ಪ್ಯಾರಡೈಸ್ ಪೇಪರ್ಸ್ ಹಗರಣ: ಸಮಜಾಯಿಷಿ ನೀಡಿದ ಸಚಿವ ಜಯಂತ್ ಸಿನ್ಹಾ
ಬೆಂಗಳೂರು, ನವೆಂಬರ್ 6 : ಇಂಟರ್ನ್ಯಾಶ್ನಲ್ ಕಾನ್ಸರ್ಟಿಯಂ ಆಫ್ ಜರ್ನಲಿಸ್ಟ್ಸ್, "ಪ್ಯಾರಡೈಸ್ ಪೇಪರ್ಸ್" ಹೆಸರಿನಲ್ಲಿ ಬಿಡುಗಡೆ ಮಾಡಿದ ಹಲವು ದಾಖಲೆಗಳು ವಿಶ್ವದ ಹೆಸರಾಂತ ಕಂಪೆನಿಗಳ ಅವ್ಯವಹಾರವನ್ನು ಬಯಲಿಗೆಳೆದಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿಮಾಡಿದೆ.
ಪ್ರಭಾವಿ ರಾಜಕಾರಣಿಗಳು, ಪ್ರಸಿದ್ಧ ಕಾರ್ಪೋರೇಟ್ ಕಂಪೆನಿಗಳ ಜೊತೆಗೆ ಆಪಲ್, ನೈಕೆ, ಉಬರ್ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ್ದ ಹೆಸರಾಂತ ಕಂಪೆನಿಗಳು ತೆರಿಗೆ ಹಣ ಉಳಿಸಲು ಮಾಡಿದ ಅವ್ಯವಹಾರಗಳು ಈ ಪ್ಯಾರಡೈಸ್ ಪೇಪರ್ಸ್ ನಲ್ಲಿ ದಾಖಲಾಗಿವೆ.

ಕೇಂದ್ರ ವಿಮಾನಯಾನ ಸಚಿವ ಜಯಂತ್ ಸಿನ್ಹಾ ಹೆಸರೂ ಈ ದಾಖಲೆಗಳಲ್ಲಿ ಸೇರಿದೆ ಎಂಬ ಮಾಹಿತಿ ದೊರಕಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಾಣಿಜ್ಯ ಕಾರ್ಯದರ್ಶಿಯ ಹೆಸರೂ ಈ ಹಗರಣದಲ್ಲಿ ಕೇಳಿಬಂದಿದೆ.
ಪ್ಯಾರಡೈಸ್ ಫೇಪರ್ಸ್ ಪ್ರಕರಣದಲ್ಲಿ ತಮ್ಮ ಹೆಸರು ತಳುಕುಹಾಕಿಕೊಂಡಿರುವ ಕುರಿತು ಪ್ರತಿಕ್ರಿಯಿಸಿದ, ಕೇಂದ್ರ ಸಚಿವ ಜಯಂತ್ ಸಿನ್ಹಾ, "ನಾನು ಯಾವುದೇ ವ್ಯವಹಾರವನ್ನು ಕಾನೂನು ಬಾಹಿರವಾಗಿ ಮಾಡಿಲ್ಲ. ಎಲ್ಲಕ್ಕೂ ಸೂಕ್ತ ದಾಖಲೆಗಳಿವೆ. ಈ ಯಾವುದೇ ವ್ಯವಹಾರವನ್ನೂ ನಾನು ವೈಯಕ್ತಿಕ ಲಾಭಕ್ಕಾಗಿ ಮಾಡಿಲ್ಲ" ಎಂದು ಸಮಜಾಯಿಷಿ ನೀಡಿದ್ದಾರೆ.
13.4 ಮಿಲಿಯನ್ ದಾಖಲೆಗಳನ್ನು ಒಳಗೊಂಡಿರುವ ಪ್ಯಾರಡೈಸ್ ಪೇಪರ್ಸ್, ರಷ್ಯಾ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ ವಾಣಿಜ್ಯ ಕಾರ್ಯದರ್ಶಿಯೊಬ್ಬರ ಕೋಟ್ಯಂತರ ಅವ್ಯವಹಾರ, ಕೆನಡಾ ಪ್ರಧಾನಿ ಜಸ್ಟಿನ್ ಟ್ರಡು ಅವರ ಪ್ರಮುಖ ದೇಣಿಗೆದಾರರಲ್ಲೊಬ್ಬರ ರಹಸ್ಯ ವ್ಯವಹಾರಗಳು, ಇಂಗ್ಲೆಂಡಿನ ರಾಣಿಗೆ ಸಂಬಂಧಿಸಿದ ರಹಸ್ಯ ಹಣಕಾಸು ವ್ಯವಹಾರಗಳು ಸೇರಿದಂತೆ ವಿಶ್ವದ 120 ಪ್ರಭಾವಿ ರಾಜಕಾರಣಿಗಳ ಹಗರಣಗಳು ಪ್ಯಾರಡೈಸ್ ಪೇಪರ್ ನಲ್ಲಿ ಅಡಗಿವೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications