ಪಾಕಿಸ್ತಾನಕ್ಕೆ ಭಾರತದ ಸಕ್ಕರೆ, ಹತ್ತಿ ಬೇಕೇ ಬೇಕಂತೆ, ನಿಷೇಧ ರದ್ದಾಗಲಿದೆಯೇ?
ಇಸ್ಲಾಮಾಬಾದ್, ಏಪ್ರಿಲ್ 1: ಪಾಕಿಸ್ತಾನವು ಭಾರತದಿಂದ ಸಕ್ಕರೆ ಹಾಗೂ ಹತ್ತಿಯನ್ನು ಶೀಘ್ರ ಆಮದುಮಾಡಿಕೊಳ್ಳಲಿದೆ ಎಂದು ಪಾಕ್ ಹಣಕಾಸು ಸಚಿವ ಹಮ್ಮದರ್ ಅಜರ್ ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಭಾರತದಿಂದ ಸಕ್ಕರೆ ಮತ್ತು ಹತ್ತಿ ಆಮದಿಗೆ ನಿಷೇಧ ಹೇರಿದ್ದ ಪಾಕಿಸ್ತಾನ ಇದೀಗ ಶೀಘ್ರದಲ್ಲೇ ಸಕ್ಕರೆ ಮತ್ತು ಹತ್ತಿ ಆಮದು ಮಾಡಿಕೊಳ್ಳಲಿದೆ ಎಂದು ಪಾಕಿಸ್ತಾನದ ನೂತನ ಹಣಕಾಸು ಸಚಿವ ಹಮ್ಮದ್ ಅಜರ್ ಹೇಳಿದ್ದಾರೆ.
ಭಾರತದಿಂದ ಸಕ್ಕರೆ ಮತ್ತು ಹತ್ತಿ ವ್ಯಾಪಾರವನ್ನು ಮತ್ತೆ ಆರಂಭಿಸಲು ನಿರ್ಧರಿಸಿದ್ದೇವೆ. ಜೂನ್ ನಿಂದ ಆಮದು ಮಾಡಿಕೊಳ್ಳುತ್ತೇವೆ ಎಂದು ಹಮ್ಮದ್ ಅಜರ್ ತಿಳಿಸಿದ್ದಾರೆ.

ಎರಡು ವರ್ಷಗಳಿಂದ ಸಕ್ಕರೆ, ಹತ್ತಿ ಆಮದಿಗೆ ನಿಷೇಧವಿತ್ತು
ಇನ್ನು ಹತ್ತಿ ನಿಷೇಧದ ಹಿನ್ನಲೆಯಲ್ಲಿ ನಮ್ಮ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳ ಮೇಲೆ ನೇರ ಪರಿಣಾಮ ಬೀರಿತ್ತು. ಅವರ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಹತ್ತಿ ಆಮದಿಗೆ ಸರ್ಕಾರ ಮುಂದಾಗಿದೆ ಎಂದರು.

ಖಾಸಗಿ ವಲಯಕ್ಕೆ 5 ಲಕ್ಷ ಟನ್ ಸಕ್ಕರೆ
ಖಾಸಗಿ ವಲಯಕ್ಕೆ ಭಾರತದಿಂದ ಐದು ಲಕ್ಷ ಟನ್ ಬಿಳಿ ಸಕ್ಕರೆಯನ್ನು ಆಮದು ಮಾಡಿಕೊಳ್ಳಲು ಆರ್ಥಿಕ ಸಮನ್ವಯ ಸಮಿತಿ(ಇಸಿಸಿ)ಯು ಅವಕಾಶ ನೀಡಿದೆ. ಭಾರತದಲ್ಲಿ ಸಕ್ಕರೆಯ ಬೆಲೆ ಸಾಕಷ್ಟು ಕಡಿಮೆ. ಹೀಗಾಗಿ ನಾವು ಮತ್ತೆ ಭಾರತದೊಂದಿಗೆ ವ್ಯಾಪಾರವನ್ನು ಪುನರಾರಂಭಿಸಲು ನಿರ್ಧರಿಸಿದ್ದೇವೆ ಎಂದರು.

ಭಾರತದೊಂದಿಗೆ ಉತ್ತಮ ಬಾಂಧವ್ಯ ಬೇಕು ಎಂದು ಪಾಕ್ ಪತ್ರ
ಪಾಕಿಸ್ತಾನ ಹಾಗೂ ಭಾರತದ ನಡುವೆ ಉತ್ತಮ ಬಾಂಧವ್ಯ ನಿರ್ಮಾಣ ಮಾಡಬೇಕು ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತಕ್ಕೆ ಪತ್ರ ಬರೆದಿದ್ದರು. ಬಹಳ ಮುಖ್ಯವಾಗಿ ಜಮ್ಮು ಮತ್ತು ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳಲು ರಚನಾತ್ಮಕ ಆಧಾರಿತ ಸಂವಾದಕ್ಕೆ ಉತ್ತಮವಾದ ವಾತಾವರಣ ನಿರ್ಮಿಸಬೇಕು ಎಂದು ಕೇಳಿಕೊಂಡಿದ್ದರು.

ಮಾರ್ಚ್ 23 ರಂದು ಭಾರತಕ್ಕೆ ಪತ್ರ
ಮಾರ್ಚ್ 23ರಂದು ನರೇಂದ್ರ ಮೋದಿಯವರು ರಾಷ್ಟ್ರೀಯ ದಿನದ ಸಲುವಾಗಿ ಪಾಕ್ಗೆ ಪತ್ರ ಬರೆದಿದ್ದರು. ಪಾಕಿಸ್ತಾನದೊಂದಿಗೆ ಭಾರತವು 'ಹೃತ್ಪೂರ್ವಕ ಬಾಂಧವ್ಯ' ಹೊಂದಲು ಭಾರತ ಬಯಸಿದೆ. ಆದರೆ ಅದು ಸಾಧ್ಯವಾಗಲು ಭಯೋತ್ಪಾದನೆ ರಹಿತವಾದ 'ವಿಶ್ವಾಸಾರ್ಹ ಪರಿಸರ' ಬಹಳ ಅಗತ್ಯವಾಗಿದೆ ಎಂದು ಹೇಳಿದ್ದರು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications