ಪಾಕಿಸ್ತಾನ ಐಎಂಎಫ್ಗೆ ಶರಣಾಗಿದೆ: ಜನತೆ ಆಕ್ರೋಶ
ಇಸ್ಲಾಮಾಬಾದ್, ಜನವರಿ 31: ಆರ್ಥಿಕ ದಿವಾಳಿಯತ್ತ ಹೊರಟಿರುವ ಪಾಕಿಸ್ತಾನ ಮಧ್ಯಂತರ ಬಜೆಟ್ ಮಂಡಿಸಿದೆ. ಇದು ದೇಶದ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಐಎಂಎಫ್ (ಇಂಟರ್ನ್ಯಾಷನಲ್ ಮಾನೆಟರಿ ಫಂಡ್)ನ ಷರತ್ತುಗಳಿಗೆ ಪೂರಕವಾಗಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಬಜೆಟ್ ಮಂಡಿಸಿದೆ. ಇದರಿಂದ ಸಾರ್ವಜನಿಕರ ಮೇಲೆ ಭಾರಿ ಪ್ರಮಾಣದ ತೆರಿಗೆ ಹೊಡೆತ ಬೀಳಲಿದೆ ಎನ್ನುವ ಲೆಕ್ಕಾಚಾರ ಆರಂಭವಾಗಿದೆ.
ಹೀಗಾಗಿ ಪಾಕಿಸ್ತಾನೀಯರು ತಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಪ್ರತಿಪಕ್ಷಗಳ ಆರೋಪಗಳ ಪ್ರಕಾರ ನೂತನ ಮಿನಿ ಬಜೆಟ್ನಿಂದ ದೇಶದ ಸಣ್ಣ ಪುಟ್ಟ ಆರ್ಥಿಕ ನೀತಿಯಲ್ಲೂ ಐಎಂಎಫ್ ಹೇಳಿದ ಹಾಗೆ ಕೇಳಬೇಕಾಗುತ್ತದೆ, ಇಮ್ರಾನ್ ಖಾನ್ ಸರ್ಕಾರವು ಪಾಕಿಸ್ತಾನದ ಆರ್ಥಿಕ ನೀತಿಯನ್ನು ಐಎಂಎಫ್ಗೆ ಬರೆದುಕೊಟ್ಟಂತಾಗಿದೆ ಎಂದು ಕಿಡಿಕಾರಿದ್ದಾರೆ.

ಪಾಕಿಸ್ತಾನದ ಆರ್ಥಿಕ ವಿಶ್ಲೇಷಕರ ಪ್ರಕಾರ, ಐಎಂಎಫ್ನ ಬೇಲ್ ಔಟ್ ನೀತಿಯನ್ನು ಒಪ್ಪಿಕೊಂಡಲ್ಲಿ ದೇಶವನ್ನು ಅವರ ಹಿಡಿತಕ್ಕೆ ಕೊಟ್ಟಂತಾಗುತ್ತದೆ, ದೇಶದ ಪ್ರತಿಯೊಂದು ಆರ್ಥಿಕ ನೀತಿಯಲ್ಲೂ ಅವರ ಹಸ್ತಕ್ಷೇಪ ಹೆಚ್ಚುತ್ತದೆ. ಇದರಿಂದ ಪಾಕಿಸ್ತಾನದ ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ. ಪ್ರತಿಪಕ್ಷಗಳ ವಿಶ್ಲೇಷಕರ ಪ್ರಕಾರ ಇಮ್ರಾನ್ ಖಾನ್ ಸರ್ಕಾರವು ಪಾಕಿಸ್ತಾನದ ಜನರನ್ನು ಇನ್ನಷ್ಟು ಗುಲಾಮಗಿರಿಯತ್ತ ದೂಡಿದೆ ಎನ್ನುವ ಆರೋಪ ಕೇಳಿಬಂದಿದೆ.
ಐಎಂಎಫ್ನ ಈ ಷರತ್ತುಗಳನ್ನು ಒಪ್ಪಿಕೊಂಡಿರುವುದರಿಂದ ಪಾಕಿಸ್ತಾನದ ಸ್ಥಿತಿಯು ಅರ್ಜೆಂಟೀನಾ, ಈಕ್ವೆಡಾರ್, ಈಜಿಪ್ಟ್, ಗ್ರೀಸ್, ಕೀನ್ಯಾ, ಜೋರ್ಡನ್, ನೈಜೀರಿಯಾ ಸ್ಥಿತಿಗೆ ಬರಲಿದೆ ಎಂದು ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ.
ಅಂದಹಾಗೆ, ಶ್ರೀಲಂಕಾಗೂ ಐಎಂಎಫ್ ಇದೇ ರೀತಿಯ ಬೇಲ್ ಔಟ್ ಸೂತ್ರವನ್ನು ಪ್ರಸ್ತಾಪಿಸಿತ್ತು, ತನ್ನ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಪ್ರಸ್ತಾಪವನ್ನು ತಿರಸ್ಕರಿಸಿತ್ತು, ಆದರೆ ಪಾಕಿಸ್ತಾನವು ಈ ಕೆಲಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications