Islamabad: ಇಸ್ಲಾಮಾಬಾದ್ ಘಟನೆಯ ಹೊಣೆ ಹೊತ್ತುಕೊಂಡ ತಾಲಿಬಾನ್...
ಉಗ್ರರನ್ನು ತೊಡೆ ಮೇಲೆ ಕೂರಿಸಿಕೊಂಡು ಊಟ ಮಾಡಿಸುವ ಪಾಕಿಸ್ತಾನ ರಾಜಕೀಯ ನಾಯಕರ ಹುಚ್ಚಾಟದ ಪರಿಣಾಮ ಇದೀಗ ಪಾಪಿ ಪಾಕ್ ಉಗ್ರರ ಕೂಪವಾಗಿದೆ. ಅಕ್ಕಪಕ್ಕದ ದೇಶಗಳಿಗೆ ಇದೇ ಪಾಪಿ ಉಗ್ರರು ದೊಡ್ಡ ಕಂಟಕವಾಗಿದ್ದಾರೆ. ಹೀಗಿದ್ದರೂ, ಪಾಕಿಸ್ತಾನದ ರಾಜಕೀಯ ನಾಯಕರು ಮಾತ್ರ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ.
ಇಂತಹ ಪರಿಸ್ಥಿತಿಯಲ್ಲಿ ಪಾಕಿಸ್ತಾನ ಮತ್ತೆ ಭೀಕರ ಸ್ಫೋಟಕ್ಕೆ ಸಾಕ್ಷಿಯಾಗಿತ್ತು. ಇಸ್ಲಾಮಾಬಾದ್ ಅಟ್ಯಾಕ್ ದೊಡ್ಡ ಕಂಟಕ ತಂದೊಡ್ಡಿದ್ದು, ಪಾಕ್ ಜನರಲ್ಲೇ ಭಯ ಮೂಡಿದೆ. ಇಷ್ಟೆಲ್ಲಾ ಘಟನೆಗಳ ನಡುವೆ ಇಸ್ಲಾಮಾಬಾದ್ ಘಟನೆಯ ಹೊಣೆ ಹೊತ್ತುಕೊಂಡ ತಾಲಿಬಾನ್ ಮತ್ತೊಂದು ಎಚ್ಚರಿಕೆ ನೀಡಿದೆ. ಹಾಗೂ ಪಾಪಿ ಪಾಕಿಸ್ತಾನ ಪ್ರಧಾನಿ ಭಾರತದ ವಿರುದ್ಧ ನೀಡಿದ್ದ ಹೇಳಿಕೆಗೆ ಸರಿಯಾಗೇ ಉತ್ತರ ಸಿಕ್ಕಂತಾಗಿದೆ.

ಇಸ್ಲಾಮಾಬಾದ್ ಬ್ಲಾಸ್ಟ್ ಮಾಡಿದ್ದು ತಾಲಿಬಾನ್
ಪಾಕಿಸ್ತಾನದ ತಾಲಿಬಾನ್ ಇದೀಗ ಇಸ್ಲಾಮಾಬಾದ್ ಡೆಡ್ಲಿ ಬ್ಲಾಸ್ಟ್ ಹೊಣೆಯನ್ನ ಹೊತ್ತುಕೊಂಡಿದೆ. ಡೆಡ್ಲಿ ಬ್ಲಾಸ್ಟ್ನಲ್ಲಿ 12 ಜನರು ಮೃತಪಟ್ಟಿದ್ದಾರೆ. ಹೀಗಾಗಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದ್ದು, ಪಾಕಿಸ್ತಾನದ ಬೇರೆ ಬೇರೆ ಭಾಗದಲ್ಲೂ ದಾಳಿ ನಡೆಯುವ ಆತಂಕ ಮೂಡಿದೆ. ಇದೇ ಸಮಯಕ್ಕೆ ಸರಿಯಾಗಿ ದಿಢೀರ್ ಪಾಕಿಸ್ತಾನದ ತಾಲಿಬಾನ್ ಈ ಸ್ಫೋಟದ ಹೊಣೆ ಹೊತ್ತುಕೊಂಡಿದೆ. ಇನ್ನು ಮತ್ತೊಂದು ಕಡೆ ಪಾಕಿಸ್ತಾನದ ಪ್ರಧಾನಿ ಹುಚ್ಚು ಹಿಡಿದವರಂತೆ ಇಸ್ಲಾಮಾಬಾದ್ ಘಟನೆಗೆ ನಮ್ಮ ಭಾರತವನ್ನು ಹೊಣೆ ಮಾಡಲು ಯತ್ನಿಸಿದ್ದರು. ಆದರೆ ಇದೀಗ ಪಾಕಿಸ್ತಾನದ ನಿಜ ಬಣ್ಣ ಬಯಲು ಆಗಿದೆ. ಹಾಗಾದ್ರೆ ಪಾಪಿ ಪಾಕಿಸ್ತಾನದ ಪ್ರಧಾನಿ ಭಾರತದ ಬಗ್ಗೆ ಏನು ಹೇಳಿದ್ದರು?
ಉಗ್ರ ಪೋಷಕ ಪಾಪಿ ಪಾಕಿಸ್ತಾನ...
ನಿನ್ನೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಭಾರತದ ಬಗ್ಗೆ ಬಾಯಿಗೆ ಬಂದ ಹೇಳಿಕೆ ನೀಡಿದ್ದರು. ಇಸ್ಲಾಮಾಬಾದ್ ಘಟನೆಯಲ್ಲಿ ಭಾರತದ ಪಾತ್ರ ಇದೆ, ಎಂದು ಪಾಕ್ ಪ್ರಧಾನಿ ಹೇಳಿದ್ದು ಬೆಂಕಿ ಹೊತ್ತಿಸಿತ್ತು. ಭಾರತದಿಂದ ಪ್ರಾಯೋಜಿತವಾಗಿ ದಾಳಿ ನಡೆದಿದೆ ಎಂದು ಷರೀಫ್ ಬಾಯಿಗೆ ಬಂದಂತೆ ಹೇಳಿಕೆ ನೀಡಿದ್ದರು. ಪಾಕಿಸ್ತಾನ ಸರ್ಕಾರಿ ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ಆಫ್ ಪಾಕಿಸ್ತಾನ್ ಶೆಹಬಾಜ್ ಷರೀಫ್ ಹೇಳಿಕೆ ಪ್ರಕಟಿಸಿತ್ತು. ಆದರೆ ಇದೀಗ ಸ್ವತಃ ಪಾಕಿಸ್ತಾನದ ತಾಲಿಬಾನ್ ಸಂಘಟನೆ ಸ್ಫೋಟದ ಹೊಣೆ ಹೊತ್ತುಕೊಂಡಿದ್ದು ಪಾಕಿಸ್ತಾನ ಪ್ರಧಾನಿಗೆ ಮುಖಭಂಗ ಮಾಡಿದೆ.
ಒಟ್ನಲ್ಲಿ ಪಾಕಿಸ್ತಾನ ಎಲ್ಲಿಯವರೆಗೂ ಉಗ್ರರನ್ನು ಪೋಷಣೆ ಮಾಡುತ್ತಲೇ ಇರುತ್ತೋ ಅಲ್ಲಿಯ ತನಕ ಇದೇ ರೀತಿ ಸಮಸ್ಯೆ ಗ್ಯಾರಂಟಿ. ಹೀಗಾಗಿ ಪಾಕಿಸ್ತಾನ ತನ್ನ ಬುದ್ಧಿ ಬದಲಾಯಿಸಿಕೊಳ್ಳದೇ ಇದ್ದರೆ ಭವಿಷ್ಯದಲ್ಲಿ ಜಗತ್ತೇ ಒಂದಾಗಿ ಪಾಕಿಸ್ತಾನಕ್ಕೆ ಪಾಠ ಕಲಿಸುವ ಸಾಧ್ಯತೆ ದಟ್ಟವಾಗಿದೆ..
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications