ಗಿಲ್ಗಿಟ್, ಬಲ್ಟಿಸ್ತಾನ ಚುನಾವಣೆ: ಇಮ್ರಾನ್ ನಡೆಗೆ ಪಿಒಕೆ ಜನರಿಂದ ವಿರೋಧ
ನವದೆಹಲಿ, ಮೇ 12:ಗಿಲ್ಗಿಟ್-ಬಾಲ್ಟಿಸ್ತಾನ ನದಲ್ಲಿ ಚುನಾವಣೆ ನಡೆಸಲು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಡೆಗೆ ಪಾಕಿಸ್ತಾನದಲ್ಲೇ ತೀವ್ರ ವಿರೋಧ ವ್ಯಕ್ತವಾಗಿದ್ದು, ಪಿಒಕೆಯ ಮಾನವ ಹಕ್ಕುಗಳ ಕಾರ್ಯಕರ್ತರು ಆಕ್ಷೇಪಿಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮಾತನಾಡುತ್ತಿರುವ ಬೆನ್ನಲ್ಲೇ ಮಹತ್ವದ ಬೆಳವಣಿಗೆ ಇದಾಗಿದೆ.
ಗಿಲ್ಗಿಟ್-ಬಾಲ್ಟಿಸ್ತಾನನ ಜಮ್ಮು-ಕಾಶ್ಮೀರದ ಅವಿಭಾಜ್ಯ ಅಂಗವಾಗಿದ್ದು, 1947 ರಿಂದಲೂ ಪಾಕಿಸ್ತಾನ ಆಕ್ರಮಿಸಿಕೊಂಡಿದೆ. ಶತಾಯ ಗತಾಯ ಗಿಲ್ಗಿಟ್ ಬಾಲ್ಟಿಸ್ಥಾನದಲ್ಲಿ ಚುನಾವಣೆ ನಡೆಸಲು ಪಾಕಿಸ್ತಾನ ಷಡ್ಯಂತ್ರ ರೂಪಿಸಿದೆ ಎಂದು ಬ್ರಿಟನ್ ನಲ್ಲಿರುವ ಪಿಒಜೆಕೆಯ ಮಾನವಹಕ್ಕುಗಳ ಕಾರ್ಯಕರ್ತ ಅಮ್ಜದ್ ಅಯೂಬ್ ಮಿರ್ಜಾ ಹೇಳಿದ್ದಾರೆ.

ಗಿಲ್ಗಿಟ್ ನಲ್ಲಿ ಚುನಾವಣೆ ನಡೆಸುವ ಖಾನ್ ನಡೆಯನ್ನು ಅಕ್ರಮ ಎಂದು ಕರೆದಿರುವ ಪಾಕ್ ಆಕ್ರಮಿತ ಕಾಶ್ಮೀರದ ಮಾನವ ಹಕ್ಕುಗಳ ಕಾರ್ಯಕರ್ತರು, ಪಾಕಿಸ್ತಾನ ಪ್ರಾಯೋಜಿತ ಚುನಾವಣೆಯನ್ನು ಬಹಿಷ್ಕರಿಸುವಂತೆ ಗಿಲ್ಗಿಟ್-ಬಾಲ್ಟಿಸ್ತಾನದ ಜನತೆಗೆ ಕರೆ ನೀಡಿದ್ದಾರೆ.
ಪಾಕಿಸ್ತಾನದ ಈ ಕುಕೃತ್ಯವನ್ನು ಖಂಡಿಸುವುದಾಗಿ ಅಮ್ಜದ್ ಅಯೂಬ್ ಮಿರ್ಜಾ ಹೇಳಿದ್ದಾರೆ.ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ತಾನಗಳಲ್ಲಿ ಸ್ಥಳೀಯ ಚುನಾವಣೆ ನಡೆಸಬೇಕು. ಈ ಬಗ್ಗೆ 2018ರ ಆದೇಶಕ್ಕೆ ತಿದ್ದುಪಡಿ ತರಬೇಕು ಎಂದು ಪಾಕಿಸ್ತಾನ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಕೇಂದ್ರ ಸರ್ಕಾರ ಪ್ರಬಲ ಆಕ್ಷೇಪ ಮಾಡಿದೆ.
ಪಾಕಿಸ್ತಾನ ಬಲವಂತವಾಗಿ ಆತಿಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ಮಾಡುತ್ತಿರುವ ಬದಲಾವಣೆ ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಸ್ಪಷ್ಟವಾಗಿ ವಿದೇಶಾಂಗ ಇಲಾಖೆ ತಿಳಿಸಿದೆ.
ನವ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿಯ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಯಿಸಿಕೊಂಡು ಭಾರತದ ವತಿಯಿಂದ ಕಟು ಶಬ್ದಗಳ ಪ್ರತಿಭಟನೆ ವ್ಯಕ್ತಪಡಿಸಲಾಗಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications