ಟಿವಿ ನೇರ ಪ್ರಸಾರದ ಚರ್ಚೆಯಲ್ಲಿ ಪರಸ್ಪರ ಕಪಾಳಮೋಕ್ಷ ಮಾಡಿಕೊಂಡ ಪಾಕಿಸ್ತಾನ ನಾಯಕರು: ವಿಡಿಯೋ ವೈರಲ್
ಟಿವಿ ನೇರ ಪ್ರಸಾರದ ಚರ್ಚೆಯಲ್ಲಿ ಇಬ್ಬರು ಪಾಕಿಸ್ತಾನ ನಾಯಕರು ಕಪಾಳಮೋಕ್ಷ ಮಾಡಿಕೊಂಡ ಘಟನೆ ನಡೆದಿದೆ. ಜಾವೇದ್ ಚೌಧರಿ ಅವರು ಆಯೋಜಿಸಿದ್ದ ಪಾಕಿಸ್ತಾನದ ಜನಪ್ರಿಯ ಟಾಕ್ ಶೋ 'ಕಲ್ ತಕ್'ನಲ್ಲಿ ಈ ಘಟನೆ ನಡೆದಿದೆ.
ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನೊಂದಿಗೆ ಸಂಯೋಜಿತವಾಗಿರುವ ವಕೀಲ ಶೇರ್ ಅಫ್ಜಲ್ ಮರ್ವಾತ್ ಮತ್ತು ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನ ಸೆನೆಟರ್ ಅಫ್ನಾನ್ ಉಲ್ಲಾ ಖಾನ್ ಅವರ ನಡುವೆ ಈ ಮಾರಾಮಾರಿ ನಡೆದಿದೆ.

ಸೆನೆಟರ್ ಅಫ್ನಾನ್ ಉಲ್ಲಾ ಖಾನ್ ಅವರು ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ವಿರುದ್ಧ ಆರೋಪಗಳನ್ನು ಮಾಡಿದರು. ಮಾತಿನ ಚಕಮಕಿ ಶೀಘ್ರದಲ್ಲೇ ನಿಯಂತ್ರಣ ಕಳೆದುಕೊಂಡಿತು. ಈ ಆರೋಪಗಳಿಗೆ ಪ್ರತಿಕ್ರಿಯೆಯಾಗಿ ಮಾರ್ವತ್ ವಾದಗಳನ್ನು ಮಾಡುವ ಬದಲಾಗಿ ದೈಹಿಕ ಹಲ್ಲೆಯನ್ನು ಮಾಡಿದ್ದಾರೆ.
ಮರ್ವಾತ್ ಅವರು ಖಾನ್ ಅವರ ತಲೆಯ ಮೇಲೆ ಹೊಡೆದರು. ಖಾನ್ ಪ್ರತೀಕಾರ ತೀರಿಸಿಕೊಂಡಿದ್ದರಿಂದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಈ ಮಾರಾಮಾರಿ ನೇರವಾಗಿ ಸುದ್ದಿವಾಹಿನಿಯಲ್ಲಿ ಪ್ರಸಾರವಾಗಿದೆ. ಅವರನ್ನು ಬೇರ್ಪಡಿಸಲು ಕಾರ್ಯಕ್ರಮದ ಸಿಬ್ಬಂದಿ ಪ್ರಯತ್ನಗಳ ಹೊರತಾಗಿಯೂ ಕಾದಾಟ ಮುಂದುವರೆದಿದೆ. ವೀಕ್ಷಕರು ಇದನ್ನು ನೇರವಾಗಿ ಕಂಡಿದ್ದಾರೆ.
ವೀಡಿಯೊವನ್ನು ಇಲ್ಲಿ ವೀಕ್ಷಿಸಿ:
یہ لو ویڈیو اگئی ہے۔شیر افضل اور افنان والی pic.twitter.com/pAp30THpYx
— Arslan Baloch (@balochi5252) September 28, 2023
ಘಟನೆಯ ನಂತರ ಇಬ್ಬರೂ ರಾಜಕಾರಣಿಗಳು ತಮ್ಮ ಕ್ರಮಗಳನ್ನು ಸಮರ್ಥಿಸಿಕೊಳ್ಳಲು ಸಾಮಾಜಿಕ ಮಾಧ್ಯಮಗಳ ಮುಂದೆ ಬಂದರು. ಪಿಟಿಐ ನಾಯಕ ಇಮ್ರಾನ್ ಖಾನ್ ವಿರುದ್ಧ ಅಫ್ನಾನ್ ಉಲ್ಲಾ ಬಳಸಿರುವ ಅವಹೇಳನಕಾರಿ ಭಾಷೆಯನ್ನು ಉಲ್ಲೇಖಿಸಿ ಮಾರ್ವತ್ ತಮ್ಮ ಹಿಂಸಾತ್ಮಕ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡರು.
ಮತ್ತೊಂದೆಡೆ, ಸೆನೆಟರ್ ಅಫ್ನಾನ್ ಉಲ್ಲಾ ಖಾನ್ ಅಹಿಂಸೆಯಲ್ಲಿ ತಮ್ಮ ವರ್ತನೆಯನ್ನು ಸಮರ್ಥಿಸಿಕೊಂಡರು. "ನಿನ್ನೆ ನಡೆದ ಟಾಕ್ ಶೋನಲ್ಲಿ ಮಾರ್ವತ್ ನನ್ನ ಮೇಲೆ ದಾಳಿ ಮಾಡಿದರು, ನಾನು ಅಹಿಂಸೆಯನ್ನು ನಂಬುತ್ತೇನೆ. ಆದರೆ ನಾನು ನವಾಜ್ ಷರೀಫ್ ಅವರ ಸೈನಿಕ, ಇದು ವಿಶೇಷವಾಗಿ ಇಮ್ರಾನ್ ಖಾನ್ಗೆ ಪ್ರಮುಖ ಪಾಠವಾಗಿದೆ. ಆಕಾರವನ್ನು ನೋಡಿ ಅವರು ದೊಡ್ಡ ಕಪ್ಪು ಕನ್ನಡಕವನ್ನು ಧರಿಸಬೇಕಾಗುತ್ತದೆ" ಎಂದು ಅವರು ಬರೆದಿದ್ದಾರೆ. ಈ ಘಟನೆಯು ಆನ್ಲೈನ್ನಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದೆ. ಹಿಂಸಾಚಾರವನ್ನು ತಡೆಯಲು ವಿಫಲವಾದ "ಕಲ್ ತಕ್" ನ ಹೋಸ್ಟ್ ಮತ್ತು ಸಿಬ್ಬಂದಿಯನ್ನು ಹಲವರು ಖಂಡಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications