ಲೋಕಸಭೆ ಚುನಾವಣೆ ನಂತರವೇ ಭಾರತದ ಜತೆ ಶಾಂತಿ ಮಾತುಕತೆ: ಇಮ್ರಾನ್ ಖಾನ್
ರಿಯಾದ್ (ಯುಎಇ), ಅಕ್ಟೋಬರ್ 23: ಭಾರತದಲ್ಲಿ ಮುಂದಿನ ಲೋಕಸಭೆ ಚುನಾವಣೆ ಆದ ನಂತರ ಶಾಂತಿ ಮಾತುಕತೆ ನಡೆಸುವುದಾಗಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಸೌದಿ ಅರೇಬಿಯಾದಲ್ಲಿ ನಡೆಯುತ್ತಿರುವ ಹೂಡಿಕೆದಾರರ ಸಮಾವೇಶದಲ್ಲಿ ಅವರು ಈ ಮಾತನ್ನು ಹೇಳಿದ್ದಾರೆ.
"ಚುನಾವಣೆ ಗೆದ್ದು, ಅಧಿಕಾರಕ್ಕೆ ಬಂದ ತಕ್ಷಣ ನಾನು ಮಾಡಿದ ಮೊದಲ ಕೆಲಸ ಏನೆಂದರೆ, ಭಾರತದ ಕಡೆಗೆ ಶಾಂತಿಯ ಹಾಗೂ ಸ್ನೇಹದ ಹಸ್ತ ಚಾಚಿದ್ದು" ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನವು ವಿತ್ತೀಯ ಕೊರತೆ ಅನುಭವಿಸುತ್ತಿದ್ದು, ಅದರಿಂದ ಹೊರಬರಲು ಹಣಕಾಸಿನ ವ್ಯವಸ್ಥೆಗಾಗಿ ಸಮಾವೇಶಕ್ಕೆ ತೆರಳಿದ್ದಾರೆ.
"ಭಾರತದಲ್ಲಿ ಲೋಕಸಭೆ ಚುನಾವಣೆ ಮುಗಿಯುವ ತನಕ ನಾವು ಕಾಯುತ್ತೇವೆ. ಆ ನಂತರ ಶಾಂತಿ ಮಾತುಕತೆಯನ್ನು ಮುಂದುವರಿಸುತ್ತೇವೆ" ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಭಾರತದಲ್ಲಿ ಮುಂದಿನ ಮೇ ತಿಂಗಳ ಮಧ್ಯಭಾಗದಲ್ಲಿ ನಡೆಯುವ ಸಾಧ್ಯತೆ ಇದೆ.

ಇಮ್ರಾನ್ ಖಾನ್ ಶಾಂತಿ ಮಾತುಕತೆ ಬಗ್ಗೆ ಪ್ರಸ್ತಾವ ಮಾಡುತ್ತಿರುವ ಹಿಂದೆ ಇರುವ ಉದ್ದೇಶದ ಬಗ್ಗೆ ವಿಶ್ಲೇಷಣೆ ಮಾಡುವುದಾದರೆ, ಹಣದ ಸಮಸ್ಯೆ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ತುರ್ತಾಗಿ ಮಿತ್ರ ದೇಶಗಳಿಂದ ಹಣಕಾಸಿನ ನೆರವು ಬೇಕು ಎಂಬುದು ಗೊತ್ತಾಗುತ್ತದೆ. ಇನ್ನು ಅದರ ಮಿತ್ರದೇಶಗಳ ಪಟ್ಟಿಯಲ್ಲಿ ಸೌದಿ ಅರೇಬಿಯಾ ಹೆಸರು ಪ್ರಮುಖವಾಗಿದೆ.
ಪಾಕ್ ನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಮಿತ್ರದೇಶಗಳಾದ ಚೀನಾ ಮತ್ತು ಸೌದಿ ಅರೇಬಿಯಾದಿಂದ ಸಾಲ ಕೇಳುತ್ತಲೇ ಇದ್ದಾರೆ. ಭ್ರಷ್ಟ ಅಧಿಕಾರಿಗಳು ಲೂಟಿ ಮಾಡಿದ ಹಣವನ್ನು ವಾಪಸ್ ವಸೂಲಿ ಮಾಡುವುದಾಗಿ ಮಾತು ನೀಡಿರುವ ಇಮ್ರಾನ್ ಖಾನ್, ಹಣ ಉಳಿತಾಯ ಮಾಡುವ ಸಲುವಾಗಿ ವಿವಿಧ ಕ್ರಮಗಳನ್ನು ಸಹ ಕೈಗೊಂಡಿದ್ದಾರೆ.
ಆದರೂ ದೊಡ್ಡ ಮಟ್ಟದಲ್ಲಿ ಯಾವುದೇ ಸಹಾಯ ಆಗುತ್ತಿಲ್ಲ. ಇನ್ನು ಆರ್ಥಿಕ ತಜ್ಞರು ಪರಿಸ್ಥಿತಿಯ 'ತುರ್ತು' ಎಷ್ಟು ಎಂಬುದನ್ನು ವಿವರಿಸಿ, ಶೀಘ್ರ ಕ್ರಮಕ್ಕೆ ಸಲಹೆ ನೀಡುತ್ತಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications