ಪಿಒಕೆಯನ್ನು ಭಾರತದ ಭಾಗ ಎಂದು ತೋರಿಸಿದ್ದ ಪಾಕ್ ಪತ್ರಕರ್ತರ ವಜಾ
ಇಸ್ಲಾಮಾಬಾದ್, ಜೂನ್ 12: ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗ ಎಂದು ತೋರಿಸಿದ್ದ ಪಾಕಿಸ್ತಾನದ ಪಿ ಟಿವಿ ಪತ್ರಕರ್ತರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಪಾಕಿಸ್ತಾನದ ಭೂಪಟವನ್ನು ತಪ್ಪಾಗಿ ತೋರಿಸಿ ಕಾಶ್ಮೀರವನ್ನು ಭಾರತದ ಭಾಗವಾಗಿ ಗುರುತಿಸಿರುವ ಭೂಪಟವನ್ನು ಬಿತ್ತರಿಸಿದ್ದ ಪಿಟಿವಿ ಪತ್ರಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಪಾಕ್ ನ ಸಂಸತ್ ನಿಂದ ಆಗ್ರಹ ವ್ಯಕ್ತವಾಗಿತ್ತು. ಜೂ. ರಂದು ಮಾಹಿತಿ ಮತ್ತು ಪ್ರಸಾರ ವಿಭಾಗದ ಸ್ಥಾಯಿಸಮಿತಿಗೆ ಈ ವಿವಾದವನ್ನು ಕಳಿಸಲಾಗಿತ್ತು.
Recommended Video
ಸಂಸತ್ ನ ಒತ್ತಡದಿಂದಾಗಿ ಪಿ.ಟಿವಿ ಇಬ್ಬರು ಪತ್ರಕರ್ತರ ವಿರುದ್ಧ ಕ್ರಮ ಕೈಗೊಂಡಿದ್ದು ಅವರನ್ನು ವಜಾಗೊಳಿಸಿದೆ. ಪಿಒಕೆಯನ್ನು ಭಾರತದ ಭಾಗವೆಂದು ಇಮ್ರಾನ್ ಸರ್ಕಾರ ವಿವರಿಸಿದೆ. Covid.gov.pok ಎಂಬ ವೆಬ್ಸೈಟ್ ಗ್ರಾಫಿಕ್ಸ್ ಮೂಲಕ ಕೊರೊನಾದ ವ್ಯಾಪ್ತಿಯನ್ನು ವಿವರಿಸಲಾಗಿದೆ. ಈ ನಕ್ಷೆಯ ಫೋಟೋ ನೋಡಿದ ತಕ್ಷಣವೇ ನೆಟ್ಟಿಗರು ಟ್ವಿಟರ್ ನಲ್ಲಿ ಪಾಕಿಸ್ತಾನ ಸರ್ಕಾರವನ್ನು ಟ್ರೋಲ್ ಮಾಡಲು ಆರಂಭಿಸಿದ್ದರು.
ಇದಕ್ಕೂ ಮುನ್ನ ಪಾಕಿಸ್ತಾನವು ಕೊರೊನಾ ಸೋಂಕಿತರನ್ನು ಪಿಒಕೆಗೆ ಶಿಫ್ಟ್ ಮಾಡಲು ಮುಂದಾಗಿತ್ತು. ಇದಕ್ಕೆ ಗಿಲ್ಗಿಟ್-ಬಾಲ್ಟಿಸ್ತಾನದ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆದಿತ್ತು.

ಬೇಜವಾಬ್ದಾರಿ ಸಹಿಸುವುದಿಲ್ಲ
ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಿ.ಟಿವಿ ಬೇಜವಾಬ್ದಾರಿತನವನ್ನು ತಾನು ಸಹಿಸುವುದಿಲ್ಲ ಎಂದು ಹೇಳಿಕೊಂಡಿದ್ದು ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿಯೂ ಹೇಳಿದೆ.

ಪಿಒಕೆ ಭಾರತದ ಭಾಗ ಎಂದು ಘೋಷಿಸಿತ್ತು
ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶ ತನಗೆ ಸೇರಿದ್ದು ಎಂದು ಮೊಂಡುತನ ತೋರುತ್ತಿದ್ದ ಪಾಕಿಸ್ತಾನವು ಸದ್ಯ ಭಾರತದ ಭಾಗವೆಂದು ಘೋಷಿಸಿತ್ತು. ಇತ್ತೀಚೆಗೆ ಭಾರತದ ಹವಾಮಾನ ಬುಲೆಟಿನ್ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನವನ್ನು ಸೇರಿಸಿದಾಗ ಪಾಕಿಸ್ತಾನ ಸಾಕಷ್ಟು ಆಘಾತಕ್ಕೊಳಗಾಗಿತ್ತು.

ಜಮ್ಮು-ಕಾಶ್ಮೀರ ಮತ್ತು ಲಡಾಖ್ ತಾಪಮಾನ
ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಕುರಿತ ತನ್ನ ಹೇಳಿಕೆಯನ್ನು ಅವರು ಪುನರಾವರ್ತಿಸಲು ಪ್ರಾರಂಭಿಸಿತ್ತು. ಜೊತೆಗೆ ಪಾಕ್ ತಮ್ಮ ಹವಾಮಾನ ಬುಲೆಟಿನ್ನಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಖ್ ತಾಪಮಾನವನ್ನು ಹೇಳುವ ಮೂಲಕ ಆಕ್ರೋಶ ಹೊರ ಹಾಕಿತ್ತು. ಆದರೆ ಈಗ ತಾಂತ್ರಿಕ ದೋಷದಿಂದಾಗಿ ಪಾಕಿಸ್ತಾನವು ಪಿಒಕೆಯನ್ನು ಭಾರತದೊಂದಿಗೆ ಸೇರಿಸಿತ್ತು.

ಕೊರೊನಾ ವೈರಸ್ ಮಾಹಿತಿಗೆ ವೆಬ್ಸೈಟ್
ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಲು ಪಾಕಿಸ್ತಾನ ಸರ್ಕಾರವು ವೆಬ್ಸೈಟ್ ಆರಂಭಿದೆ. ಇದರಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಭಾರತದ ಭಾಗವೆಂದು ವಿವರಿಸಲಾಗಿದೆ. ಇಲ್ಲಿಯವರೆಗೆ ಪಾಕಿಸ್ತಾನವು ಪಿಒಕೆ ಮೇಲೆ ತನ್ನ ಅಧಿಕಾರ ಚಲಾಯಿಸಲು ಯತ್ನಿಸಿ ಅಲ್ಲಿ ಚುನಾವಣೆ ನಡೆಸಲು ಆದೇಶಿಸಿತ್ತು. ಈ ಬಗ್ಗೆ ಭಾರತವು ತೀವ್ರ ಪ್ರತಿಭಟನೆ ನಡೆಸಿತ್ತು. ಈಗ ಅಧಿಕೃತ ವೆಬ್ಸೈಟ್ನಲ್ಲಿ
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications