ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕದನ ವಿರಾಮ ಉಲ್ಲಂಘನೆ ಆರೋಪ:ಭಾರತೀಯ ರಾಜತಾಂತ್ರಿಕ ಅಧಿಕಾರಿಗೆ ಪಾಕ್ ಸಮನ್ಸ್

|
Google Oneindia Kannada News

ಇಸ್ಲಾಮಾಬಾದ್, ನವೆಂಬರ್ 23: ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿರುವ ಆರೋಪದ ಮೇರೆಗೆ ಭಾರತೀಯ ಹಿರಿಯ ರಾಜತಾಂತ್ರಿಕ ಅಧಿಕಾರಿಗೆ ಪಾಕಿಸ್ತಾನ ಸಮನ್ಸ್ ನೀಡಿದೆ.

2003ರ ಕದನ ವಿರಾಮ ನಿಯಮಗಳನ್ನು ಭಾರತ ಗೌರವಿಸಬೇಕು. ಕದನ ವಿರಾಮ ಉಲ್ಲಂಘನೆಯ ಇತರ ಘಟನೆಗಳನ್ನು ತನಿಖೆ ಮಾಡಿ ಮತ್ತು ನಿಯಂತ್ರಣ ಮತ್ತು ಕಾರ್ಯ ಗಡಿಯುದ್ದಕ್ಕೂ ಶಾಂತಿಯನ್ನು ಕಾಪಾಡಿಕೊಳ್ಳಿ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಕುಪ್ವಾರದ ಸೇನಾ ಶಿಬಿರದ ಬಳಿ ಹಿಮಪಾತ: ಓರ್ವ ಯೋಧ ಹುತಾತ್ಮಕುಪ್ವಾರದ ಸೇನಾ ಶಿಬಿರದ ಬಳಿ ಹಿಮಪಾತ: ಓರ್ವ ಯೋಧ ಹುತಾತ್ಮ

ವಿದೇಶಾಂಗ ಕಚೇರಿ ಪ್ರಕಾರ, ಎಲ್‌ಒಸಿಯ ಖುಯಿರಟ್ಟಾ ಸೆಕ್ಟರ್‌ನಲ್ಲಿ ಭಾನುವಾರ ನಡೆದ ಭಾರತೀಯ ಸೇನೆಯ ಯೋಧರು ನಡೆಸಿರುವ ಅಪ್ರಚೋದಿತ ಗುಂಡಿನ ದಾಳಿಯಿಂದಾಗಿ 11 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಆರೋಪಿಸಿದೆ.

Pakistan Summons Senior Indian Diplomat Over Ceasefire Violations

ಈ ವರ್ಷ ಭಾರತವು 2,820 ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ವಿದೇಶಾಂಗ ಕಚೇರಿ ಆರೋಪಿಸಿದೆ. ಇದರ ಪರಿಣಾಮವಾಗಿ 26 ಮಂದಿ ಸಾವನ್ನಪ್ಪಿದ್ದು 245 ಮಂದಿಗೆ ಗಂಭೀರ ಗಾಯಗಳಾಗಿವೆ.

ಉಗ್ರರ ಕಾರ್ಖಾನೆಯಾಗಿರುವ ಪಾಕಿಸ್ತಾನ ಭಾರತಕ್ಕೆ ಉಗ್ರರನ್ನು ರವಾನಿಸುವ ತನ್ನ ಚಾಳಿಯನ್ನು ಎಂದಿನಿಂತೆ ಮುಂದುವರೆಸಿದೆ. ಭಾರತದೊಳಗೆ ನುಸುಳಲು ಉಗ್ರರಿಗೆ ಪಾಕಿಸ್ತಾನವೇ ಸಹಾಯ ಮಾಡಿದೆ ಎಂಬುದಕ್ಕೆ ಸಾಕ್ಷ್ಯ ದೊರೆತಿದೆ.

ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಲು ಪಾಕಿಸ್ತಾನ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಲಿದೆ. ಇತ್ತೀಚೆಗಷ್ಟೇ ಹತ್ಯೆಯಾದ ನಾಲ್ವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಭಾರತಕ್ಕೆ ನುಸುಳಲು ಬಳಿಸಿದ್ದ ಸುರಂಗವನ್ನು ಭಾರತೀಯ ಸೇನಾಪಡೆಗಳು ಪತ್ತೆ ಹಚ್ಚಿದೆ.

English summary
Pakistan on Monday summoned a senior Indian diplomat to register its protest over alleged ceasefire violations by Indian forces along theLine of Control (LoC).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X