ಪಾಕಿಸ್ತಾನದೊಂದಿಗೆ ಶಾಂತಿ ಕಾಯ್ದುಕೊಂಡರೆ ಭಾರತಕ್ಕೆ ಲಾಭ: ಇಮ್ರಾನ್ ಖಾನ್
ಇಸ್ಲಾಮಾಬಾದ್, ಮಾರ್ಚ್ 17: ಪಾಕಿಸ್ತಾನದೊಂದಿಗೆ ಶಾಂತಿ ಕಾಯ್ದುಕೊಂಡರೆ ಭಾರತಕ್ಕೆ ಲಾಭ ಹೆಚ್ಚಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಮಧ್ಯ ಏಷ್ಯಾದ ರಾಷ್ಟ್ರಗಳಾದ ಕಜಕಿಸ್ತಾನ, ಕಿರ್ಗಿಸ್ತಾನ, ತಜಕಿಸ್ತಾನ, ತುರ್ಕಮೆನಿಸ್ತಾನ್ ಹಾಗೂ ಉಜ್ಬೇಕಿಸ್ತಾನಗಳಿಗೆ ಭಾರತವು ಪಾಕಿಸ್ತಾನದ ಮೂಲಕ ನೇರ ಸಂಪರ್ಕ ಸಾಧಿಸಿದರೆ ಭಾರತಕ್ಕೆ ಆರ್ಥಿಕ ಲಾಭವಾಗಲಿದೆ. ಯಾಕೆಂದರೆ ಇವೆಲ್ಲವೂ ತೈಲ ಮತ್ತು ಅನಿಲ ಸಂಪನ್ಮೂಲದಲ್ಲಿ ಶ್ರೀಮಂತವಾಗಿರುವ ದೇಶಗಳಾಗಿವೆ ಎಂದಿದ್ದಾರೆ.
2018ರಲ್ಲಿ ಅಧಿಕಾರಕ್ಕೆ ಬಂದ ನಂತರ ತಮ್ಮ ಸರ್ಕಾರವು ಭಾರತದೊಂದಿಗೆ ಉತ್ತಮ ಸಂಬಂಧ ಸ್ಥಾಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಭಾರತವೂ ಕೂಡ ಎಲ್ಲಾ ರೀತಿಯಲ್ಲಿ ಸಹಕರಿಸಿದೆ ಎಂದು ಹೇಳಿದರು.

ದ್ವೇಷ, ಭಯೋತ್ಪಾದನೆ, ಹಿಂಸಾಚಾರ ಮುಕ್ತ ವಾತಾವರಣದ ಸಂಬಂಧವನ್ನು ಪಾಕಿಸ್ತಾನದೊಂದಿಗೆ ಬಯಸುತ್ತೇವೆ, ಭಯೋತ್ಪಾದನೆ ಹಾಗೂ ಹಗೆತನವಿಲ್ಲದ ವಾತಾವರಣವನ್ನು ಸೃಷ್ಟಿಸುವುದು ಪಾಕಿಸ್ತಾನದ ಕೈಯಲ್ಲಿದೆ ಎಂದು ಭಾರತ ಹೇಳಿತ್ತು.
ಬಗೆಹರಿಯದ ಕಾಶ್ಮೀರ ವಿಷಯವು ಎರಡು ದೇಶಗಳ ನಡುವಿನ ಶಾಂತಿಗೆ ಅಡ್ಡಿಯಾಗಿದೆ. ವಿಶ್ವಸಂಸ್ಥೆಯ ನಿರ್ಣಯಗಳ ಅಡಿಯಲ್ಲಿ ಭಾರತವು ಕಾಶ್ಮೀರಿಗಳಿಗೆ ತಮ್ಮ ಹಕ್ಕನ್ನು ನೀಡಿದರೆ, ಅದು ಪಾಕಿಸ್ತಾನಕ್ಕೆ ಮಾತ್ರವಲ್ಲದೆ ಭಾರತಕ್ಕೂ ಹೆಚ್ಚು ಪ್ರಯೋಜನಕಾರಿಯಾಗಲಿದೆ. ಗಡಿಯಲ್ಲಿ ಶಾಂತಿ ನೆಲೆಸಿದ ಬಳಿಕ ಭಾರತ ಮಧ್ಯ ಏಷ್ಯಾಗೆ ಕಾಲಿಡಬಹುದಾಗಿದೆ.
ಭಾರತವು ಎಲ್ಲದಕ್ಕೂ ಮೊದಲು ಹೆಜ್ಜೆ ಇಡಬೇಕಾಗುತ್ತದೆ, ಭಾರತ ಹಾಗೆ ಮಾಡದಿದ್ದರೆ, ನಾವು ಹೆಚ್ಚಿನದನ್ನು ಮಾಡಲು ಸಾಧ್ಯವಿಲ್ಲ ಎಂದು ಇಮ್ರಾನ್ ಹೇಳಿದ್ದಾರೆ.
Recommended Video
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications