ಭಾರತದಿಂದ ಸಕ್ಕರೆ, ಹತ್ತಿ ಆಮದು; ಇದ್ದಕ್ಕಿದ್ದಂತೆ ಯು-ಟರ್ನ್ ಹೊಡೆದ ಪಾಕಿಸ್ತಾನ
ಇಸ್ಲಾಮಾಬಾದ್, ಏಪ್ರಿಲ್ 1: ಶೀಘ್ರವೇ ಭಾರತದಿಂದ ಸಕ್ಕರೆ, ಗೋಧಿ ಮತ್ತು ಹತ್ತಿಯನ್ನು ಆಮದು ಮಾಡಿಕೊಳ್ಳುವುದಾಗಿ ಹೇಳಿದ್ದ ಪಾಕಿಸ್ತಾನ ಇದೀಗ ಇದ್ದಕ್ಕಿದ್ದಂತೆ ಯು ಟರ್ನ್ ಹೊಡೆದಿದೆ. ಭಾರತದಿಂದ ವಸ್ತುಗಳನ್ನು ಆಮದು ಮಾಡಿಕೊಳ್ಳುವ ಪಾಕ್ ಸರ್ಕಾರದ ನಡೆಗೆ ವಿರೋಧ ಕೇಳಿಬಂದ ಹಿನ್ನೆಲೆಯಲ್ಲೇ ಈ ನಿರ್ಧಾರ ಪ್ರಕಟಿಸಿದೆ.
ಕಳೆದ ಎರಡು ವರ್ಷಗಳಿಂದ ಭಾರತದಿಂದ ಸಕ್ಕರೆ ಮತ್ತು ಹತ್ತಿ ಆಮದಿಗೆ ನಿಷೇಧ ಹೇರಿದ್ದ ಪಾಕಿಸ್ತಾನ, ಶೀಘ್ರದಲ್ಲೇ ಸಕ್ಕರೆ ಮತ್ತು ಹತ್ತಿ ಆಮದು ಮಾಡಿಕೊಳ್ಳಲಿದೆ ಎಂದು ಪಾಕಿಸ್ತಾನದ ನೂತನ ಹಣಕಾಸು ಸಚಿವ ಹಮ್ಮದ್ ಅಜರ್ ಹೇಳಿದ್ದರು. ಭಾರತದಿಂದ ಸಕ್ಕರೆ ಮತ್ತು ಹತ್ತಿ ವ್ಯಾಪಾರವನ್ನು ಮತ್ತೆ ಆರಂಭಿಸಲು ನಿರ್ಧರಿಸಿದ್ದೇವೆ. ಜೂನ್ ನಿಂದ ಆಮದು ಮಾಡಿಕೊಳ್ಳುತ್ತೇವೆ ಎಂದು ಹಮ್ಮದ್ ಅಜರ್ ತಿಳಿಸಿದ್ದರು. ಆದರೆ ಈ ನಡೆಗೆ ಟೀಕೆ ವ್ಯಕ್ತವಾಗಿತ್ತು. ಕಾಶ್ಮೀರ ಸಮಸ್ಯೆ ಇನ್ನೂ ಇತ್ಯರ್ಥಗೊಳ್ಳದ ಕಾರಣ ಭಾರತದೊಂದಿಗೆ ವ್ಯಾಪಾರ ವಹಿವಾಟು ಆರಂಭಿಸುವ ಕುರಿತು ವಿರೋಧ ಕೇಳಿಬಂದಿತ್ತು. ಈ ಕಾರಣದಿಂದಾಗಿ ನಿರ್ಧಾರ ಬದಲಿಸಿರುವುದಾಗಿ ತಿಳಿದುಬಂದಿದೆ.

ಗುರುವಾರ ಸಚಿವ ಶೇಖ್ ರಶೀದ್ ಅಹ್ಮದ್, ಭಾರತ-ಪಾಕ್ ನಡುವೆ ಕಾಶ್ಮೀರ ವಿಷಯದಲ್ಲಿ ಪರಿಹಾರ ಕಂಡುಕೊಳ್ಳುವವರೆಗೂ ಈ ನಿರ್ಧಾರವನ್ನು ಮುಂದೂಡಲಾಗುವುದು ಎಂದು ತಿಳಿಸಿದ್ದಾರೆ.
2019ರಲ್ಲಿ ಪಾಕಿಸ್ತಾನ ಭಾರತದೊಂದಿಗಿನ ವ್ಯಾಪಾರ ವ್ಯವಹಾರವನ್ನು ನಿಲ್ಲಿಸಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications