ಅಮೆರಿಕದಲ್ಲಿದ್ದ ಪಾಕ್ ನ ಹಬೀಬ್ ಬ್ಯಾಂಕ್ ಗೆ ಗೇಟ್ ಪಾಸ್
ನ್ಯೂಯಾರ್ಕ್, ಸೆಪ್ಟೆಂಬರ್ 8: ನ್ಯೂಯಾರ್ಕ್ ನಲ್ಲಿರುವ ಪಾಕಿಸ್ತಾನದ ಹಬೀಬ್ ಬ್ಯಾಂಕ್ ಅನ್ನು ಮುಚ್ಚುವಂತೆ ಅಮೆರಿಕ ಬ್ಯಾಂಕಿಂಗ್ ವ್ಯವಸ್ಥೆ ನೋಡಿಕೊಳ್ಳುವ ಪ್ರಾಧಿಕಾರದಿಂದ ಆದೇಶ ಹೊರಬಿದ್ದಿದೆ. ಕಳೆದ ನಲವತ್ತು ವರ್ಷಗಳಿಂದ ಈ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿತ್ತು. ಭಯೋತ್ಪಾದಕರಿಗೆ ಹಣಕಾಸು ನೆರವು ಮತ್ತು ಮನಿ ಲಾಂಡ್ರಿಂಗ್ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪಾಕಿಸ್ತಾನದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಆದ ಹಬೀಬ್ ಬ್ಯಾಂಕ್ ಪದೇಪದೇ ನಿಯಮಾವಳಿಗಳನ್ನು ಮೀರಿದೆ. ಭಯೋತ್ಪಾದನೆಗೆ ಉತ್ತೇಜನ ನೀಡಿದೆ, ಮನಿ ಲಾಂಡ್ರಿಂಗ್ ಮತ್ತು ಇತರ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಆರೋಪ ಇದೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ.

ಹಬೀಬ್ ಬ್ಯಾಂಕ್ ಗೆ 225 ಮಿಲಿಯನ್ ಅಮೆರಿಕನ್ ಡಾಲರ್ ದಂಡವನ್ನು ಬ್ಯಾಂಕ್ ಗೆ ವಿಧಿಸಲಾಗಿದೆ. ಮೊದಲಿಗೆ 629.6 ಮಿಲಿಯನ್ ಅಮೆರಿಕನ್ ಡಾಲರ್ ದಂಡ ವಿಧಿಸುವ ಪ್ರಸ್ತಾವ ಇತ್ತು. 1978ರಿಂದ ಹಬೀಬ್ ಬ್ಯಾಂಕ್ ಅಮೆರಿಕದಲ್ಲಿ ಕಾರ್ಯ ನಿರ್ವಹಿಸುತ್ತಿದೆ. 2006ರಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಿದ ಬಗ್ಗೆ ಗಮನಕ್ಕೆ ಬಂದಿತ್ತು.
ಹಬೀಬ್ ಬಾಂಕ್ ಬಿಲಿಯನ್ ಡಾಲರ್ ಗಳಷ್ಟು ವ್ಯವಹಾರವನ್ನು ಸೌದಿಯ ಖಾಸಗಿ ಬ್ಯಾಂಕ್ ಅಲ್ ರಜಿ ಬ್ಯಾಂಕ್ ನೊಂದಿಗೆ ಮಾಡಿದೆ. ವರದಿಗಳ ಪ್ರಕಾರ ಆ ಬ್ಯಾಂಕ್ ಗೆ ಅಲ್ ಕೈದಾ ಉಗ್ರ ಸಂಘಟನೆಯೊಂದಿಗೆ ನಂಟಿದೆ. ಮನಿ ಲಾಂಡ್ರಿಂಗ್ ಆಗಿಲ್ಲ ಅಥವಾ ಭಯೋತ್ಪಾದನೆಗೆ ಆ ಹಣ ಬಳಸಿಲ್ಲ ಎಂಬುದನ್ನು ಸಾಬೀತು ಪಡಿಸಲು ಹಬೀಬ್ ಬ್ಯಾಂಕ್ ವಿಫಲವಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications