ಭಯಾನಕ ದೃಶ್ಯ
ಬಜೌರ್ನ ಖಾರ್ನಲ್ಲಿ ನಡೆದ ರಾಜಕೀಯ ಪಕ್ಷವಾದ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ (ಜೆಯುಐ-ಎಫ್) ಕಾರ್ಯಕರ್ತರ ಸಮಾವೇಶವನ್ನು ಭಯೋತ್ಪಾದಕರು ಗುರಿಯಾಗಿಸಿಕೊಂಡರು, ಇದರಲ್ಲಿ ಸ್ಥಳೀಯ ಜೆಯುಐ-ಎಫ್ ನಾಯಕರೊಬ್ಬರು ಕೊಲ್ಲಲ್ಪಟ್ಟಿದ್ದಾರೆ. ಹತ್ಯೆಯಾದ ನಾಯಕನನ್ನು ಜಿಯಾವುಲ್ಲಾ ಜಾನ್ ಎಂದು ಗುರುತಿಸಲಾಗಿದೆ.
35 people dead as a bomb #blast hit a political rally in #Pakistan's northwest #Bajaur district , more than 100 injured. pic.twitter.com/1HlHor1r6y
— Suresh Kumar (@journsuresh) July 30, 2023
ಸ್ಫೋಟದ ನಂತರ ನೂಕುನುಗ್ಗಲಿನಲ್ಲಿ ಜನಸಂದಣಿಯ ಅಡಿ ಸಿಲುಕಿದ ಅನೇಕ ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಳದ ವಿಡಿಯೋದಲ್ಲಿ ಸುತ್ತಲೂ ಬಾಂಬ್ ಸ್ಫೋಟದ ಗುರುತುಗಳಿವೆ. ಜಿಯೋ ನ್ಯೂಸ್ ಪ್ರಕಾರ, ತನಿಖಾಧಿಕಾರಿಗಳಿಗೆ ಮೊದಲ ತನಿಖೆಯಿಂದ ಆತ್ಮಾಹುತಿ ಬಾಂಬ್ ದಾಳಿಯ ಸೂಚನೆ ಸಿಕ್ಕಿದೆ.
ಸ್ಫೋಟ ಹೇಗಾಯಿತು ಗೊತ್ತಾ?
ಬಾಂಬ್ ಸ್ಫೋಟದ ಬಗ್ಗೆ ಖೈಬರ್ ಪಖ್ತುಂಖ್ವಾ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಅಖ್ತರ್ ಹಯಾತ್ ಖಾನ್ ಅವರು ತನಿಖೆಯಿಂದ ಇದೀಗ ಇದು ಆತ್ಮಹತ್ಯಾ ಬಾಂಬ್ ದಾಳಿ ಎಂದು ತಿಳಿದುಬಂದಿದೆ. ಅದೇ ವೇಳೆ ಸ್ಥಳದಿಂದ ಸಂಗ್ರಹಿಸಿದ ಸಾಕ್ಷ್ಯದಿಂದ ಸ್ಪಷ್ಟವಾಗಿ ಗೊತ್ತಾಗಲಿದೆ. ಅಖ್ತರ್ ಹಯಾತ್ ಪ್ರಕಾರ, ಸಮಾವೇಶವನ್ನು ಆಯೋಜಿಸುತ್ತಿದ್ದ ಜಮಿಯತ್ ಉಲೇಮಾ-ಎ-ಇಸ್ಲಾಂ (ಎಫ್) ಪಕ್ಷದ ಮುಖಂಡರನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications