ಫೇಸ್ ಬುಕ್ ನಲ್ಲಿ ಧರ್ಮನಿಂದನೆ ಮಾಡಿದ ವ್ಯಕ್ತಿಗೆ ಪಾಕ್ ನಲ್ಲಿ ಗಲ್ಲು
ಇಸ್ಲಾಮಾಬಾದ್, ಜೂನ್ 13: ಈ ಪ್ರಕರಣ ಪಾಕಿಸ್ತಾನದಲ್ಲಿ ನಡೆದಿದೆ. ಆದರೆ ಇಡೀ ಜಗತ್ತು ಆಶ್ಚರ್ಯ ಪಡುವಂಥ ಸನ್ನಿವೇಶ ಇದು. ಫೇಸ್ ಬುಕ್ ನಲ್ಲಿ ಧರ್ಮ ನಿಂದನೆಯ ಬರಹ ಪ್ರಕಟಿಸಿದ್ದ ಎಂಬ ಆರೋಪದಲ್ಲಿ ಷಿಯಾ ಸಮುದಾಯದ ವ್ಯಕ್ತಿಗೆ ಮರಣದಂಡನೆಯನ್ನೇ ವಿಧಿಸಲಾಗಿದೆ.
ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಈ ಶಿಕ್ಷೆ ನೀಡಿದ್ದು, ಮೂವತ್ತು ವರ್ಷದ ತೈಮೂರ್ ರಜಾ ಎಂಬಾತ ಶಿಕ್ಷೆಗೊಳಗಾದ ವ್ಯಕ್ತಿ. ಪಂಜಾಬ್ ನ ಬಹವಲ್ ಪುರ್ ಜಿಲ್ಲೆಯ ಭಯೋತ್ಪಾದನಾ ನಿಗ್ರಹ ಕೋರ್ಟ್ ಈ ಶಿಕ್ಷೆ ಪ್ರಕಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಧರ್ಮ ನಿಂದನೆ ಮಾಡಿದ ಆರೋಪಕ್ಕೆ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿ ಮಾಡುತ್ತಿರುವ ಮೊದಲ ಪ್ರಕರಣವಿದು.

ಸೈಬರ್ ಕ್ರೈಂ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನವು ಕಠಿಣ ಕಾನೂನನ್ನು ಕಳೆದ ವರ್ಷ ತಂದಿದೆ. ಈ ಕಾನೂನಿಗೆ ಹಲವರು ವಿರೋಧ ಕೂಡ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ವಿಚಾರಗಳಲ್ಲಿ ಎಚ್ಚರಿಕೆ ನೀಡುವಂಥ ಕಾನೂನು ಇರಲು ಯಾರಿಗೂ ತಕರಾರಿಲ್ಲ. ಆದರೆ ಮರಣದಂಡನೆ ತೀರಾ ದುಬಾರಿ ಆಯಿತು. ಅಲ್ಲವೆ?
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications